AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಂಗಳೂರು ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾದ ಜೀವಹಾನಿ ತಪ್ಪಿಸಿದ ಆರ್​ಪಿಎಫ್​ ಸಿಬ್ಬಂದಿ, ವಿಡಿಯೋ ವೈರಲ್

ರೈಲು ಬರುತ್ತಿರುವಾಗ ಫ್ಲಾಟ್​ಫಾರ್ಮ್​ನ ಅಂಚಿಗೆ ಬಂದ ವ್ಯಕ್ತಿ ಕಾಲು ಜಾರಿ ಹಳಿಗೆ ಬಿದ್ದ ವ್ಯಕ್ತಿಯನ್ನು ಆರ್​ಪಿಎಫ್ ಸಿಬ್ಬಂದಿ ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗುತ್ತಿದೆ. ಈ ಘಟನೆ ಬೆಂಗಳೂರಿನ ಕೆ.ಆರ್.ಪುರಂ ರೈಲು ನಿಲ್ದಾಣದಲ್ಲಿ ನಡೆದಿದೆ.

Viral Video: ಬೆಂಗಳೂರು ರೈಲು ನಿಲ್ದಾಣದಲ್ಲಿ ಸಂಭವಿಸಬಹುದಾದ ಜೀವಹಾನಿ ತಪ್ಪಿಸಿದ ಆರ್​ಪಿಎಫ್​ ಸಿಬ್ಬಂದಿ, ವಿಡಿಯೋ ವೈರಲ್
ರೈಲು ನಿಲ್ದಾಣದಲ್ಲಿ ತಪ್ಪಿದ ಅವಘಡ
TV9 Web
| Edited By: |

Updated on:Jul 17, 2022 | 4:39 PM

Share

ವೈರಲ್ ವಿಡಿಯೋ: ರೈಲು ಅಪಘಾತಗಳ ಹಾಗೂ ರೈಲು ನಿಲ್ದಾಣಗಳಲ್ಲಿ ನಡೆಯುವ ಅಚಾತುರ್ಯದ ಹಲವು ಘಟನೆಗಳು ನಡೆಯುತ್ತವೆ. ರೈಲು ಬರುವಾಗ ಹಳಿ ದಾಟಬಾರದು ಎಂದು ಜಾಗೃತಿ ಮೂಡಿಸುತ್ತಿದ್ದರೂ ಕೆಲವು ಜನರು ಅದನ್ನು ಲೆಕ್ಕಿಸದೆ ಹಳಿ ದಾಟಲು ಮುಂದಾಗುತ್ತಾರೆ. ಇನ್ನು ಕೆಲವರು ಅವಸರದಲ್ಲಿ ರೈಲು ಹತ್ತಲು ಹೋಗಿ ಹಳಿ ಮೇಲೆ ಬೀಳುತ್ತಾರೆ. ಇಂತಹ ಅನೇಕ ಘಟನೆಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಬೆಂಗಳೂರಿನ ಕೆ.ಆರ್​.ಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದ ಅವಘಡದ ವಿಡಿಯೋ ವೈರಲ್ ಆಗುತ್ತಿದೆ. ರೈಲು ಬರುತ್ತಿರುವಾಗ ಫ್ಲಾಟ್​ಫಾರ್ಮ್​ನ ಅಂಚಿಗೆ ಬಂದ ವ್ಯಕ್ತಿ ಕಾಲು ಜಾರಿ ಹಳಿಗೆ ಬೀಳುತ್ತಾನೆ ಮತ್ತು ಆತನ ರಕ್ಷಣೆ ಮಾಡುವುದನ್ನು ಈ ವೈರಲ್ ವಿಡಿಯೋ (Viral Video) ತೋರಿಸುತ್ತದೆ.

ವೈರಲ್ ಆಗಿರುವ ವೀಡಿಯೊದಲ್ಲಿ ಇರುವಂತೆ, ರೈಲು ನಿಲ್ದಾಣದಲ್ಲಿ ಜನಸಂಧಣಿಯ ನಡುವೆ ಇಬ್ಬರು ಆರ್​ಪಿಎಫ್ ಸಿಬ್ಬಂದಿಗಳು ನಡೆದುಕೊಂಡು ಹೋಗುತ್ತಿರುತ್ತಾರೆ. ರೈಲು ಬರುತ್ತಿದ್ದಾಗ ವ್ಯಕ್ತಿಯೊಬ್ಬ ಹಳಿ ಮೇಲೆ ಜಾರಿ ಬೀಳುತ್ತಾನೆ. ಮೇಲಕ್ಕೆ ಹತ್ತಲು ಯತ್ನಿಸಿದರೂ ಸಾಧ್ಯವಾಗಿದ್ದಾಗ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಗಾಬರಿಗೊಳಗಾದರು. ವಿಚಾರ ತಿಳಿಯುತ್ತಿದ್ದಂತೆ ನಡೆದುಕೊಂಡು ಹೋಗುತ್ತಿದ್ದ ಆರ್​ಪಿಎಫ್​ ಸಿಬ್ಬಂದಿಗಳ ಪೈಕಿ ಒಬ್ಬರು ಓಡಿ ಹೋಗಿ ವ್ಯಕ್ತಿಯನ್ನು ಮೇಲಕ್ಕೆತ್ತುತ್ತಾರೆ. ಇದಾಗಿ ಒಂದೆರಡು ಸೆಕೆಂಡುಗಳಲ್ಲಿ ರೈಲು ಪಾಸಾಗುತ್ತದೆ.

ಈ ವಿಡಿಯೋವನ್ನು ರೈಲ್ವೆ ಸಚಿವಾಲಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ರೈಲು ಬರುವ ಕೆಲವೇ ನಿಮಿಷಗಳಲ್ಲಿ ಹಳಿಗಳ ಮೇಲೆ ಜಾರಿ ಬಿದ್ದ ವ್ಯಕ್ತಿಯ ಅಮೂಲ್ಯ ಜೀವವನ್ನು ಆರ್‌ಪಿಎಫ್ ಸಿಬ್ಬಂದಿಯ ತ್ವರಿತ ಪ್ರತಿಕ್ರಿಯೆಯಿಂದ ರಕ್ಷಿಸಲಾಗಿದೆ” ಎಂದು ಶೀರ್ಷಿಕೆ ನೀಡಿದೆ. ವಿಡಿಯೋ ವೈರಲ್ ಪಡೆದು ಇದುವರೆಗೆ 3.63 ಲಕ್ಷ ವೀಕ್ಷಣೆಗಳನ್ನು ಪಡೆದಿದ್ದು, 15ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಈ ವೀಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡರೂ ಹಳಿಗೆ ಬಿದ್ದ ವ್ಯಕ್ತಿ ಪ್ರಾಣ ಹೋಗುತ್ತಿತ್ತು ಎಂದು ಹೇಳಿರುವ ನೆಟ್ಟಿಗರು, ಆರ್​ಪಿಎಫ್​ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

Published On - 4:37 pm, Sun, 17 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್