AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಝಿಯಾಬಾದ್​ನ ಅಪಾರ್ಟ್​ಮೆಂಟ್​ನಲ್ಲಿ ಬೀದಿನಾಯಿಗಳಿಗಾಗಿ ಹೋರಾಟ

Dog Lover : ಸೊಸೈಟಿಯ ಆವರಣದಲ್ಲಿರುವ ಬೀದಿನಾಯಿಗಳನ್ನು ಗೋಣಿಚೀಲದಲ್ಲಿ ಕಟ್ಟಿ ಹೊರಹಾಕಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ನಾಯಿಪ್ರೇಮಿಗಳ ಗುಂಪು ಅಪಾರ್ಟ್​ಮೆಂಟ್​ನ ಕ್ಷೇಮಾಭಿವೃದ್ಧಿ ಸಂಘದೊಂದಿಗೆ ಹೋರಾಟಕ್ಕಿಳಿದಿದೆ.

ಗಾಝಿಯಾಬಾದ್​ನ ಅಪಾರ್ಟ್​ಮೆಂಟ್​ನಲ್ಲಿ ಬೀದಿನಾಯಿಗಳಿಗಾಗಿ ಹೋರಾಟ
ಹೊಡೆದಾಟಕ್ಕಿಳಿದ ಪ್ರಾಣಿಪ್ರೇಮಿಗಳು ಮತ್ತು ಅಪಾರ್ಟ್​ಮೆಂಟ್​ನ ಆಡಳಿತ ಮಂಡಳಿ ಸದಸ್ಯರು
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jan 12, 2023 | 4:35 PM

Viral Video : ನಾಯಿಪ್ರೇಮಿಗಳಿಗೆ ಯಾವ ನಾಯಿಯಾದರೂ ಒಂದೇ. ನಿತ್ಯದ ಒಡನಾಡಿಗಳಂತೆ ಪರಸ್ಪರ ಒಂದು ಬಾಂಧವ್ಯ ವೃದ್ಧಿಯಾಗಿರುತ್ತದೆ. ಆದರೆ ಇದ್ದಕ್ಕಿದ್ದಂತೆ ನಾಳೆಯಿಂದ ಬೀದಿನಾಯಿಗಳು ಈ ಪ್ರದೇಶದಲ್ಲಿ ಪ್ರವೇಶಿಸುವಂತಿಲ್ಲ ಎಂದು ಫರಮಾನು ಹೊರಡಿಸಿದರೆ? ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಗಾಝಿಯಾಬಾದ್​ನ ರಿವರ್ ಹೈಟ್ಸ್​ ಅಪಾರ್ಟ್​ಮೆಂಟ್​ನ ಕ್ಷೇಮಾಭಿವೃದ್ಧಿ ಸಂಘವು ಬೀದಿನಾಯಿಗಳಿಗೆ ನಿಷೇಧ ಹೇರಿದ್ದಕ್ಕೆ ಅಲ್ಲಿನ ನಾಯಿಪ್ರೇಮಿಗಳು ಹೋರಾಟಕ್ಕೆ ಇಳಿದಿದ್ದಾರೆ. ಹೋರಾಟವು ಕ್ರಮೇಣ ಕೈಕೈ ಮಿಲಾಯಿಸುವ ಹಂತಕ್ಕೆ ತಿರುಗಿದೆ.

ಪೊಲೀಸರ ಪ್ರಕಾರ ರಿವರ್​ ಹೈಟ್ಸ್​​ ಸೊಸೈಟಿಯ ನಾಯಿಪ್ರೇಮಿಗಳ ಗುಂಪು ಆಡಳಿತ ಮಂಡಳಿಯ ನಿರ್ಧಾರವನ್ನು ಖಂಡಿಸಿ ಈ ಹೋರಾಟಕ್ಕೆ ಇಳಿದಿದೆ. ಹೋರಾಟವು ಜಗಳದ ಸ್ವರೂಪ ಪಡೆದುಕೊಂಡಿದೆ. ಸೊಸೈಟಿಯ ಆವರಣದಲ್ಲಿರುವ ಬೀದಿನಾಯಿಗಳನ್ನು ಗೋಣಿಚೀಲದಲ್ಲಿ ಕಟ್ಟಿ ಹೊರಹಾಕಲಾಗುತ್ತಿದೆ ಎಂದು ವರದಿಯಾಗಿದೆ. ಪೂನಂ ಕಶ್ಯಪ್​ನೇತೃತ್ವದ ನಾಯಿಪ್ರೇಮಿಗಳ ಗುಂಪು ಈ ಅಮಾನವೀಯ ಕ್ರಮವನ್ನು ವಿರೋಧಿಸಿದಾಗ ಪರಸ್ಪರ ವಾಗ್ವಾದ ಉಂಟಾಗಿದೆ. ನಂತರ ಅದು ತೀವ್ರವಾಗಿ ಹೀಗೆ ಜಗಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

ಒಂದು ಮಹಿಳೆಯರ ಗುಂಪು ಪೂನಂ ಅವರ ಕೂದಲನ್ನು ಹಿಡಿದೆಳೆಯುವುದು, ಕಪಾಳಿಗೆ ಹೊಡೆಯುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಬೀದಿನಾಯಿಗಳನ್ನು ಹೊರಹಾಕಬಾರದು ಎಂಬ ಹೋರಾಟಕ್ಕೆ ಪೂನಂ ಕುಮ್ಮಕ್ಕು ನೀಡಿದ್ದಾರೆ ಎಂದು ಅಪಾರ್ಟ್​ಮೆಂಟ್​ನ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಬೋಧ​ ತ್ಯಾಗಿ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೂನಂ, ಹೌದು ನಾನು ಎನಿಮಲ್​ ವೆಲ್​ಫೇರ್​ ಅಸೋಸಿಯೇಷನ್​ನ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ. ಅಷ್ಟೇ ಅಲ್ಲ ತ್ಯಾಗಿ ವಿರುದ್ಧ ಆರೋಪಕಗಳ ಪಟ್ಟಿಯನ್ನೇ ಪೊಲೀಸರಿಗೆ ನೀಡಿದ್ದಾರೆ. ಈ ವಿಷಯವಾಗಿ ಸಮಗ್ರವಾಗಿ ತನಿಖೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್​ ದುಬೆ ಹೇಳಿದ್ದಾರೆ.

ಇದನ್ನೂ ಓದಿ : ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ

ಈ ಹಿಂದೆ ದೆಹಲಿಯ ಎನ್​ಸಿಆರ್​ ಪ್ರದೇಶದಲ್ಲಿ ಬೀದಿನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡಿರುವ ಪ್ರಕರಣಗಳು ಮತ್ತು ಎಲಿವೇಟರ್​​ನಲ್ಲಿ ಜನರನ್ನು ಕಚ್ಚಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಪಾರ್ಟ್​​ಮೆಂಟ್​ ಕ್ಷೇಮಾಭಿವೃದ್ಧಿ ಸಂಘವು ಈ ತೀರ್ಮಾನವನ್ನು ತೆಗೆದುಕೊಂಡಿತ್ತು. ಆದರೆ ನಾಯಿಪ್ರೇಮಿಗಳು ಮಾತ್ರ ಈ ತೀರ್ಮಾನವನ್ನು ವಿರೋಧಿಸುತ್ತಿದ್ಧಾರೆ.

ಈ ಸುದ್ದಿ ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್