AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಝಿಯಾಬಾದ್​ನ ಅಪಾರ್ಟ್​ಮೆಂಟ್​ನಲ್ಲಿ ಬೀದಿನಾಯಿಗಳಿಗಾಗಿ ಹೋರಾಟ

Dog Lover : ಸೊಸೈಟಿಯ ಆವರಣದಲ್ಲಿರುವ ಬೀದಿನಾಯಿಗಳನ್ನು ಗೋಣಿಚೀಲದಲ್ಲಿ ಕಟ್ಟಿ ಹೊರಹಾಕಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ನಾಯಿಪ್ರೇಮಿಗಳ ಗುಂಪು ಅಪಾರ್ಟ್​ಮೆಂಟ್​ನ ಕ್ಷೇಮಾಭಿವೃದ್ಧಿ ಸಂಘದೊಂದಿಗೆ ಹೋರಾಟಕ್ಕಿಳಿದಿದೆ.

ಗಾಝಿಯಾಬಾದ್​ನ ಅಪಾರ್ಟ್​ಮೆಂಟ್​ನಲ್ಲಿ ಬೀದಿನಾಯಿಗಳಿಗಾಗಿ ಹೋರಾಟ
ಹೊಡೆದಾಟಕ್ಕಿಳಿದ ಪ್ರಾಣಿಪ್ರೇಮಿಗಳು ಮತ್ತು ಅಪಾರ್ಟ್​ಮೆಂಟ್​ನ ಆಡಳಿತ ಮಂಡಳಿ ಸದಸ್ಯರು
TV9 Web
| Edited By: ಶ್ರೀದೇವಿ ಕಳಸದ|

Updated on: Jan 12, 2023 | 4:35 PM

Share

Viral Video : ನಾಯಿಪ್ರೇಮಿಗಳಿಗೆ ಯಾವ ನಾಯಿಯಾದರೂ ಒಂದೇ. ನಿತ್ಯದ ಒಡನಾಡಿಗಳಂತೆ ಪರಸ್ಪರ ಒಂದು ಬಾಂಧವ್ಯ ವೃದ್ಧಿಯಾಗಿರುತ್ತದೆ. ಆದರೆ ಇದ್ದಕ್ಕಿದ್ದಂತೆ ನಾಳೆಯಿಂದ ಬೀದಿನಾಯಿಗಳು ಈ ಪ್ರದೇಶದಲ್ಲಿ ಪ್ರವೇಶಿಸುವಂತಿಲ್ಲ ಎಂದು ಫರಮಾನು ಹೊರಡಿಸಿದರೆ? ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಗಾಝಿಯಾಬಾದ್​ನ ರಿವರ್ ಹೈಟ್ಸ್​ ಅಪಾರ್ಟ್​ಮೆಂಟ್​ನ ಕ್ಷೇಮಾಭಿವೃದ್ಧಿ ಸಂಘವು ಬೀದಿನಾಯಿಗಳಿಗೆ ನಿಷೇಧ ಹೇರಿದ್ದಕ್ಕೆ ಅಲ್ಲಿನ ನಾಯಿಪ್ರೇಮಿಗಳು ಹೋರಾಟಕ್ಕೆ ಇಳಿದಿದ್ದಾರೆ. ಹೋರಾಟವು ಕ್ರಮೇಣ ಕೈಕೈ ಮಿಲಾಯಿಸುವ ಹಂತಕ್ಕೆ ತಿರುಗಿದೆ.

ಪೊಲೀಸರ ಪ್ರಕಾರ ರಿವರ್​ ಹೈಟ್ಸ್​​ ಸೊಸೈಟಿಯ ನಾಯಿಪ್ರೇಮಿಗಳ ಗುಂಪು ಆಡಳಿತ ಮಂಡಳಿಯ ನಿರ್ಧಾರವನ್ನು ಖಂಡಿಸಿ ಈ ಹೋರಾಟಕ್ಕೆ ಇಳಿದಿದೆ. ಹೋರಾಟವು ಜಗಳದ ಸ್ವರೂಪ ಪಡೆದುಕೊಂಡಿದೆ. ಸೊಸೈಟಿಯ ಆವರಣದಲ್ಲಿರುವ ಬೀದಿನಾಯಿಗಳನ್ನು ಗೋಣಿಚೀಲದಲ್ಲಿ ಕಟ್ಟಿ ಹೊರಹಾಕಲಾಗುತ್ತಿದೆ ಎಂದು ವರದಿಯಾಗಿದೆ. ಪೂನಂ ಕಶ್ಯಪ್​ನೇತೃತ್ವದ ನಾಯಿಪ್ರೇಮಿಗಳ ಗುಂಪು ಈ ಅಮಾನವೀಯ ಕ್ರಮವನ್ನು ವಿರೋಧಿಸಿದಾಗ ಪರಸ್ಪರ ವಾಗ್ವಾದ ಉಂಟಾಗಿದೆ. ನಂತರ ಅದು ತೀವ್ರವಾಗಿ ಹೀಗೆ ಜಗಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

ಒಂದು ಮಹಿಳೆಯರ ಗುಂಪು ಪೂನಂ ಅವರ ಕೂದಲನ್ನು ಹಿಡಿದೆಳೆಯುವುದು, ಕಪಾಳಿಗೆ ಹೊಡೆಯುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಬೀದಿನಾಯಿಗಳನ್ನು ಹೊರಹಾಕಬಾರದು ಎಂಬ ಹೋರಾಟಕ್ಕೆ ಪೂನಂ ಕುಮ್ಮಕ್ಕು ನೀಡಿದ್ದಾರೆ ಎಂದು ಅಪಾರ್ಟ್​ಮೆಂಟ್​ನ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಬೋಧ​ ತ್ಯಾಗಿ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೂನಂ, ಹೌದು ನಾನು ಎನಿಮಲ್​ ವೆಲ್​ಫೇರ್​ ಅಸೋಸಿಯೇಷನ್​ನ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ. ಅಷ್ಟೇ ಅಲ್ಲ ತ್ಯಾಗಿ ವಿರುದ್ಧ ಆರೋಪಕಗಳ ಪಟ್ಟಿಯನ್ನೇ ಪೊಲೀಸರಿಗೆ ನೀಡಿದ್ದಾರೆ. ಈ ವಿಷಯವಾಗಿ ಸಮಗ್ರವಾಗಿ ತನಿಖೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್​ ದುಬೆ ಹೇಳಿದ್ದಾರೆ.

ಇದನ್ನೂ ಓದಿ : ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ

ಈ ಹಿಂದೆ ದೆಹಲಿಯ ಎನ್​ಸಿಆರ್​ ಪ್ರದೇಶದಲ್ಲಿ ಬೀದಿನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡಿರುವ ಪ್ರಕರಣಗಳು ಮತ್ತು ಎಲಿವೇಟರ್​​ನಲ್ಲಿ ಜನರನ್ನು ಕಚ್ಚಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಅಪಾರ್ಟ್​​ಮೆಂಟ್​ ಕ್ಷೇಮಾಭಿವೃದ್ಧಿ ಸಂಘವು ಈ ತೀರ್ಮಾನವನ್ನು ತೆಗೆದುಕೊಂಡಿತ್ತು. ಆದರೆ ನಾಯಿಪ್ರೇಮಿಗಳು ಮಾತ್ರ ಈ ತೀರ್ಮಾನವನ್ನು ವಿರೋಧಿಸುತ್ತಿದ್ಧಾರೆ.

ಈ ಸುದ್ದಿ ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್