AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಹಿಮಾವೃತ ಕಾಡಿನಲ್ಲಿ ಭಾಂಗ್ರಾ ನೃತ್ಯದ ಮೂಲಕ ಕ್ರಿಸ್​ಮಸ್​ ಶುಭಾಶಯ

Merry Christmas : ಸಾಮಾಜಿಕ ಜಾಲತಾಣಗಳ ಇನ್​ಫ್ಲ್ಯೂಯೆನ್ಸರ್​, ಕೆನಡಾದ ನಿವಾಸಿ ಗುರುದೀಪ್​ ಪಂಧೇರ್​ ಕೆನಡಾದ ಹಿಮಾಚ್ಛಾದಿತ ಕಾಡಿನಲ್ಲಿ ಭಾಂಗ್ರಾ ನೃತ್ಯ ಮಾಡುವ ಮೂಲಕ ಕ್ರಿಸ್​ಮಸ್​ ಶುಭಾಶಯ ಕೋರಿದ್ದಾರೆ.

ಕೆನಡಾದ ಹಿಮಾವೃತ ಕಾಡಿನಲ್ಲಿ ಭಾಂಗ್ರಾ ನೃತ್ಯದ ಮೂಲಕ ಕ್ರಿಸ್​ಮಸ್​ ಶುಭಾಶಯ
ಕೆನಡಾದ ಹಿಮಾಚ್ಛಾದಿತ ಕಾಡಿನಲ್ಲಿ ನರ್ತಿಸುತ್ತಿರುವ ಗುರುದೀಪ್ ಪಂಧೇರ್
TV9 Web
| Edited By: |

Updated on:Dec 26, 2022 | 1:00 PM

Share

Viral Video : ಕೆನಡಾದಲ್ಲಿ ವಾಸವಾಗಿರುವ ಗುರುದೀಪ್​ ಪಂಧೇರ್ ಎಂಬ ಸೋಶಿಯಲ್ ಮೀಡಿಯಾ ಇನ್​ಫ್ಲ್ಯೂಯೆನ್ಸರ್ ಹಿಮದಿಂದ ಆವರಿಸಿದ ಕೆನಡಾದ ಕಾಡಿನಲ್ಲಿ ಭಾಂಗ್ರಾ ನೃತ್ಯ ಮಾಡುವುದರ ಮೂಲಕ ಕ್ರಿಸ್​ಮಸ್​ ಶುಭಾಶಯಗಳನ್ನು ಕೋರಿದ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಇವರ ಪೋಷಾಕನ್ನು, ಕೆನಡಾದ ಹಿಮಪರಿಸರವನ್ನು ಎಲ್ಲಕ್ಕಿಂತ ಹೆಚ್ಚಾಗಿ ಇವರ ಉತ್ಸಾಹ ಮತ್ತು ಇವರ ನೃತ್ಯವನ್ನು ಆಸ್ವಾದಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಭಾಂಗ್ರಾ ನೃತ್ಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವಲ್ಲಿ ಇವರು ಕಾರಣಕರ್ತರಾಗಿದ್ದಾರೆ. -30 ಡಿಗ್ರಿ ಸೆಲ್ಸಿಯಸ್ ಹವಾಮಾನದಲ್ಲಿಯೂ ಇವರು ಹೀಗೆ ಉತ್ಸಾಹದಿಂದ ಹೆಜ್ಜೆ ಹಾಕಿರುವುವುದು ನೆಟ್ಟಿಗರಲ್ಲಿ ಸ್ಫೂರ್ತಿ ತುಂಬಿದೆ.

‘ಯುಕಾನ್​ನ ಅರಣ್ಯದಿಂದ ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಸಂತೋಷ, ಭರವಸೆ ಮತ್ತು ಉತ್ತಮ ದಿನಗಳು ನಿಮ್ಮವಾಗಲಿ’ ಎಂಬ ಸಂದೇಶದೊಂದಿಗೆ ನೃತ್ಯ ಪ್ರದರ್ಶನ ಮಾಡಿದ್ದಾರೆ ಪಂಧೇರ್.

ಈ ವಿಡಿಯೋ ಅನ್ನು ಸುಮಾರು 2.5 ಲಕ್ಷ ಜನರು ವೀಕ್ಷಿಸಿದ್ದಾರೆ. 5,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. 500ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ನೋಡಿ : ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್

ನಿಮ್ಮೊಳಗ ಉಕ್ಕುತ್ತಿರುವ ಸಂತೋಷ ನಮಗೆಲ್ಲ ಸ್ಫೂರ್ತಿಯಾಗಿದೆ ಎಂದಿದ್ದಾರೆ ಅನೇಕರು. ಗುರುದೀಪ್​ ನೀವು ಅದ್ಭುತ, ಎಂದಿಗೂ ನೀವು ಇದೇ ರೀತಿಯಲ್ಲಿ ಯಶಸ್ವಿಯಾಗಿ ಸಂತೋಷವನ್ನು ಹಂಚುತ್ತ ಬಂದಿದ್ದೀರಿ, ನಿಮಗೂ ಶುಭಾಶಯ ಎಂದಿದ್ದಾರೆ ಕೆಲವರು. ಚಿಯರ್ಸ್​! ಯಾವಾಗಲೂ ನೀವು ನಮ್ಮನ್ನು ನಗಿಸುತ್ತೀರಿ, ಪಾಸಿಟಿವ್​ ವೈಬ್ಸ್​ ಹರಡುತ್ತೀರಿ, ಇದು ಜಗತ್ತಿಗೆ ಬೇಕು ಎಂದಿದ್ದಾರೆ. ರಕ್ತದ ಉತ್ತಮ ಪರಿಚಲನೆಗೆ ಮತ್ತು ಅದರಿಂದ ಉಕ್ಕುವ ಸಂಭ್ರಮಕ್ಕೆ ಭಾಂಗ್ರಾಗಿಂತ ಬೇರೆ ಏನೂ ಇಲ್ಲ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:47 pm, Mon, 26 December 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ