AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಂಜ ಹಿಡಿಯಲು ಹೋಗಿ ಚಿರತೆ ಬೋನಿಗೆ ಬಿದ್ದ ಭೂಪ, ಅಯ್ಯೋ ಕಾಪಾಡಿ ಸರ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಬೋನಿಗೆ ಬಿದ್ದ ಆ ವ್ಯಕ್ತಿ ಅರಣ್ಯ ಅಧಿಕಾರಿಗಳಲ್ಲಿ ಇಲ್ಲಿಂದ ನನ್ನನ್ನು ಹೊರಗೆ ಕರೆದುಕೊಂಡು ಹೋಗಿ ಎಂದು ಕೇಳುತ್ತಿರುವಂತೆ ತೋರುತ್ತದೆ.

Viral Video: ಹುಂಜ ಹಿಡಿಯಲು ಹೋಗಿ ಚಿರತೆ ಬೋನಿಗೆ ಬಿದ್ದ ಭೂಪ, ಅಯ್ಯೋ ಕಾಪಾಡಿ ಸರ್
ವೈರಲ್ ವಿಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Feb 27, 2023 | 4:02 PM

Share

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಬೋನಿಗೆ ಬಿದ್ದ ಆ ವ್ಯಕ್ತಿ ಅರಣ್ಯ ಅಧಿಕಾರಿಗಳಲ್ಲಿ ಇಲ್ಲಿಂದ ನನ್ನನ್ನು ಹೊರಗೆ ಕರೆದುಕೊಂಡು ಹೋಗಿ ಎಂದು ಕೇಳುತ್ತಿರುವಂತೆ ತೋರುತ್ತದೆ. ಚಿರತೆಯ ಕಾಟ ಹೆಚ್ಚಾಗಿದ್ದ ಹಳ್ಳಿಯೊಂದರಲ್ಲಿ ಅಳವಡಿಸಲಾಗಿದ್ದ ಲೋಹದ ದೊಡ್ಡ ಬೋನಿನೊಳಗೆ ಚಿರತೆಯ ಬದಲಿಗೆ ಒಬ್ಬ ವ್ಯಕ್ತಿಯು ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್‌ಶರ್‌ನ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು ಚಿತ್ರೀಕರಿಸಲಾದ ವೀಡಿಯೋದಲ್ಲಿ ಆ ವ್ಯಕ್ತಿ ಬೋನಿನ ಹಸಿರು ಬಾರ್‌ಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ಅರಣ್ಯ ಅಧಿಕಾರಿಗಳನ್ನು ನನ್ನನ್ನು ಬೋನಿಂದ ಹೊರಗೆ ಕರೆದುಕೊಂಡು ಹೋಗುವಂತೆ ಕೇಳಿಕೊಳ್ಳುವುದನ್ನು ಈ ವಿಡಿಯೊದಲ್ಲಿ ಕಾಣಬಹುದು. ಚಿರತೆಗಾಗಿ ಬಲೆ ಬೀಸಲೆಂದು ಇರಿಸಿದ ಬೋನಿನೊಳಗೆ ಹುಂಜವೊಂದು ಸೇರಿಕೊಂಡಿತ್ತು. ಆ ಹುಂಜವನ್ನು ಹಿಡಿಯಲು ವ್ಯಕ್ತಿಯೊಬ್ಬ ಬೋನಿನೊಳಗೆ ಹೋಗಿದ್ದಾನೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ. ಆ ವ್ಯಕ್ತಿ ಬೋನಿನೊಳಗೆ ಇದ್ದ ಹುಂಜವನ್ನು ತೆಗೆಯಲು ಪ್ರಯತ್ನಿಸಿದ್ದ ತಕ್ಷಣವೇ ಬೋನಿನ ಬಾಗಿಲು ಮುಚ್ಚಿದೆ ಎಂದು ಸ್ಥಳೀಯ ವರದಿಗಳು ಹೇಳುತ್ತವೆ.

ಚಿರತೆ ಸ್ಥಳೀಯವಾಗಿ ತಿರುಗಾಡುತ್ತಿರುವ ಬಗ್ಗೆ ನಮಗೆ ಮಾಹಿತಿ ದೊರೆತ ನಂತರ ನಾವು ಚಿರತೆಯನ್ನು ಹಿಡಿಯಲು ಬೋನನ್ನು ಇಟ್ಟಿದ್ದೇವೆ. ಈ ಬೋನನ್ನು ಇರಿಸುವ ಮೊದಲು ಸ್ವಲ್ಪ ಸಮಯ ಚಿರತೆಗಾಗಿ ಹುಡುಕಾಟ ಕೂಡಾ ನಡೆಸಿದ್ದೇವೆ’ ಎಂದು ಅರಣ್ಯ ಇಲಾಖೆಯ ಅದಿಕಾರಿ ರಾಧೇಶ್ಯಾಮ್ ANI ತಿಳಿಸಿದೆ.

ಈ ಘಟನೆಯ ವೀಡಿಯೋವನ್ನು ANI ಉತ್ತರಖಂಡ ಸುದ್ದಿ ಸಂಸ್ಥೆ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಚಿರತೆಗಳು ಮತ್ತು ಇತರ ಕಾಡು ಪ್ರಾಣಿಗಳು ಹಳ್ಳಿಗಳು ಮತ್ತು ನಗರಗಳಲ್ಲಿ ಅಲೆದಾಡುವುದು ಸಾಮಾನ್ಯವಾಗಿದೆ. ಇತ್ತೀಚಿಗಷ್ಟೇ ಯುಪಿಯ ಗಾಜಿಯಾಬಾದ್‌ನ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಘಟನೆ ನಡೆದಿದೆ. ಹಾಗೂ ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಇದೀಗ ಚಿರತೆ ಸೆರೆ ಸಿಕ್ಕಿದೆ ಎಂದು ಹೇಳಿದ್ದಾರೆ.

Published On - 4:02 pm, Mon, 27 February 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!