AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಂಜ ಹಿಡಿಯಲು ಹೋಗಿ ಚಿರತೆ ಬೋನಿಗೆ ಬಿದ್ದ ಭೂಪ, ಅಯ್ಯೋ ಕಾಪಾಡಿ ಸರ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಬೋನಿಗೆ ಬಿದ್ದ ಆ ವ್ಯಕ್ತಿ ಅರಣ್ಯ ಅಧಿಕಾರಿಗಳಲ್ಲಿ ಇಲ್ಲಿಂದ ನನ್ನನ್ನು ಹೊರಗೆ ಕರೆದುಕೊಂಡು ಹೋಗಿ ಎಂದು ಕೇಳುತ್ತಿರುವಂತೆ ತೋರುತ್ತದೆ.

Viral Video: ಹುಂಜ ಹಿಡಿಯಲು ಹೋಗಿ ಚಿರತೆ ಬೋನಿಗೆ ಬಿದ್ದ ಭೂಪ, ಅಯ್ಯೋ ಕಾಪಾಡಿ ಸರ್
ವೈರಲ್ ವಿಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Feb 27, 2023 | 4:02 PM

Share

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಬೋನಿಗೆ ಬಿದ್ದ ಆ ವ್ಯಕ್ತಿ ಅರಣ್ಯ ಅಧಿಕಾರಿಗಳಲ್ಲಿ ಇಲ್ಲಿಂದ ನನ್ನನ್ನು ಹೊರಗೆ ಕರೆದುಕೊಂಡು ಹೋಗಿ ಎಂದು ಕೇಳುತ್ತಿರುವಂತೆ ತೋರುತ್ತದೆ. ಚಿರತೆಯ ಕಾಟ ಹೆಚ್ಚಾಗಿದ್ದ ಹಳ್ಳಿಯೊಂದರಲ್ಲಿ ಅಳವಡಿಸಲಾಗಿದ್ದ ಲೋಹದ ದೊಡ್ಡ ಬೋನಿನೊಳಗೆ ಚಿರತೆಯ ಬದಲಿಗೆ ಒಬ್ಬ ವ್ಯಕ್ತಿಯು ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್‌ಶರ್‌ನ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು ಚಿತ್ರೀಕರಿಸಲಾದ ವೀಡಿಯೋದಲ್ಲಿ ಆ ವ್ಯಕ್ತಿ ಬೋನಿನ ಹಸಿರು ಬಾರ್‌ಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ಅರಣ್ಯ ಅಧಿಕಾರಿಗಳನ್ನು ನನ್ನನ್ನು ಬೋನಿಂದ ಹೊರಗೆ ಕರೆದುಕೊಂಡು ಹೋಗುವಂತೆ ಕೇಳಿಕೊಳ್ಳುವುದನ್ನು ಈ ವಿಡಿಯೊದಲ್ಲಿ ಕಾಣಬಹುದು. ಚಿರತೆಗಾಗಿ ಬಲೆ ಬೀಸಲೆಂದು ಇರಿಸಿದ ಬೋನಿನೊಳಗೆ ಹುಂಜವೊಂದು ಸೇರಿಕೊಂಡಿತ್ತು. ಆ ಹುಂಜವನ್ನು ಹಿಡಿಯಲು ವ್ಯಕ್ತಿಯೊಬ್ಬ ಬೋನಿನೊಳಗೆ ಹೋಗಿದ್ದಾನೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ. ಆ ವ್ಯಕ್ತಿ ಬೋನಿನೊಳಗೆ ಇದ್ದ ಹುಂಜವನ್ನು ತೆಗೆಯಲು ಪ್ರಯತ್ನಿಸಿದ್ದ ತಕ್ಷಣವೇ ಬೋನಿನ ಬಾಗಿಲು ಮುಚ್ಚಿದೆ ಎಂದು ಸ್ಥಳೀಯ ವರದಿಗಳು ಹೇಳುತ್ತವೆ.

ಚಿರತೆ ಸ್ಥಳೀಯವಾಗಿ ತಿರುಗಾಡುತ್ತಿರುವ ಬಗ್ಗೆ ನಮಗೆ ಮಾಹಿತಿ ದೊರೆತ ನಂತರ ನಾವು ಚಿರತೆಯನ್ನು ಹಿಡಿಯಲು ಬೋನನ್ನು ಇಟ್ಟಿದ್ದೇವೆ. ಈ ಬೋನನ್ನು ಇರಿಸುವ ಮೊದಲು ಸ್ವಲ್ಪ ಸಮಯ ಚಿರತೆಗಾಗಿ ಹುಡುಕಾಟ ಕೂಡಾ ನಡೆಸಿದ್ದೇವೆ’ ಎಂದು ಅರಣ್ಯ ಇಲಾಖೆಯ ಅದಿಕಾರಿ ರಾಧೇಶ್ಯಾಮ್ ANI ತಿಳಿಸಿದೆ.

ಈ ಘಟನೆಯ ವೀಡಿಯೋವನ್ನು ANI ಉತ್ತರಖಂಡ ಸುದ್ದಿ ಸಂಸ್ಥೆ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಚಿರತೆಗಳು ಮತ್ತು ಇತರ ಕಾಡು ಪ್ರಾಣಿಗಳು ಹಳ್ಳಿಗಳು ಮತ್ತು ನಗರಗಳಲ್ಲಿ ಅಲೆದಾಡುವುದು ಸಾಮಾನ್ಯವಾಗಿದೆ. ಇತ್ತೀಚಿಗಷ್ಟೇ ಯುಪಿಯ ಗಾಜಿಯಾಬಾದ್‌ನ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಘಟನೆ ನಡೆದಿದೆ. ಹಾಗೂ ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಇದೀಗ ಚಿರತೆ ಸೆರೆ ಸಿಕ್ಕಿದೆ ಎಂದು ಹೇಳಿದ್ದಾರೆ.

Published On - 4:02 pm, Mon, 27 February 23

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್