AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಂಜ ಹಿಡಿಯಲು ಹೋಗಿ ಚಿರತೆ ಬೋನಿಗೆ ಬಿದ್ದ ಭೂಪ, ಅಯ್ಯೋ ಕಾಪಾಡಿ ಸರ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಬೋನಿಗೆ ಬಿದ್ದ ಆ ವ್ಯಕ್ತಿ ಅರಣ್ಯ ಅಧಿಕಾರಿಗಳಲ್ಲಿ ಇಲ್ಲಿಂದ ನನ್ನನ್ನು ಹೊರಗೆ ಕರೆದುಕೊಂಡು ಹೋಗಿ ಎಂದು ಕೇಳುತ್ತಿರುವಂತೆ ತೋರುತ್ತದೆ.

Viral Video: ಹುಂಜ ಹಿಡಿಯಲು ಹೋಗಿ ಚಿರತೆ ಬೋನಿಗೆ ಬಿದ್ದ ಭೂಪ, ಅಯ್ಯೋ ಕಾಪಾಡಿ ಸರ್
ವೈರಲ್ ವಿಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:Feb 27, 2023 | 4:02 PM

Share

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಬೋನಿಗೆ ಬಿದ್ದ ಆ ವ್ಯಕ್ತಿ ಅರಣ್ಯ ಅಧಿಕಾರಿಗಳಲ್ಲಿ ಇಲ್ಲಿಂದ ನನ್ನನ್ನು ಹೊರಗೆ ಕರೆದುಕೊಂಡು ಹೋಗಿ ಎಂದು ಕೇಳುತ್ತಿರುವಂತೆ ತೋರುತ್ತದೆ. ಚಿರತೆಯ ಕಾಟ ಹೆಚ್ಚಾಗಿದ್ದ ಹಳ್ಳಿಯೊಂದರಲ್ಲಿ ಅಳವಡಿಸಲಾಗಿದ್ದ ಲೋಹದ ದೊಡ್ಡ ಬೋನಿನೊಳಗೆ ಚಿರತೆಯ ಬದಲಿಗೆ ಒಬ್ಬ ವ್ಯಕ್ತಿಯು ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್‌ಶರ್‌ನ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು ಚಿತ್ರೀಕರಿಸಲಾದ ವೀಡಿಯೋದಲ್ಲಿ ಆ ವ್ಯಕ್ತಿ ಬೋನಿನ ಹಸಿರು ಬಾರ್‌ಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ಅರಣ್ಯ ಅಧಿಕಾರಿಗಳನ್ನು ನನ್ನನ್ನು ಬೋನಿಂದ ಹೊರಗೆ ಕರೆದುಕೊಂಡು ಹೋಗುವಂತೆ ಕೇಳಿಕೊಳ್ಳುವುದನ್ನು ಈ ವಿಡಿಯೊದಲ್ಲಿ ಕಾಣಬಹುದು. ಚಿರತೆಗಾಗಿ ಬಲೆ ಬೀಸಲೆಂದು ಇರಿಸಿದ ಬೋನಿನೊಳಗೆ ಹುಂಜವೊಂದು ಸೇರಿಕೊಂಡಿತ್ತು. ಆ ಹುಂಜವನ್ನು ಹಿಡಿಯಲು ವ್ಯಕ್ತಿಯೊಬ್ಬ ಬೋನಿನೊಳಗೆ ಹೋಗಿದ್ದಾನೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸುದ್ದಿ ಸಂಸ್ಥೆ ANIಗೆ ತಿಳಿಸಿದ್ದಾರೆ. ಆ ವ್ಯಕ್ತಿ ಬೋನಿನೊಳಗೆ ಇದ್ದ ಹುಂಜವನ್ನು ತೆಗೆಯಲು ಪ್ರಯತ್ನಿಸಿದ್ದ ತಕ್ಷಣವೇ ಬೋನಿನ ಬಾಗಿಲು ಮುಚ್ಚಿದೆ ಎಂದು ಸ್ಥಳೀಯ ವರದಿಗಳು ಹೇಳುತ್ತವೆ.

ಚಿರತೆ ಸ್ಥಳೀಯವಾಗಿ ತಿರುಗಾಡುತ್ತಿರುವ ಬಗ್ಗೆ ನಮಗೆ ಮಾಹಿತಿ ದೊರೆತ ನಂತರ ನಾವು ಚಿರತೆಯನ್ನು ಹಿಡಿಯಲು ಬೋನನ್ನು ಇಟ್ಟಿದ್ದೇವೆ. ಈ ಬೋನನ್ನು ಇರಿಸುವ ಮೊದಲು ಸ್ವಲ್ಪ ಸಮಯ ಚಿರತೆಗಾಗಿ ಹುಡುಕಾಟ ಕೂಡಾ ನಡೆಸಿದ್ದೇವೆ’ ಎಂದು ಅರಣ್ಯ ಇಲಾಖೆಯ ಅದಿಕಾರಿ ರಾಧೇಶ್ಯಾಮ್ ANI ತಿಳಿಸಿದೆ.

ಈ ಘಟನೆಯ ವೀಡಿಯೋವನ್ನು ANI ಉತ್ತರಖಂಡ ಸುದ್ದಿ ಸಂಸ್ಥೆ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಚಿರತೆಗಳು ಮತ್ತು ಇತರ ಕಾಡು ಪ್ರಾಣಿಗಳು ಹಳ್ಳಿಗಳು ಮತ್ತು ನಗರಗಳಲ್ಲಿ ಅಲೆದಾಡುವುದು ಸಾಮಾನ್ಯವಾಗಿದೆ. ಇತ್ತೀಚಿಗಷ್ಟೇ ಯುಪಿಯ ಗಾಜಿಯಾಬಾದ್‌ನ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಘಟನೆ ನಡೆದಿದೆ. ಹಾಗೂ ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಇದೀಗ ಚಿರತೆ ಸೆರೆ ಸಿಕ್ಕಿದೆ ಎಂದು ಹೇಳಿದ್ದಾರೆ.

Published On - 4:02 pm, Mon, 27 February 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ