AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

Shocking Video: ಎರಡು ಹಾವುಗಳನ್ನು ಮನೆಗೆ ತಂದ ಆತ ತನಗೆ ರಕ್ಷಣೆ ನೀಡು ಎಂದು ಆ ಹಾವುಗಳಿಗೆ ರಾಖಿ ಕಟ್ಟಿದ್ದ. ಆದರೆ, ಅದಾದ ಕೆಲವೇ ಸೆಕೆಂಡುಗಳಲ್ಲಿ ಒಂದು ಹಾವು ಆತನ ಕೈಗೆ ಕಚ್ಚಿದ್ದರಿಂದ ಆತ ವಿಷ ಕಾರಿ ಸಾವನ್ನಪ್ಪಿದ್ದಾನೆ.

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ
ಹಾವಿಗೆ ರಾಖಿ ಕಟ್ಟಿದ ಬಿಹಾರಿ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 23, 2021 | 5:08 PM

Share

ರಕ್ಷಾಬಂಧನದ ದಿನ ಅಣ್ಣ, ತಮ್ಮಂದಿರಿಗೆ ರಾಖಿ ಕಟ್ಟುವುದು ಭಾರತೀಯರ ಸಂಸ್ಕೃತಿ. ಸಹೋದರರಿಗೆ ರಾಖಿ ಕಟ್ಟಿ, ಸಿಹಿ ತಿನ್ನಿಸುವ ಮೂಲಕ ಜೀವನಪೂರ್ತಿ ತಮಗೆ ರಕ್ಷೆ ನೀಡುವಂತೆ ಸೋದರಿಯರು ಕೇಳಿಕೊಳ್ಳುವ ದಿನವಿದು. ಈಗೀಗ ಮನೆಯಲ್ಲಿ ತಮಗೆ ರಕ್ಷಣೆ ನೀಡುವ, ಸೋದರರಂತೆ ಜೊತೆಗಿರುವ ನಾಯಿ, ಬೆಕ್ಕುಗಳಿಗೆ ಕೂಡ ಜನರು ರಾಖಿ ಕಟ್ಟುವ ಸಂಪ್ರದಾಯ ಶುರುವಾಗಿದೆ. ಆದರೆ, ಇಲ್ಲೊಬ್ಬ ಆಸಾಮಿ ವಿಷಕಾರಿ 2 ಹಾವುಗಳಿಗೆ ರಾಖಿ ಕಟ್ಟಿದ್ದಾನೆ. ಹಾವುಗಳಿಗೆ ರಾಖಿ ಕಟ್ಟಿದ ಮರುಕ್ಷಣವೇ ವಿಷ ಕಾರಿ ಸಾವನ್ನಪ್ಪಿದ್ದಾನೆ. ಈ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಭಾರತದಲ್ಲಿ ಕಳೆದ 20 ವರ್ಷಗಳಲ್ಲಿ 12 ಲಕ್ಷ ಜನರು ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಅಂದರೆ, ವರ್ಷಕ್ಕೆ 58,000 ಜನರು ಹಾವು ಕಚ್ಚಿದ ಕಾರಣಕ್ಕೆ ಸಾವನ್ನಪ್ಪುತ್ತಿದ್ದಾರೆ. ಆದರೆ, ಹಾವು ಕಚ್ಚಿ ಸಾವನ್ನಪ್ಪಿರುವ ಬಿಹಾರದ ಈ ವ್ಯಕ್ತಿಯ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಯಾಕೆಂದರೆ ಈತ ಮಹಾನ್ ಸಾಧನೆ ಮಾಡುತ್ತೇನೆಂದು ಹಾವುಗಳನ್ನು ಹಿಡಿದು ಅದಕ್ಕೆ ರಾಖಿ ಕಟ್ಟಿ, ಅದೇ ಹಾವುಗಳಿಂದ ಸಾವನ್ನಪ್ಪಿದ್ದಾನೆ!

ಬಿಹಾರ ರಾಜ್ಯದ ಸರನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮನಮೋಹನ್ ಎಂಬ ಬಿಹಾರಿ ವ್ಯಕ್ತಿ ಈ ಬಾರಿ ರಕ್ಷಾಬಂಧನವನ್ನು ವಿಭಿನ್ನವಾಗಿ ಆಚರಣೆ ಮಾಡಲು ನಿರ್ಧರಿಸಿದ್ದ. ಹೀಗಾಗಿ, ಎರಡು ಹಾವುಗಳನ್ನು ಮನೆಗೆ ತಂದ ಆತ ತನಗೆ ರಕ್ಷಣೆ ನೀಡು ಎಂದು ಆ ಹಾವುಗಳಿಗೆ ರಾಖಿ ಕಟ್ಟಿದ್ದ. ಆದರೆ, ಅದಾದ ಕೆಲವೇ ಸೆಕೆಂಡುಗಳಲ್ಲಿ ಒಂದು ಹಾವು ಆತನ ಕೈಗೆ ಕಚ್ಚಿದ್ದರಿಂದ ಆತ ವಿಷ ಕಾರಿ ಸಾವನ್ನಪ್ಪಿದ್ದಾನೆ. ವಿಭಿನ್ನವಾಗಿ ರಕ್ಷಾಬಂಧನ ಆಚರಿಸಲು ಹೋದ ವ್ಯಕ್ತಿ ಇಹಲೋಕವನ್ನೇ ತ್ಯಜಿಸಿದ್ದಾನೆ.

25 ವರ್ಷದ ಮನಮೋಹನ್ ಹಾವಿನಿಂದ ಕಚ್ಚಿಸಿಕೊಂಡು ಸಾವನ್ನಪ್ಪಿದಾತ. ಎರಡೂ ಹಾವಿನ ಬಾಲವನ್ನು ಹಿಡಿದು ಮನೆಯವರ ಬಳಿ ವಿಡಿಯೋ ಮಾಡಲು ಹೇಳಿದ್ದ ಆತ ಈ ವಿಭಿನ್ನವಾದ ರಕ್ಷಾಬಂಧನದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಮಾಡಲು ಯೋಚಿಸಿದ್ದ. ಎರಡು ಹಾವನ್ನು ಹಿಡಿದು ಒಂದು ಹಾವಿಗೆ ರಾಖಿ ಕಟ್ಟಿದ ಕೂಡಲೇ ಆತ ತಮಗೇನೋ ಅಪಾಯ ಮಾಡುತ್ತಿದ್ದಾನೆ ಎಂದು ಭಾವಿಸಿದ ಇನ್ನೊಂದು ಹಾವ ಆತ ತನಗೆ ರಾಖಿ ಕಟ್ಟುತ್ತಿದ್ದಂತೆ ಆತನ ಕೈಗೆ ಕಚ್ಚಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಅಷ್ಟರಲ್ಲಿ ಆತನಿಗೆ ವಿಷವೇರಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Shocking Video: ಮೈಕೆಲ್ ಜಾಕ್ಸನ್ ದೆವ್ವವನ್ನೇ ಮದುವೆಯಾದ ಮಹಿಳೆ; ಥ್ರಿಲ್ಲಿಂಗ್ ಲವ್ ಸ್ಟೋರಿ ಇಲ್ಲಿದೆ

Viral News: ಬೆಕ್ಕಿಗಾಗಿಯೇ ಈ ಬಂಗಲೆಯಲ್ಲಿದೆ ಎಸಿ ರೂಂ, ಬೆಡ್, ಕಾರ್ಟೂನ್ ಥಿಯೇಟರ್!

(Viral Video: Bihar Man Ties Rakhi to Snakes on Raksha Bandhan Dies After Snake Bites Him watch Shocking Video)

Published On - 5:08 pm, Mon, 23 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!