AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್​ನಲ್ಲಿ ಎಂದಲ್ಲಾ, ಎರಡಲ್ಲಾ ಬರೋಬ್ಬರಿ ಒಂಭತ್ತು ಮಂದಿ ಕುಳಿತು ಹೊರಟಿದ್ದಾರೆ! ವಿಡಿಯೊ ವೈರಲ್

ಈ ವಿಡಿಯೊ ನೋಡಿದ ನೆಟ್ಟಿಗರು, ರೆಕ್ಕೆಯುಳ್ಳ ವಿಮಾನ ಆಕಾಶದಲ್ಲಿ ಹಾರಾಡಿದರೆ ಬೈಕ್​ಗೆ ರೆಕ್ಕೆ ಕಟ್ಟಿ ರಸ್ತೆಯಲ್ಲಿ ಚಲಿಸುತ್ತಿದ್ದಾನೆ ಸವಾರ ಎಂಬ ಪ್ರತಿಕ್ರಿಯಿಸಿದ್ದಾರೆ. ವಿಡಿಯೊ ನೋಡಿ..

Viral Video: ಬೈಕ್​ನಲ್ಲಿ ಎಂದಲ್ಲಾ, ಎರಡಲ್ಲಾ ಬರೋಬ್ಬರಿ ಒಂಭತ್ತು ಮಂದಿ ಕುಳಿತು ಹೊರಟಿದ್ದಾರೆ! ವಿಡಿಯೊ ವೈರಲ್
ಬೈಕ್​ನಲ್ಲಿ ಎಂದಲ್ಲಾ, ಎರಡಲ್ಲಾ ಬರೋಬ್ಬರಿ ಒಂಭತ್ತು ಮಂದಿ ಕುಳಿತು ಹೊರಟಿದ್ದಾರೆ!
TV9 Web
| Edited By: |

Updated on: Oct 31, 2021 | 11:04 AM

Share

ನಿರಂತರವಾಗಿ ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಗಳು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಏತನ್ಮಧ್ಯೆ ಪೆಟ್ರೋಲ್, ಡೀಸೆಲ್ ಅನ್ನು ಕಡಿಮೆ ಬಳಕೆ ಮಾಡುವಂತೆ ಕೆಲವು ಪರ್ಯಾಯ ವ್ಯವಸ್ಥೆಯನ್ನು ಜನರು ಕಂಡುಹಿಡಿಯುತ್ತಿದ್ದಾರೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ಗಮನಿಸುವಂತೆ ಒಂದೇ ರೈಡ್​ನಲ್ಲಿ ಸಾಧ್ಯವಾದಷ್ಟು ಜನರನ್ನು ಕರೆದುಕೊಂಡು ಬೈಕ್ ಸವಾರ ಹೊರಟಿದ್ದಾನೆ. ಬೈಕ್​ನಲ್ಲಿ ಕುಳಿತುಕೊಳ್ಳಲು ಸೀಟ್ ವ್ಯವಸ್ಥೆಯನ್ನು ಹೇಗೆ ಮಾಡಲಾಗಿದೆ ಎಂಬುದನ್ನು ವಿಡಿಯೊದಲ್ಲೇ ನೋಡಿ.

ವಿಡಿಯೊದಲ್ಲಿ ನೋಡುವಂತೆ ಬೈಕ್ ಸವಾರನು ಬೈಕ್ ಓಡಿಸುತ್ತಿದ್ದಾನೆ. ರೆಕ್ಕೆಯಂತೆ ಎರಡು ಹಲಗೆಗಳನ್ನು ಬೈಕ್​ಗೆ ಜೋಡಿಸಲಾಗಿದೆ. ಆತನ ಹಿಂಬದಿಗೆ ಎರಡು ಜನ ಕುಳಿತಿದ್ದರೆ, ಜೋಡಿಸಲಾದ ಹಲಗೆಯ ಮೇಲೆ ಮತ್ತೊಂದಿಷ್ಟು ಜನರು ಕುಳಿತಿದ್ದಾರೆ. ಒಂದಲ್ಲಾ, ಎರಡಲ್ಲಾ ಬರೋಬ್ಬರಿ ಒಂಭತ್ತು ಮಂದಿ ಕುಳಿತಿದ್ದಾರೆ. ರೆಕ್ಕೆಯುಳ್ಳ ವಿಮಾನ ಆಕಾಶದಲ್ಲಿ ಹಾರಾಡಿದರೆ ಬೈಕ್​ಗೆ ರೆಕ್ಕೆ ಕಟ್ಟಿ ರಸ್ತೆಯಲ್ಲಿ ಚಲಿಸುತ್ತಿದ್ದಾನೆ ಸವಾರ ಎಂಬ ಪ್ರತಿಕ್ರಿಯೆ ಕೇಳಿ ಬಂದಿದೆ.

ನಾವು ವಿಡಿಯೊದಲ್ಲಿ ಗಮನಿಸಿದರೆ ಐದು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಬೈಕ್​ನಲ್ಲಿ ಚಲಿಸುತ್ತಿರುವುದು ಕಂಡು ಬರುತ್ತದೆ. ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು ಫುಲ್ ವೈರಲ್ ಆಗಿದೆ. ನಿರಂತರ ಪೆಟ್ರೋಲ್, ಡೀಸೆಲ್ ಬೆಲೆಗಳು ಏರುತ್ತಿರುವುದರಿಂದ ಈ ರೀತಿಯ ಪರ್ಯಾಯ ವ್ಯವಸ್ಥೆ ಅನಿವಾರ್ಯವೇ ಎಂದೆನಿಸುತ್ತಿದೆ ಎಂದು ಕೆಲವರು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ನಿಯಮ ಉಲ್ಲಂಘಿಸಿದ್ದಾರೆ ಮತ್ತು ಹೆಲ್ಮೆಟ್ ಇಲ್ಲದೇ ಅಷ್ಟೊಂದು ಜನ ಬೈಕ್​ನಲ್ಲಿ ಸಂಚರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ನಿಧಾನವಾಗಿ ಬೈಕ್ ಓಡಿಸಿ ಹೆಚ್ಚು ಕಡಿಮೆ ಆದೀತು ಎಂದು ಕೆಲವರು ಹೇಳಿದ್ದಾರೆ. ವಿಡಿಯೋಕ್ಕೆ ನಾನಾ ಪ್ರತಿಕ್ರಿಯೆಗಳು ಕೇಳಿ ಬಂದಿವೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಕೊಂಚ ತಡವಾಗಿದ್ದರೂ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದರು ತಾಯಿ-ಮಗು; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಸುಮಾರು 10 ಅಡಿ ಆಳದ ಬಾವಿಯಲ್ಲಿ ಬಿದ್ದ ಚಿರತೆ ರಕ್ಷಣೆ; ವಿಡಿಯೊ ನೋಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ