AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸವಾರನ ದುಸ್ಸಾಹಸದ ಬೈಕ್ ರೈಡಿಂಗ್ ನೋಡಿ ಬೆಚ್ಚಿಬಿದ್ದ ನೆಟ್ಟಿಗರು; ವೈರಲ್ ಆಗುತ್ತಿದೆ ವಿಡಿಯೋ

ಬೈಕ್​ನ ಹಿಂಬದಿ ಸೀಟಿನಲ್ಲಿ ಕುಳಿತು ಕಾಲಮೇಲೆ ಕಾಲು ಹಾಕಿ ಮೊಬೈಲ್​ನಲ್ಲಿ ಮಾತನಾಡುತ್ತಾ ಬೈಕ್ ರೈಡಿಂಗ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಸವಾರನ ದುಸ್ಸಾಹಸದ ಬೈಕ್ ರೈಡಿಂಗ್ ನೋಡಿ ಬೆಚ್ಚಿಬಿದ್ದ ನೆಟ್ಟಿಗರು; ವೈರಲ್ ಆಗುತ್ತಿದೆ ವಿಡಿಯೋ
ಸಾಹಸದ ಬೈಕ್ ರೈಡಿಂಗ್
TV9 Web
| Edited By: |

Updated on:Jul 17, 2022 | 2:57 PM

Share

ಬೈಕ್ ರೈಡಿಂಗ್(Bike Riding)​ನಲ್ಲಿ ಹೆಚ್ಚು ಆಸಕ್ತಿ ಹೊಂದಿರುವವರು ಒಂದಲ್ಲಾ ಒಂದು ರೀತಿಯ ಸಾಹಸಕ್ಕೆ ಅಥವಾ ದುಸ್ಸಾಹಸಕ್ಕೆ ಕೈ ಹಾಕುತ್ತಾರೆ. ಕೈಗಳನ್ನು ಬಿಟ್ಟು ಬೈಕ್ ಓಡಿಸುವುದು, ಸೀಟಿನಲ್ಲಿ ಮಲಗಿಕೊಂಡು ಬೈಕ್ ಬಿಡುವುದು, ಬೈಕ್​ ಮೇಲೆ ನಿಂತು ರೈಡ್ ಮಾಡುವುದು, ಹ್ಯಾಂಡಲ್ ಮೇಲೆ ಕುಳಿತುಕೊಂಡು ಬೈಕ್ ರೈಡ್ ಮಾಡುವುದು ಸೇರಿದಂತೆ ಇತ್ಯಾದಿ ಸಹಾಸಗಳನ್ನು ಮಾಡುತ್ತಾರೆ. ಇಂತಹ ಸಾಹಸವನ್ನು ನೋಡುವಾಗ ಎಂತಹವರ ಮೈ ಕೂಡ ಜುಮ್ಮೆನ್ನುತ್ತದೆ. ಇದೀಗ ಬೈಕ್ ಸವಾರನೊಬ್ಬ ಬೈಕ್​ನಲ್ಲಿ ಸಾಹಸ ಮಾಡುತ್ತಾ ರೈಡ್ ಮಾಡಿದ್ದು, ಇದರ ವಿಡಿಯೋ (Video) ನೋಡಿದರೆ ಒಂದು ನಿಮಿಷ ನೀವು ಕೂಡ ಬೆಚ್ಚಿ ಬೀಳುತ್ತೀರಿ.

ಅಪಾಯದ ಸಾಹಸಗಳ ವಿಡಿಯೋಗಳಿಗೆ ಸಾಮಾಜಿಕ ಜಾಲತಾಣ ಹಾಟ್​ಸ್ಪಾಟ್ ಆಗಿದೆ. ಸದ್ಯ ಇಂಟರ್ನೆಟ್​​ನಲ್ಲಿ ಗಮನಸೆಳೆದ ಬೈಕ್ ಸವಾರನ ರೈಡಿಂಗ್ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಇರುವಂತೆ, ವ್ಯಕ್ತಿಯೊಬ್ಬರು ಬೈಕ್​ನ ಮುಂದಿನ ಸೀಟಿನಲ್ಲಿ ಅಲ್ಲ, ಬೈಕ್ ಹ್ಯಾಂಡಲ್​ ಬಿಟ್ಟು ಹಿಂಬದಿ ಸೀಟಿನಲ್ಲಿ ಕುಳಿತುಕೊಂಡು ವೇಗವಾಗಿ ರೈಡ್ ಮಾಡುವುದನ್ನು ಕಾಣಬಹುದು. ವಿಡಿಯೋದಲ್ಲಿ ಗಮನಿಸಬೇಕಾದ ಅಂಶವೆಂದರೆ, ಆ ಬೈಕ್ ಸವಾರ ತನಗೆ ಯಾರೂ ಸರಿಸಾಠಿ ಇಲ್ಲ ಎಂಬಂತೆ ಕಾಲಮೇಲೆ ಕಾಲು ಹಾಕಿಕೊಂಡು ಮೊಬೈಲ್​ನಲ್ಲಿ ಮಾತನಾಡುತ್ತಾ ಹೋಗುತ್ತಿರುತ್ತಾನೆ.

ಬೈಕ್ ಸವಾರನ ಮೈನರಳಿಸುವ ಸಾಹಸದ ದೃಶ್ಯಾವಳಿಯನ್ನು ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಕಾರಿನಲ್ಲಿದ್ದವರು ವಿಡಿಯೋ ಮಾಡಿದ್ದಾರೆ. ಈ ವಿಡಿಯೋ realkaranchawla_ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 18.94 ಲಕ್ಷ ಲೈಕ್​ಗಳು ಬಂದಿವೆ ಮತ್ತು 24.3 ಮಿಲಿಯನ್ ವೀಕ್ಷಣೆಗಳನ್ನು ಕಂಡಿದ್ದಾರೆ.

ವಿಡಿಯೋವನ್ನು ವೀಕ್ಷಿಸಿದ ನಂತರ, ಬಳಕೆದಾರರು ಕಾಮೆಂಟ್ ವಿಭಾಗದಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಕೆಲವು ಬಳಕೆದಾರರು ವಿಡಿಯೋದಲ್ಲಿ ಕಂಡ ವ್ಯಕ್ತಿಯನ್ನು ಹೆವಿ ಡ್ರೈವರ್ ಎಂದು ಕರೆದರೆ, ಕೆಲವರು ಮಿಸ್ಟರ್ ಇಂಡಿಯಾ ಚಲನಚಿತ್ರವನ್ನು ನೆನಪಿಸಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೇ ಸಮಯದಲ್ಲಿ ಮತ್ತೊಬ್ಬ ಬಳಕೆದಾರ, “ಅನಿಲ್ ಕಪೂರ್ ಬೈಕ್ ಚಲಾಯಿಸುತ್ತಿದ್ದಾರೆ” ಎಂದು ಕಾಮೆಂಟ್ ಮಾಡಿದ್ದಾರೆ.

Published On - 2:54 pm, Sun, 17 July 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ