Sign In

By signing in or creating an account, you agree with Associated Broadcasting Company's Terms & Conditions and Privacy Policy.

Bizarre News: ಚಾಯ್ ಚಾಯ್ ಚಾಯ್.. ರಸಗುಲ್ಲಾ ಚಾಯ್.. ವಿಡಿಯೋ ವೈರಲ್

Viral Video: ಗ್ರೀನ್ ಟೀ, ಲೆಮೆನ್ ಟೀ, ಶುಂಠಿ ಟೀ ಇತ್ಯಾದಿ ಫ್ಲೇವರ್ ಟೀ ನೋಡಿದ್ದೀರಿ, ಆದರೆ ಎಂದಾದರೂ ಸಕ್ಕರೆಪಾಕದಲ್ಲಿ ಸವಿಯು ರಸಗುಲ್ಲಾದ ಚಹಾ ನೋಡಿದ್ದೀರಾ? ಇಲ್ಲಿದೆ ನೋಡಿ ರಸಗುಲ್ಲಾ ಚಹಾದ ವಿಡಿಯೋ..

Bizarre News: ಚಾಯ್ ಚಾಯ್ ಚಾಯ್.. ರಸಗುಲ್ಲಾ ಚಾಯ್.. ವಿಡಿಯೋ ವೈರಲ್
ರಸಗುಲ್ಲಾ ಚಹಾ
Follow us
TV9 Web
| Updated By: Rakesh Nayak Manchi

Updated on:Aug 21, 2022 | 10:03 AM

ಚಹಾಕ್ಕೆ ಭಾರತದಲ್ಲಿ ತನ್ನದೇ ಆದ ಸ್ಥಾನವಿದೆ, ವಿಶ್ರಾಂತಿ ವೇಳೆ ಜ್ಯೂಸ್ ಕುಡಿಯುವವರಿಗಿಂತ ಒಂದು ಕಪ್ ಚಹಾ ಕುಡಿಯುವವರೇ ಹೆಚ್ಚು. ಇನ್ನು ಯುವಕರಾದರೆ ಬೈಕ್ ಮೂಲಕ ಹೋಗಿ 10 ರೂಪಾಯಿ ಚಹಾ ಕುಡಿದು ಬರುತ್ತಾರೆ. ಇಂತಹ ಚಹಾದಲ್ಲೂ ಶುಂಠಿ ಚಹಾ, ಲೆಮೆನ್ ಟೀ, ಚಾಕಲೇಟ್ ಟೀ, ಗ್ರೀನ್ ಟೀ ಸೇರಿದಂತೆ ಅನೇಕ ಫ್ಲೇವರ್​ಗಳನ್ನು ಕಾಣಬಹುದಾಗಿದು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನಿಮ್ಮನ್ನು ಅಚ್ಚರಿಗೊಳಿಸುವುದರಲ್ಲಿ ಅನುಮಾನವೇ ಇಲ್ಲ. ಯಾವುದನ್ನು ನೀವು ಸಕ್ಕರೆ ಪಾಕದಲ್ಲಿ ಹಾಕಿ ತಿನ್ನುತ್ತೀರೋ ಅದೇ ರಸಗುಲ್ಲಾದ ಉಂಡೆಯನ್ನು ಬೆರೆಸಿ ಚಹಾವನ್ನು ತಯಾರಿಸಲಾಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ವಿಲಕ್ಷಣ ಸಂಯೋಜನೆಯ ರಸಗುಲ್ಲಾ ಚಹಾ ಮಾಡುತ್ತಿರುವ ದೃಶ್ಯಾವಳಿಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಆಹಾರ ಬ್ಲಾಗರ್ kolkatadelites ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸೌತ್ ಸಿಟಿ ಮಾಲ್ ಪಕ್ಕದಲ್ಲಿರುವ ಚುಮುಕ್ ಚೋಮೊಕ್ ಎಂಬಲ್ಲಿ ಈ ಚಹಾ ಸಿಗುತ್ತದೆ, ಪ್ರತಿ ಕಪ್​ಗೆ 35ರೂಪಾಯಿ ಬೆಲೆ ಇದೆ” ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ವೈರಲ್ ವಿಡಿಯೋದಲ್ಲಿ ಕಾಣುವಂತೆ, ಚಹಾ ಮಾಡುವ ಅಂಗಡಿ ಮಾಲೀಕ, ಮಣ್ಣಿನ ಲೋಟದಲ್ಲಿ ರಸಗುಲ್ಲಾದ ಉಂಡೆಯನ್ನು ಹಾಕುತ್ತಾರೆ, ನಂತರ ಅದಕ್ಕೆ ಚಹಾವನ್ನು ಬೆರೆಸುತ್ತಾರೆ. ಅಂತಿಮವಾಗಿ ಸ್ವಲ್ಪ ಬೆಣ್ಣೆ ಕೂಡ ಹಾಕಿ ಮಿಶ್ರಣ ಮಾಡುತ್ತಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದಿದ್ದು, 11ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಈ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sun, 21 August 22

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ