AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡೆಮ್ಮೆಯ ಬೆನ್ನತ್ತಿ ಓಡಿದ ಹುಲಿರಾಯ; ಮೈ ಜುಮ್ಮೆನಿಸುವ ವಿಡಿಯೋ ಶೇರ್ ಮಾಡಿದ ರಣದೀಪ್ ಹೂಡಾ

Randeep Hooda: ರಣದೀಪ್ ಹೂಡಾ ಸಫಾರಿಗೆ ಹೋದಾಗ ತೆಗೆದ ಕಾಡೆಮ್ಮೆಯನ್ನು ಬೇಟೆಯಾಡುವ ಹುಲಿಯ ಈ ವೀಡಿಯೊವನ್ನು ಪೋಸ್ಟ್ ಮಾಡಿದ ಒಂದೇ ಗಂಟೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

Viral Video: ಕಾಡೆಮ್ಮೆಯ ಬೆನ್ನತ್ತಿ ಓಡಿದ ಹುಲಿರಾಯ; ಮೈ ಜುಮ್ಮೆನಿಸುವ ವಿಡಿಯೋ ಶೇರ್ ಮಾಡಿದ ರಣದೀಪ್ ಹೂಡಾ
ರಣದೀಪ್ ಹೂಡಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 20, 2021 | 1:51 PM

ನೀವು ಬಾಲಿವುಡ್ ನಟ ರಣದೀಪ್ ಹೂಡಾ ಅವರನ್ನು ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಫಾಲೋ ಮಾಡುತ್ತಿದ್ದೀರಾ? ಹಾಗಾದರೆ, ಅವರು ಆಗಾಗ ಹಂಚಿಕೊಳ್ಳುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಬಗ್ಗೆ ನಿಮಗೆ ತಿಳಿದೇ ಇರುತ್ತದೆ. ತಾವು ಹೋದ ಕಡೆಯೆಲ್ಲ ಕಾಣುವ ಅಚ್ಚರಿಯ ವಿಷಯಗಳನ್ನು ರಣದೀಪ್ ಹೂಡಾ ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ. ಕಾಡು ಪ್ರಾಣಿಗಳು ಮತ್ತು ಪಕ್ಷಿಗಳ ಫೋಟೋಗಳು ಮತ್ತು ವಿಡಿಯೋಗಳನ್ನು ಸಹ ಅವರು ಹಾಕುತ್ತಿರುತ್ತಾರೆ. ಇಂದು ರಣದೀಪ್ ಹೂಡಾ ಹಾಕಿರುವ ಹುಲಿಯ ವಿಡಿಯೋದ ಪೋಸ್ಟ್​ ಭಾರೀ ವೈರಲ್ ಆಗಿದೆ.

ಇಂದು ಬೆಳಗ್ಗೆ ನಟ ರಣದೀಪ್ ಹೂಡಾ ಇನ್​ಸ್ಟಾಗ್ರಾಂನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ವಿಡಿಯೋವನ್ನು ಸೆರೆಹಿಡಿಯಲಾಗಿದೆ ಎಂದು ಅವರು ಹ್ಯಾಷ್​ಟ್ಯಾಗ್‌ನಲ್ಲಿ ಹಾಕಿದ್ದಾರೆ.

ಕಾಡಿನಲ್ಲಿ ಹುಲಿ ರಸ್ತೆಗೆ ಅಡ್ಡಲಾಗಿ ಓಡುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು. ಆ ಹುಲಿಯ ಹಿಂದೆಯೇ ಕ್ಯಾಮೆರಾವನ್ನು ತಿರುಗಿಸಲಾಗಿದ್ದು, ಹುಲಿ ಓಡಿಹೋಗಿ ಕಾಡೆಮ್ಮೆಯ ಮೇಲೆ ದಾಳಿ ಮಾಡಿದೆ. ಸಫಾರಿಗೆ ಹೋಗಿದ್ದ ರಣದೀಪ್ ಹೂಡಾ ಅವರ ಕಣ್ಣಮುಂದೆ ಹುಲಿಯೊಂದು ಕಾಡಿನಲ್ಲಿ ವೇಗವಾಗಿ ಓಡಿಹೋಗಿದೆ. ಅಷ್ಟೇ ವೇಗವಾಗಿ ಓಡುತ್ತಿದ್ದ ಕಾಡೆಮ್ಮೆಯನ್ನು ಬೆನ್ನತ್ತುವ ಹುಲಿ ಆ ಕಾಡೆಮ್ಮೆಯನ್ನು ತಿನ್ನುವ ಆಸೆಯಿಂದ ಅದರ ಹಿಂದೆ ಓಡಿ ಕಾಡಿನಲ್ಲಿ ಕಣ್ಮರೆಯಾಗುತ್ತದೆ.

ಈ ವೀಡಿಯೊವನ್ನು ಪೋಸ್ಟ್ ಮಾಡಿದ ಒಂದೇ ಗಂಟೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಈ ನೈಜ ವಿಡಿಯೋಗೆ ಅಭಿಮಾನಿಗಳು ಕಮೆಂಟ್​ಗಳನ್ನು ಮಾಡುತ್ತಿದ್ದಾರೆ. ನಟ ಮಾತ್ರವಲ್ಲದೆ ಪ್ರಾಣಿ ಪ್ರೇಮಿಯೂ ಆಗಿರುವ ರಣದೀಪ್ ಹೂಡಾ ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ಆಗಾಗ ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: Viral Video: ಭರ್ಜರಿ ನೃತ್ಯದ ಮೂಲಕ ನೆಟ್ಟಿಗರ ಮನಗೆದ್ದ 63 ವರ್ಷದ ಮಹಿಳೆ; ವಿಡಿಯೋ ನೋಡಿ

Viral Video: ಅಮ್ಮನ ಮದುವೆಯಲ್ಲಿ ಮಗಳ ಸಂಭ್ರಮ; ಈ ವಿಡಿಯೋ ನೋಡಿದರೆ ಅಚ್ಚರಿಯಾಗದಿರದು!

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ