AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡೆಮ್ಮೆಯ ಬೆನ್ನತ್ತಿ ಓಡಿದ ಹುಲಿರಾಯ; ಮೈ ಜುಮ್ಮೆನಿಸುವ ವಿಡಿಯೋ ಶೇರ್ ಮಾಡಿದ ರಣದೀಪ್ ಹೂಡಾ

Randeep Hooda: ರಣದೀಪ್ ಹೂಡಾ ಸಫಾರಿಗೆ ಹೋದಾಗ ತೆಗೆದ ಕಾಡೆಮ್ಮೆಯನ್ನು ಬೇಟೆಯಾಡುವ ಹುಲಿಯ ಈ ವೀಡಿಯೊವನ್ನು ಪೋಸ್ಟ್ ಮಾಡಿದ ಒಂದೇ ಗಂಟೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

Viral Video: ಕಾಡೆಮ್ಮೆಯ ಬೆನ್ನತ್ತಿ ಓಡಿದ ಹುಲಿರಾಯ; ಮೈ ಜುಮ್ಮೆನಿಸುವ ವಿಡಿಯೋ ಶೇರ್ ಮಾಡಿದ ರಣದೀಪ್ ಹೂಡಾ
ರಣದೀಪ್ ಹೂಡಾ
TV9 Web
| Edited By: |

Updated on: Dec 20, 2021 | 1:51 PM

Share

ನೀವು ಬಾಲಿವುಡ್ ನಟ ರಣದೀಪ್ ಹೂಡಾ ಅವರನ್ನು ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಫಾಲೋ ಮಾಡುತ್ತಿದ್ದೀರಾ? ಹಾಗಾದರೆ, ಅವರು ಆಗಾಗ ಹಂಚಿಕೊಳ್ಳುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಬಗ್ಗೆ ನಿಮಗೆ ತಿಳಿದೇ ಇರುತ್ತದೆ. ತಾವು ಹೋದ ಕಡೆಯೆಲ್ಲ ಕಾಣುವ ಅಚ್ಚರಿಯ ವಿಷಯಗಳನ್ನು ರಣದೀಪ್ ಹೂಡಾ ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡುತ್ತಲೇ ಇರುತ್ತಾರೆ. ಕಾಡು ಪ್ರಾಣಿಗಳು ಮತ್ತು ಪಕ್ಷಿಗಳ ಫೋಟೋಗಳು ಮತ್ತು ವಿಡಿಯೋಗಳನ್ನು ಸಹ ಅವರು ಹಾಕುತ್ತಿರುತ್ತಾರೆ. ಇಂದು ರಣದೀಪ್ ಹೂಡಾ ಹಾಕಿರುವ ಹುಲಿಯ ವಿಡಿಯೋದ ಪೋಸ್ಟ್​ ಭಾರೀ ವೈರಲ್ ಆಗಿದೆ.

ಇಂದು ಬೆಳಗ್ಗೆ ನಟ ರಣದೀಪ್ ಹೂಡಾ ಇನ್​ಸ್ಟಾಗ್ರಾಂನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ವಿಡಿಯೋವನ್ನು ಸೆರೆಹಿಡಿಯಲಾಗಿದೆ ಎಂದು ಅವರು ಹ್ಯಾಷ್​ಟ್ಯಾಗ್‌ನಲ್ಲಿ ಹಾಕಿದ್ದಾರೆ.

ಕಾಡಿನಲ್ಲಿ ಹುಲಿ ರಸ್ತೆಗೆ ಅಡ್ಡಲಾಗಿ ಓಡುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದು. ಆ ಹುಲಿಯ ಹಿಂದೆಯೇ ಕ್ಯಾಮೆರಾವನ್ನು ತಿರುಗಿಸಲಾಗಿದ್ದು, ಹುಲಿ ಓಡಿಹೋಗಿ ಕಾಡೆಮ್ಮೆಯ ಮೇಲೆ ದಾಳಿ ಮಾಡಿದೆ. ಸಫಾರಿಗೆ ಹೋಗಿದ್ದ ರಣದೀಪ್ ಹೂಡಾ ಅವರ ಕಣ್ಣಮುಂದೆ ಹುಲಿಯೊಂದು ಕಾಡಿನಲ್ಲಿ ವೇಗವಾಗಿ ಓಡಿಹೋಗಿದೆ. ಅಷ್ಟೇ ವೇಗವಾಗಿ ಓಡುತ್ತಿದ್ದ ಕಾಡೆಮ್ಮೆಯನ್ನು ಬೆನ್ನತ್ತುವ ಹುಲಿ ಆ ಕಾಡೆಮ್ಮೆಯನ್ನು ತಿನ್ನುವ ಆಸೆಯಿಂದ ಅದರ ಹಿಂದೆ ಓಡಿ ಕಾಡಿನಲ್ಲಿ ಕಣ್ಮರೆಯಾಗುತ್ತದೆ.

ಈ ವೀಡಿಯೊವನ್ನು ಪೋಸ್ಟ್ ಮಾಡಿದ ಒಂದೇ ಗಂಟೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ಈ ನೈಜ ವಿಡಿಯೋಗೆ ಅಭಿಮಾನಿಗಳು ಕಮೆಂಟ್​ಗಳನ್ನು ಮಾಡುತ್ತಿದ್ದಾರೆ. ನಟ ಮಾತ್ರವಲ್ಲದೆ ಪ್ರಾಣಿ ಪ್ರೇಮಿಯೂ ಆಗಿರುವ ರಣದೀಪ್ ಹೂಡಾ ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ಆಗಾಗ ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: Viral Video: ಭರ್ಜರಿ ನೃತ್ಯದ ಮೂಲಕ ನೆಟ್ಟಿಗರ ಮನಗೆದ್ದ 63 ವರ್ಷದ ಮಹಿಳೆ; ವಿಡಿಯೋ ನೋಡಿ

Viral Video: ಅಮ್ಮನ ಮದುವೆಯಲ್ಲಿ ಮಗಳ ಸಂಭ್ರಮ; ಈ ವಿಡಿಯೋ ನೋಡಿದರೆ ಅಚ್ಚರಿಯಾಗದಿರದು!

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ