Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : IPL ಫೈನಲ್ ಪಂದ್ಯದಲ್ಲಿ ಕ್ಯಾಮೆರಾಮ್ಯಾನ್ ಆಗಿ ಗಮನ ಸೆಳೆದ ನಟ ಸೋನು ಸೂದ್

ಐಪಿಎಲ್‌ 2024ರ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಹೆಚ್‌) ಮೇ26 ಭಾನುವಾರದಂದು ಕಣಕ್ಕಿಳಿದಿದ್ದು, ಮೂರನೇ ಬಾರಿಗೆ ಕೆಕೆಆರ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇತ್ತ ಫೈನಲ್​ ಪಂದ್ಯದ ವೇಳೆ ಬಹುಭಾಷ ನಟ ಸೋನು ಸೂದ್​ ಅವರು ಕ್ಯಾಮೆರಾಮ್ಯಾನ್ ಆಗಿ ಮೈದಾನದಲ್ಲಿ ಕಾಣಿಸಿಕೊಂಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Viral Video : IPL ಫೈನಲ್ ಪಂದ್ಯದಲ್ಲಿ ಕ್ಯಾಮೆರಾಮ್ಯಾನ್ ಆಗಿ ಗಮನ ಸೆಳೆದ ನಟ ಸೋನು ಸೂದ್
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: May 27, 2024 | 10:27 AM

ನಿನ್ನೆ ಎಂಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಭಾನುವಾರ ಕೋಲ್ಕೊತಾ ನೈಟ್ ರೈಡರ್ಸ್ ತನ್ನ ಮೂರನೇ ಇಂಡಿಯನ್ ಪ್ರೀಮಿಯರ್ ಲೀಗ್ ಕಿರೀಟವನ್ನು ಗೆದ್ದುಕೊಂಡಿದೆ. ಈ ನಡುವೆ ಬಹುಭಾಷಾ ನಟ ಸೋನು ಸೂದ್ ಅವರು ಕ್ಯಾಮೆರಾದ ಹಿಡಿದು, ವಿಡಿಯೋ ಶೂಟ್ ಮಾಡುತ್ತಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

ತಮ್ಮ ಎಕ್ಸ್​ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ನಟ ಸೋನುಸೂದ್, ಐಪಿಎಲ್​​ಗೆ ಕ್ಯಾಮೆರಾಮ್ಯಾನ್​ ಬೇಕಿದ್ರೆ ಹೇಳಿ ನಾನು ರೆಡಿಯಾಗಿದ್ದೇನೆ ಎಂದು ತಮಾಷೆಯಲ್ಲಿ ಬರೆದುಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ನಟ ಸೋನು ಸೂದ್ ಅವರು ಪಂದ್ಯವನ್ನು ಸೆರೆ ಹಿಡಿಯುವ ಕ್ಯಾಮೆರಾಮ್ಯಾನ್​ ಬಳಿ ಹೋಗಿರುವುದನ್ನು ನೋಡಬಹುದು.

ಇದನ್ನೂ ಓದಿ: ಕೊನೆಗೂ ಮೌನ ಮುರಿದ ನತಾಶ; ವಿಚ್ಛೇದನ ವದಂತಿ ಬಗ್ಗೆ ಹಾರ್ದಿಕ್‌ ಪಾಂಡ್ಯ ಪತ್ನಿ ಏನಂದ್ರು ನೋಡಿ

ವೈರಲ್​​ ವಿಡಿಯೋ

ಆ ಬಳಿಕ ಕ್ಯಾಮೆರಾಮ್ಯಾನ್ ಬಳಿ ಇದ್ದ ಕ್ಯಾಮೆರಾವನ್ನು ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ. ಭುಜದ ಮೇಲೆ ಕ್ಯಾಮೆರಾ ಇಟ್ಟುಕೊಂಡು ಅಭಿಮಾನಿಗಳ ಕಡೆ ತಿರುಗಿ ವಿಡಿಯೋ ಮಾಡಿದ್ದಾರೆ. ಆ ವೇಳೆಯಲ್ಲಿ ನೀವೆಲ್ಲಾ ಟಿವಿಯಲ್ಲಿ ಬರುತ್ತೀರಾ ನೋಡಿ ಎಂದಿದ್ದಾರೆ. ನಟ ವಿಡಿಯೋ ಮಾಡುತ್ತಿದ್ದಂತೆ ಅಭಿಮಾನಿಗಳು ಜೋರಾಗಿ ಕೇಕೆ ಹಾಕಿ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಎರಡು ಲಕ್ಷದ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ಫ್ಯಾನ್ಸ್ ಫುಲ್ ಫಿದಾ ಆಗಿದ್ದು ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು