AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : IPL ಫೈನಲ್ ಪಂದ್ಯದಲ್ಲಿ ಕ್ಯಾಮೆರಾಮ್ಯಾನ್ ಆಗಿ ಗಮನ ಸೆಳೆದ ನಟ ಸೋನು ಸೂದ್

ಐಪಿಎಲ್‌ 2024ರ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಹೆಚ್‌) ಮೇ26 ಭಾನುವಾರದಂದು ಕಣಕ್ಕಿಳಿದಿದ್ದು, ಮೂರನೇ ಬಾರಿಗೆ ಕೆಕೆಆರ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇತ್ತ ಫೈನಲ್​ ಪಂದ್ಯದ ವೇಳೆ ಬಹುಭಾಷ ನಟ ಸೋನು ಸೂದ್​ ಅವರು ಕ್ಯಾಮೆರಾಮ್ಯಾನ್ ಆಗಿ ಮೈದಾನದಲ್ಲಿ ಕಾಣಿಸಿಕೊಂಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Viral Video : IPL ಫೈನಲ್ ಪಂದ್ಯದಲ್ಲಿ ಕ್ಯಾಮೆರಾಮ್ಯಾನ್ ಆಗಿ ಗಮನ ಸೆಳೆದ ನಟ ಸೋನು ಸೂದ್
TV9 Web
| Edited By: |

Updated on: May 27, 2024 | 10:27 AM

Share

ನಿನ್ನೆ ಎಂಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಭಾನುವಾರ ಕೋಲ್ಕೊತಾ ನೈಟ್ ರೈಡರ್ಸ್ ತನ್ನ ಮೂರನೇ ಇಂಡಿಯನ್ ಪ್ರೀಮಿಯರ್ ಲೀಗ್ ಕಿರೀಟವನ್ನು ಗೆದ್ದುಕೊಂಡಿದೆ. ಈ ನಡುವೆ ಬಹುಭಾಷಾ ನಟ ಸೋನು ಸೂದ್ ಅವರು ಕ್ಯಾಮೆರಾದ ಹಿಡಿದು, ವಿಡಿಯೋ ಶೂಟ್ ಮಾಡುತ್ತಿರುವ ದೃಶ್ಯವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

ತಮ್ಮ ಎಕ್ಸ್​ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ನಟ ಸೋನುಸೂದ್, ಐಪಿಎಲ್​​ಗೆ ಕ್ಯಾಮೆರಾಮ್ಯಾನ್​ ಬೇಕಿದ್ರೆ ಹೇಳಿ ನಾನು ರೆಡಿಯಾಗಿದ್ದೇನೆ ಎಂದು ತಮಾಷೆಯಲ್ಲಿ ಬರೆದುಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ನಟ ಸೋನು ಸೂದ್ ಅವರು ಪಂದ್ಯವನ್ನು ಸೆರೆ ಹಿಡಿಯುವ ಕ್ಯಾಮೆರಾಮ್ಯಾನ್​ ಬಳಿ ಹೋಗಿರುವುದನ್ನು ನೋಡಬಹುದು.

ಇದನ್ನೂ ಓದಿ: ಕೊನೆಗೂ ಮೌನ ಮುರಿದ ನತಾಶ; ವಿಚ್ಛೇದನ ವದಂತಿ ಬಗ್ಗೆ ಹಾರ್ದಿಕ್‌ ಪಾಂಡ್ಯ ಪತ್ನಿ ಏನಂದ್ರು ನೋಡಿ

ವೈರಲ್​​ ವಿಡಿಯೋ

ಆ ಬಳಿಕ ಕ್ಯಾಮೆರಾಮ್ಯಾನ್ ಬಳಿ ಇದ್ದ ಕ್ಯಾಮೆರಾವನ್ನು ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ. ಭುಜದ ಮೇಲೆ ಕ್ಯಾಮೆರಾ ಇಟ್ಟುಕೊಂಡು ಅಭಿಮಾನಿಗಳ ಕಡೆ ತಿರುಗಿ ವಿಡಿಯೋ ಮಾಡಿದ್ದಾರೆ. ಆ ವೇಳೆಯಲ್ಲಿ ನೀವೆಲ್ಲಾ ಟಿವಿಯಲ್ಲಿ ಬರುತ್ತೀರಾ ನೋಡಿ ಎಂದಿದ್ದಾರೆ. ನಟ ವಿಡಿಯೋ ಮಾಡುತ್ತಿದ್ದಂತೆ ಅಭಿಮಾನಿಗಳು ಜೋರಾಗಿ ಕೇಕೆ ಹಾಕಿ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಎರಡು ಲಕ್ಷದ ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದ್ದು, ಫ್ಯಾನ್ಸ್ ಫುಲ್ ಫಿದಾ ಆಗಿದ್ದು ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ