AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!
ಮದುವೆ
ನಯನಾ ರಾಜೀವ್
|

Updated on: Apr 20, 2023 | 2:28 PM

Share

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು. ಕೆಲವರು ತಾವು ಎಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥಮಾಡಿಕೊಂಡು ತಿದ್ದಿಕೊಳ್ಳಲು ಪ್ರಯತ್ನಿಸಬಹುದು. ಇಬ್ಬರೂ ಸೋಲು ಒಪ್ಪಿಕೊಳ್ಳದ ಸ್ಥಿತಿಯಲ್ಲಿದ್ದರೆ ಪರಿಸ್ಥಿತಿ ಯಾವ ಹಂತಕ್ಕೂ ತಲುಪಬಹುದು.

ಆದರೆ ಇಲ್ಲೊಂದು ಮದುವೆಯಲ್ಲಿ ವರ ಒತ್ತಾಯಪೂರ್ವಕವಾಗಿ ಸಿಹಿಯನ್ನು ತಿನ್ನಿಸಿದಕ್ಕೆ ಶುರುವಾದ ಕದನ ಕೊನೆಗೆ ವಧು-ವರರಿಬ್ಬರು ಜುಟ್ಟು ಹಿಡಿದು ಹೊಡೆದಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರೂ ಕೂಡ ಎಲ್ಲಿಯೂ ತಾವು ಸೋಲನ್ನು ಒಪ್ಪಿಕೊಳ್ಳುವಂತೆ ಕಾಣುತ್ತಿಲ್ಲ, ಮುಖಕ್ಕೆ, ಕೆನ್ನಗೆ ಎಲ್ಲೆಂದರಲ್ಲಿ ಹೊಡೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇವಲ ಮನರಂಜನಾ ಉದ್ದೇಶಕ್ಕಾಗಿ ಮಾಡಿದ ಸ್ಕ್ರಿಪ್ಟ್​ ಕೂಡ ಆಗಿರಬಹುದು ಎಂದು ಹೇಳಲಾಗುತ್ತಿದೆ. ವಿಡಿಯೋವನ್ನು 2 ಲಕ್ಷಕ್ಕಿಂತಲೂ ಹೆಚ್ಚಿನ ಮಂದಿ ವೀಕ್ಷಿಸಿದ್ದಾರೆ. ವಧುವಿನ ಕತ್ತಲ್ಲಿ ಮಂಗಳಸೂತ್ರವೂ ಇಲ್ಲ ಎಂದು ಕೆಲವರು ಹೇಳಿದ್ದಾರೆ.

ಆದರೆ ಮದುವೆಯ ಸಂದರ್ಭದಲ್ಲಿ ಯಾವುದ್ಯಾವುದೋ ವಿಚಾರಗಳು ಕೋಪ ತರಿಸುತ್ತವೆ, ಕೋಪ ಮಾಡಿಕೊಳ್ಳುವ ಪ್ರಸಂಗಗಳು ಬರುತ್ತವೆ, ಆದರೆ ಸಾರ್ವಜನಿಕವಾಗಿ ಹೀಗೆ ಹೊಡೆದಾಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣಸಿಗುತ್ತವೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ