AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು.

Viral Video: ಮದುವೆ ಮಂಟಪದಲ್ಲೇ ಜುಟ್ಟು ಹಿಡಿದು ಜಗಳವಾಡಿದ್ರೆ, ಏಳೇಳು ಜನ್ಮಕ್ಕೂ ಇಬ್ಬರೂ ಖುಷಿಯಾಗಿರಿ ಎಂದು ಹೇಗೆ ಆಶೀರ್ವಾದ ಮಾಡೋದಪ್ಪಾ!
ಮದುವೆ
ನಯನಾ ರಾಜೀವ್
|

Updated on: Apr 20, 2023 | 2:28 PM

Share

ಮದುವೆ ಬಳಿಕ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವವರೆಗೆ ಸ್ವಲ್ಪ ಕೋಪ, ಮನಸ್ತಾಪ ಎಲ್ಲವೂ ಇರುತ್ತದೆ. ಕ್ರಮೇಣವಾಗಿ ಕಡಿಮೆಯಾಗಬಹುದು. ಕೆಲವರು ತಾವು ಎಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥಮಾಡಿಕೊಂಡು ತಿದ್ದಿಕೊಳ್ಳಲು ಪ್ರಯತ್ನಿಸಬಹುದು. ಇಬ್ಬರೂ ಸೋಲು ಒಪ್ಪಿಕೊಳ್ಳದ ಸ್ಥಿತಿಯಲ್ಲಿದ್ದರೆ ಪರಿಸ್ಥಿತಿ ಯಾವ ಹಂತಕ್ಕೂ ತಲುಪಬಹುದು.

ಆದರೆ ಇಲ್ಲೊಂದು ಮದುವೆಯಲ್ಲಿ ವರ ಒತ್ತಾಯಪೂರ್ವಕವಾಗಿ ಸಿಹಿಯನ್ನು ತಿನ್ನಿಸಿದಕ್ಕೆ ಶುರುವಾದ ಕದನ ಕೊನೆಗೆ ವಧು-ವರರಿಬ್ಬರು ಜುಟ್ಟು ಹಿಡಿದು ಹೊಡೆದಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರೂ ಕೂಡ ಎಲ್ಲಿಯೂ ತಾವು ಸೋಲನ್ನು ಒಪ್ಪಿಕೊಳ್ಳುವಂತೆ ಕಾಣುತ್ತಿಲ್ಲ, ಮುಖಕ್ಕೆ, ಕೆನ್ನಗೆ ಎಲ್ಲೆಂದರಲ್ಲಿ ಹೊಡೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಈ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೇವಲ ಮನರಂಜನಾ ಉದ್ದೇಶಕ್ಕಾಗಿ ಮಾಡಿದ ಸ್ಕ್ರಿಪ್ಟ್​ ಕೂಡ ಆಗಿರಬಹುದು ಎಂದು ಹೇಳಲಾಗುತ್ತಿದೆ. ವಿಡಿಯೋವನ್ನು 2 ಲಕ್ಷಕ್ಕಿಂತಲೂ ಹೆಚ್ಚಿನ ಮಂದಿ ವೀಕ್ಷಿಸಿದ್ದಾರೆ. ವಧುವಿನ ಕತ್ತಲ್ಲಿ ಮಂಗಳಸೂತ್ರವೂ ಇಲ್ಲ ಎಂದು ಕೆಲವರು ಹೇಳಿದ್ದಾರೆ.

ಆದರೆ ಮದುವೆಯ ಸಂದರ್ಭದಲ್ಲಿ ಯಾವುದ್ಯಾವುದೋ ವಿಚಾರಗಳು ಕೋಪ ತರಿಸುತ್ತವೆ, ಕೋಪ ಮಾಡಿಕೊಳ್ಳುವ ಪ್ರಸಂಗಗಳು ಬರುತ್ತವೆ, ಆದರೆ ಸಾರ್ವಜನಿಕವಾಗಿ ಹೀಗೆ ಹೊಡೆದಾಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣಸಿಗುತ್ತವೆ.

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ