AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ವೇಳೆ ವರನ ಕಪಾಳಕ್ಕೆ ಹೊಡೆದು, ಮಂಟಪ ಬಿಟ್ಟು ಹೋದ ವಧು; ವಿಡಿಯೋ ವೈರಲ್

ವೈರಲ್ ಆಗಿರುವ ವಿಡಿಯೋದಲ್ಲಿ ವಧು ವರನಿಗೆ ಹಾರ ಹಾಕುವ ಸಂದರ್ಭದಲ್ಲಿ ವರನಿಗೆ ಕಪಾಳಮೋಕ್ಷ ಮಾಡಿ ನಂತರ ವೇದಿಕೆಯಿಂದ ಕೆಳಗಿಳಿದಿದ್ದಾಳೆ.

Viral Video: ಮದುವೆ ವೇಳೆ ವರನ ಕಪಾಳಕ್ಕೆ ಹೊಡೆದು, ಮಂಟಪ ಬಿಟ್ಟು ಹೋದ ವಧು; ವಿಡಿಯೋ ವೈರಲ್
ವರನ ಕೆನ್ನೆಗೆ ಹೊಡೆದ ವಧು
TV9 Web
| Edited By: |

Updated on: Apr 20, 2022 | 4:40 PM

Share

ನವದೆಹಲಿ: ಮದುವೆಯೆಂಬುದು ಪ್ರತಿ ಯುವತಿಗೆ ಅತ್ಯಂತ ವಿಶೇಷವಾದ ದಿನ. ವಧುವಿಗೆ ತನ್ನ ಮದುವೆಯ ದಿನ ಮತ್ತು ಅವಳ ಕನಸಿನ ಮದುವೆಯ ಬಗ್ಗೆ ಆಕೆಗೆ ಏನೇನೋ ಕನಸುಗಳಿರುತ್ತವೆ. ಕೇವಲ ವಧುವಿಗೆ ಮಾತ್ರವಲ್ಲ, ವರನಿಗೆ ಕೂಡ ಮದುವೆ ಬಗ್ಗೆ ಹಲವು ಆಸೆಗಳಿರುತ್ತವೆ. ಆದರೆ, ವೈರಲ್ (Viral Video) ಆಗಿರುವ ಈ ವಿಡಿಯೋದಲ್ಲಿ ವರನಿಗೆ ಹಾರ ಹಾಕುವಾಗ ವಧು ಆತನ ಕೆನ್ನೆಗೆ ಬಾರಿಸಿದ್ದಾಳೆ. ಇದರಿಂದ ಶಾಕ್ ಆದ ವರ ಏನಾಯಿತೆಂದು ಅರಗಿಸಿಕೊಳ್ಳುವಷ್ಟರಲ್ಲಿ ಆ ವಧು ಮದುವೆ ಮಂಟಪದಿಂದ ಕೆಳಗಿಳಿದು ಹೋಗಿದ್ದಾಳೆ.

ವೈರಲ್ ಆಗಿರುವ ವಿಡಿಯೋದಲ್ಲಿ ವಧು ವರನಿಗೆ ಹಾರ ಹಾಕುವ ಸಂದರ್ಭದಲ್ಲಿ ವರನಿಗೆ ಕಪಾಳಮೋಕ್ಷ ಮಾಡಿ ನಂತರ ವೇದಿಕೆಯಿಂದ ಕೆಳಗಿಳಿದಿದ್ದಾಳೆ. ವಧುವಿನ ಈ ವರ್ತನೆಗೆ ನಿಜವಾದ ಕಾರಣವನ್ನು ಕಂಡುಹಿಡಿಯಲಾಗದಿದ್ದರೂ, ವರನು ಮದುವೆಯ ಸ್ಥಳಕ್ಕೆ ಕುಡಿದು ಬಂದಿದ್ದರಿಂದ ಕೋಪಗೊಂಡ ವಧು ಆತನ ಕೆನ್ನೆಗೆ ಬಾರಿಸಿದ್ದಾಳೆ ಎನ್ನಲಾಗಿದೆ.

ಈ ಅಹಿತಕರ ಘಟನೆ ಮದುವೆಯ ಸಂಭ್ರಮವನ್ನು ಸ್ಥಗಿತಗೊಳಿಸಿದೆ. ವೀಡಿಯೊದ ಪ್ರಾರಂಭದಲ್ಲಿ, ಅತಿಥಿಯೊಬ್ಬರು ಮಂಟಪದ ಬಳಿ ಬಂದು ಗಲಾಟೆ ಮಾಡುತ್ತಿರುವುದನ್ನು ಕಾಣಬಹುದು. ಆದರೆ, ಈ ಘಟನೆಯು ಕೆಲವೇ ಸೆಕೆಂಡುಗಳ ನಂತರ ಎಲ್ಲರನ್ನೂ ಅಚ್ಚರಿಗೆ ತಳ್ಳಿತು. ಮಂಟಪದಲ್ಲೇ ವರನಿಗೆ ಕಪಾಳಮೋಕ್ಷ ಮಾಡಿದ ವಧು ಮದುವೆಯೇ ಬೇಡವೆಂದು ಮಂಟಪ ಬಿಟ್ಟು ಹೋಗಿದ್ದಾಳೆ.

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಈ ಘಟನೆ ನಡೆದಿದ್ದು, ಜಲೌನ್ ಜಿಲ್ಲೆಯ ಚಮರಿ ಗ್ರಾಮದ ರವಿಕಾಂತ್ ಮದುವೆಯಾಗಬೇಕಿದ್ದ ವರ. ಕೊನೆಗೆ ಎರಡೂ ಕುಟುಂಬಸ್ಥರು ಒಟ್ಟಿಗೇ ಕುಳಿತು, ಮಾತುಕತೆ ನಡೆಸಿ, ವಧುವನ್ನು ಮದುವೆಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಸೀರೆಯುಟ್ಟ ಯುವತಿಯ ಬ್ಯಾಕ್​ಫ್ಲಿಪ್, ಡ್ಯಾನ್ಸ್​​ ನೋಡಿ ನೆಟ್ಟಿಗರು ಫಿದಾ; ವೈರಲ್ ವಿಡಿಯೋ ಇಲ್ಲಿದೆ

Viral Video: ಆಂಧ್ರದ ಆಸ್ಪತ್ರೆಯಲ್ಲಿ ಪವರ್ ಕಟ್; ಮೊಬೈಲ್ ಬೆಳಕಿನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿದ ವೈದ್ಯರು

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ