AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ

Uttarakhand : ಹೃಷಿಕೇಶದ ತಪೋವನದ ಬೀದಿಯಲ್ಲಿ ನಡುರಾತ್ರಿಯಲ್ಲಿ ಈ ಯುವಕ ಕುಡಿದು ಹೀಗೆ ಗೂಳಿಸವಾರಿ ಮಾಡುತ್ತಿದ್ದರೆ, ಕೈಲಾಪತಿಗೆ ಜಯವಾಗಲಿ ಎಂಬ ಘೋಷಣೆ ಕೂಗಿದ್ದಾರೆ ಜನ! ಆಮೇಲೇನಾಯಿತು ಓದಿ.

ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ
ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ಗೂಳಿಸವಾರಿ ಮಾಡಿದ ಯುವಕ
TV9 Web
| Edited By: ಶ್ರೀದೇವಿ ಕಳಸದ|

Updated on:May 09, 2023 | 4:12 PM

Share

Viral Video : ಕಲಿಯುಗ ಎಂದರೆ ಇದೇ ಏನು? ಕೇಳಬೇಡಿ. ಈ ವಿಡಿಯೋ ನೋಡಿದ ನಂತರ ಇದು ಯಾವ ಯುಗ ಎಂದು ನೀವೇ ನಿರ್ಧರಿಸಿ. ಇಲ್ಲೊಬ್ಬ ಯುವಕ ರಾತ್ರೋರಾತ್ರಿ ಕುಡಿದ ಮತ್ತಿನಲ್ಲಿ ಹೋರಿಸವಾರಿ ಮಾಡಿದ್ದಾನೆ. ಆ ಹೋರಿಯೋ ಕುದುರೆಯಂತೆ ಓಡಿರುವ ರೀತಿ ನೋಡಿದರೆ ಕುಳಿತವ ಯಾವೂರ ರಾಜನೋ ಇವ ಎಂದೆನ್ನಿಸದೇ ಇರಲಾರದು. ಆದರೆ ಇದನ್ನು ನೋಡಿದ ನೆಟ್​ಮಂದಿ ಮಾತ್ರ ದಂಗಾಗಿದ್ದಾರೆ.

ಈ ವಿಡಿಯೋ ಅನ್ನು ಹೃಷಿಕೇಶದ ತಪೋವನದ ಬೀದಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ಉತ್ತರಾಖಂಡ್​ ಪೊಲೀಸರು ತಿಳಿಸಿದ್ದಾರೆ. ಇದೀಗ ಈ ಯುವಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಾಗಿದೆ. ಇನ್ನೆಂದೂ ಈತ ಇಂಥ ಕೃತ್ಯದಲ್ಲಿ ಮತ್ತು ಸಾಹಸದಲ್ಲಿ ತೊಡಗದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಇದನ್ನು ಓದಿ : ಮೊಬೈಲ್​ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ವಿದ್ಯಾರ್ಥಿನಿಯಿಂದ ಪೆಪ್ಪರ್ ಸ್ಪ್ರೇ; ವಿಡಿಯೋ ವೈರಲ್

ಉತ್ತರಾಖಂಡ್ ಪೊಲೀಸರು ಈ ವಿಡಿಯೋ ಮತ್ತು ಘಟನೆಯ ವಿವರವನ್ನು ಟ್ವೀಟ್ ಮಾಡಿದ್ದಾರೆ; ‘ಮೇ 5ರಂದು ಮಧ್ಯರಾತ್ರಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ತಕ್ಷಣವೇ ಈ ಯುವಕನನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮುಂದೆ ಇರು ಪುನರಾವರ್ತನೆಯಾಗದಂತೆ ಆತನಿಗೆ ಎಚ್ಚರಿಕೆ ನೀಡಲಾಗಿದೆ’.

ಇದನ್ನೂ ಓದಿ : ವೈರಲ್ ಚಿಲ್ಲಿ ಲಿಪ್​ ಗ್ಲಾಸ್​; ಇದನ್ನು ಟ್ರೆಂಡ್​ ಆಗಲು ಬಿಡಬೇಡಿ ಎನ್ನುತ್ತಿರುವ ನೆಟ್ಟಿಗರು

ಆದರೆ ನೆಟ್ಟಿಗರಲ್ಲಿ ಕೆಲವರು ಈತನಕ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಜಲ್ಲಿಕಟ್ಟು ಪಂದ್ಯವನ್ನು ನೆನಪಿಸಿಕೊಂಡು, ಇದು ಕಾನೂನು ರೀತಿ ಅಪರಾಧವಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ ಅಪರಾತ್ರಿಯಲ್ಲಿ ಹೀಗೆ ವರ್ತಿಸುವುದು ಎಷ್ಟು ಸರಿ? ಈ ಪ್ರಕರಣವನ್ನು ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಗ್ರಹಿಸಬೇಕಲ್ಲವೆ?

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:05 pm, Tue, 9 May 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ