AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!

Trending News: ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!
ಒರಿಸ್ಸಾದಲ್ಲಿ ಹುಟ್ಟಿರುವ ಮೂರು ಕಣ್ಣು, ಎರಡು ತಲೆ ಇರುವ ಕರು
TV9 Web
| Edited By: |

Updated on:Oct 12, 2021 | 7:33 PM

Share

ನಮ್ಮ ಸುತ್ತಮುತ್ತ ನಡೆಯುವ ಕೆಲವು ಘಟನೆಗಳನ್ನು ನಮಗೆ ನಂಬಲು ಕಷ್ಟವಾಗುತ್ತದೆ. ಈ ರೀತಿಯ ವಿಸ್ಮಯಗಳನ್ನು ನಂಬಲು ಕಷ್ಟವಾದರೂ ನಂಬಲೇಬೇಕು. ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ. ಈ ವಿಶಿಷ್ಠವಾದ ಕರುವನ್ನು ನೋಡಲು ವಿವಿಧ ಕಡೆಗಳಿಂದ ಜನರು ಆಗಮಿಸುತ್ತಿದ್ದಾರೆ.

ನಬ್ರಂಗ್​ಪುರದ ಧನಿರಾಂ ಎಂಬ ರೈತನ ಕೊಟ್ಟಿಗೆಯಲ್ಲಿರುವ ಹಸುವಿಗೆ ಈ ಅಪರೂಪದ ಮತ್ತು ವಿಶೇಷವಾದ ಕರು ಹುಟ್ಟಿದೆ. ಎರಡು ತಲೆ, ಮೂರು ಕಣ್ಣುಗಳಿರುವ ಈ ಕರುವನ್ನು ನೋಡಿದ ಹಸುವಿನ ಮಾಲೀಕ ಕೂಡ ಅಚ್ಚರಿ ಪಟ್ಟಿದ್ದಾರೆ. ಬಳಿಕ ಈ ವಿಷಯವನ್ನು ಊರಿನವರಿಗೆ ತಿಳಿಸಿದ್ದಾರೆ. ಕರು ಆರೋಗ್ಯದಿಂದಿದ್ದು, ದುರ್ಗಾ ಮಾತೆಯ ಪ್ರತಿರೂಪ ಎಂದು ಹಲವರು ಬಂದು ಪೂಜೆ ಸಲ್ಲಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಧನಿರಾಂ ಈ ಹಸುವನ್ನು ಖರೀದಿಸಿದ್ದರು. ಈ ಹಸು ಇತ್ತೀಚೆಗೆ ಗರ್ಭ ಧರಿಸಿತ್ತು. ನವರಾತ್ರಿಯ ದಿನವೇ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಎರಡು ತಲೆಯ ಈ ಕರು ಎಲ್ಲರ ಗಮನ ಸೆಳೆಯುತ್ತಿದೆ. ಮುಕ್ಕಣ್ಣನಂತಿರುವ ಈ ಕರುವಿಗೆ ಎರಡು ತಲೆಗಳಿರುವುದರಿಂದ ಹಾಲು ಕುಡಿಯಲು ಕಷ್ಟವಾಗುತ್ತಿದೆ. ಹಸುವಿನ ಕೆಚ್ಚಲಿನಿಂದ ಕರುವಿಗೆ ಹಾಲು ಕುಡಿಯುವುದು ಕಷ್ಟವಾದ್ದರಿಂದ ಹೊರಗಿನಿಂದ ಪ್ಯಾಕೆಟ್ ಹಾಲನ್ನು ಖರೀದಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ: Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Published On - 7:31 pm, Tue, 12 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ