AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!

Trending News: ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!
ಒರಿಸ್ಸಾದಲ್ಲಿ ಹುಟ್ಟಿರುವ ಮೂರು ಕಣ್ಣು, ಎರಡು ತಲೆ ಇರುವ ಕರು
TV9 Web
| Edited By: |

Updated on:Oct 12, 2021 | 7:33 PM

Share

ನಮ್ಮ ಸುತ್ತಮುತ್ತ ನಡೆಯುವ ಕೆಲವು ಘಟನೆಗಳನ್ನು ನಮಗೆ ನಂಬಲು ಕಷ್ಟವಾಗುತ್ತದೆ. ಈ ರೀತಿಯ ವಿಸ್ಮಯಗಳನ್ನು ನಂಬಲು ಕಷ್ಟವಾದರೂ ನಂಬಲೇಬೇಕು. ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ. ಈ ವಿಶಿಷ್ಠವಾದ ಕರುವನ್ನು ನೋಡಲು ವಿವಿಧ ಕಡೆಗಳಿಂದ ಜನರು ಆಗಮಿಸುತ್ತಿದ್ದಾರೆ.

ನಬ್ರಂಗ್​ಪುರದ ಧನಿರಾಂ ಎಂಬ ರೈತನ ಕೊಟ್ಟಿಗೆಯಲ್ಲಿರುವ ಹಸುವಿಗೆ ಈ ಅಪರೂಪದ ಮತ್ತು ವಿಶೇಷವಾದ ಕರು ಹುಟ್ಟಿದೆ. ಎರಡು ತಲೆ, ಮೂರು ಕಣ್ಣುಗಳಿರುವ ಈ ಕರುವನ್ನು ನೋಡಿದ ಹಸುವಿನ ಮಾಲೀಕ ಕೂಡ ಅಚ್ಚರಿ ಪಟ್ಟಿದ್ದಾರೆ. ಬಳಿಕ ಈ ವಿಷಯವನ್ನು ಊರಿನವರಿಗೆ ತಿಳಿಸಿದ್ದಾರೆ. ಕರು ಆರೋಗ್ಯದಿಂದಿದ್ದು, ದುರ್ಗಾ ಮಾತೆಯ ಪ್ರತಿರೂಪ ಎಂದು ಹಲವರು ಬಂದು ಪೂಜೆ ಸಲ್ಲಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಧನಿರಾಂ ಈ ಹಸುವನ್ನು ಖರೀದಿಸಿದ್ದರು. ಈ ಹಸು ಇತ್ತೀಚೆಗೆ ಗರ್ಭ ಧರಿಸಿತ್ತು. ನವರಾತ್ರಿಯ ದಿನವೇ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಎರಡು ತಲೆಯ ಈ ಕರು ಎಲ್ಲರ ಗಮನ ಸೆಳೆಯುತ್ತಿದೆ. ಮುಕ್ಕಣ್ಣನಂತಿರುವ ಈ ಕರುವಿಗೆ ಎರಡು ತಲೆಗಳಿರುವುದರಿಂದ ಹಾಲು ಕುಡಿಯಲು ಕಷ್ಟವಾಗುತ್ತಿದೆ. ಹಸುವಿನ ಕೆಚ್ಚಲಿನಿಂದ ಕರುವಿಗೆ ಹಾಲು ಕುಡಿಯುವುದು ಕಷ್ಟವಾದ್ದರಿಂದ ಹೊರಗಿನಿಂದ ಪ್ಯಾಕೆಟ್ ಹಾಲನ್ನು ಖರೀದಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ: Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Published On - 7:31 pm, Tue, 12 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್