AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!

Trending News: ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!
ಒರಿಸ್ಸಾದಲ್ಲಿ ಹುಟ್ಟಿರುವ ಮೂರು ಕಣ್ಣು, ಎರಡು ತಲೆ ಇರುವ ಕರು
TV9 Web
| Updated By: ಸುಷ್ಮಾ ಚಕ್ರೆ|

Updated on:Oct 12, 2021 | 7:33 PM

Share

ನಮ್ಮ ಸುತ್ತಮುತ್ತ ನಡೆಯುವ ಕೆಲವು ಘಟನೆಗಳನ್ನು ನಮಗೆ ನಂಬಲು ಕಷ್ಟವಾಗುತ್ತದೆ. ಈ ರೀತಿಯ ವಿಸ್ಮಯಗಳನ್ನು ನಂಬಲು ಕಷ್ಟವಾದರೂ ನಂಬಲೇಬೇಕು. ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ. ಈ ವಿಶಿಷ್ಠವಾದ ಕರುವನ್ನು ನೋಡಲು ವಿವಿಧ ಕಡೆಗಳಿಂದ ಜನರು ಆಗಮಿಸುತ್ತಿದ್ದಾರೆ.

ನಬ್ರಂಗ್​ಪುರದ ಧನಿರಾಂ ಎಂಬ ರೈತನ ಕೊಟ್ಟಿಗೆಯಲ್ಲಿರುವ ಹಸುವಿಗೆ ಈ ಅಪರೂಪದ ಮತ್ತು ವಿಶೇಷವಾದ ಕರು ಹುಟ್ಟಿದೆ. ಎರಡು ತಲೆ, ಮೂರು ಕಣ್ಣುಗಳಿರುವ ಈ ಕರುವನ್ನು ನೋಡಿದ ಹಸುವಿನ ಮಾಲೀಕ ಕೂಡ ಅಚ್ಚರಿ ಪಟ್ಟಿದ್ದಾರೆ. ಬಳಿಕ ಈ ವಿಷಯವನ್ನು ಊರಿನವರಿಗೆ ತಿಳಿಸಿದ್ದಾರೆ. ಕರು ಆರೋಗ್ಯದಿಂದಿದ್ದು, ದುರ್ಗಾ ಮಾತೆಯ ಪ್ರತಿರೂಪ ಎಂದು ಹಲವರು ಬಂದು ಪೂಜೆ ಸಲ್ಲಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಧನಿರಾಂ ಈ ಹಸುವನ್ನು ಖರೀದಿಸಿದ್ದರು. ಈ ಹಸು ಇತ್ತೀಚೆಗೆ ಗರ್ಭ ಧರಿಸಿತ್ತು. ನವರಾತ್ರಿಯ ದಿನವೇ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಎರಡು ತಲೆಯ ಈ ಕರು ಎಲ್ಲರ ಗಮನ ಸೆಳೆಯುತ್ತಿದೆ. ಮುಕ್ಕಣ್ಣನಂತಿರುವ ಈ ಕರುವಿಗೆ ಎರಡು ತಲೆಗಳಿರುವುದರಿಂದ ಹಾಲು ಕುಡಿಯಲು ಕಷ್ಟವಾಗುತ್ತಿದೆ. ಹಸುವಿನ ಕೆಚ್ಚಲಿನಿಂದ ಕರುವಿಗೆ ಹಾಲು ಕುಡಿಯುವುದು ಕಷ್ಟವಾದ್ದರಿಂದ ಹೊರಗಿನಿಂದ ಪ್ಯಾಕೆಟ್ ಹಾಲನ್ನು ಖರೀದಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ: Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Published On - 7:31 pm, Tue, 12 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!