AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!

Trending News: ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ.

Viral Video: ನವರಾತ್ರಿ ದಿನವೇ 2 ತಲೆ, 3 ಕಣ್ಣುಗಳಿರುವ ಕರು ಜನನ; ದುರ್ಗೆಯ ಅವತಾರವೆಂದು ಪೂಜಿಸಿದ ಜನರು!
ಒರಿಸ್ಸಾದಲ್ಲಿ ಹುಟ್ಟಿರುವ ಮೂರು ಕಣ್ಣು, ಎರಡು ತಲೆ ಇರುವ ಕರು
TV9 Web
| Edited By: |

Updated on:Oct 12, 2021 | 7:33 PM

Share

ನಮ್ಮ ಸುತ್ತಮುತ್ತ ನಡೆಯುವ ಕೆಲವು ಘಟನೆಗಳನ್ನು ನಮಗೆ ನಂಬಲು ಕಷ್ಟವಾಗುತ್ತದೆ. ಈ ರೀತಿಯ ವಿಸ್ಮಯಗಳನ್ನು ನಂಬಲು ಕಷ್ಟವಾದರೂ ನಂಬಲೇಬೇಕು. ಒರಿಸ್ಸಾದ ನಬ್ರಂಗ್​ಪುರದಲ್ಲಿ ಎರಡು ತಲೆ, ಮೂರು ಕಣ್ಣುಗಳು ಇರುವ ಕರುವೊಂದು ಜನಿಸಿದೆ. ನವರಾತ್ರಿ ಸಂದರ್ಭದಲ್ಲೇ ಜನಿಸಿದ ಈ ಕರುವನ್ನು ದುರ್ಗಾ ದೇವಿಯ ಅವತಾರ ಎಂದು ಪೂಜಿಸಲಾಗುತ್ತಿದೆ. ಈ ವಿಶಿಷ್ಠವಾದ ಕರುವನ್ನು ನೋಡಲು ವಿವಿಧ ಕಡೆಗಳಿಂದ ಜನರು ಆಗಮಿಸುತ್ತಿದ್ದಾರೆ.

ನಬ್ರಂಗ್​ಪುರದ ಧನಿರಾಂ ಎಂಬ ರೈತನ ಕೊಟ್ಟಿಗೆಯಲ್ಲಿರುವ ಹಸುವಿಗೆ ಈ ಅಪರೂಪದ ಮತ್ತು ವಿಶೇಷವಾದ ಕರು ಹುಟ್ಟಿದೆ. ಎರಡು ತಲೆ, ಮೂರು ಕಣ್ಣುಗಳಿರುವ ಈ ಕರುವನ್ನು ನೋಡಿದ ಹಸುವಿನ ಮಾಲೀಕ ಕೂಡ ಅಚ್ಚರಿ ಪಟ್ಟಿದ್ದಾರೆ. ಬಳಿಕ ಈ ವಿಷಯವನ್ನು ಊರಿನವರಿಗೆ ತಿಳಿಸಿದ್ದಾರೆ. ಕರು ಆರೋಗ್ಯದಿಂದಿದ್ದು, ದುರ್ಗಾ ಮಾತೆಯ ಪ್ರತಿರೂಪ ಎಂದು ಹಲವರು ಬಂದು ಪೂಜೆ ಸಲ್ಲಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಧನಿರಾಂ ಈ ಹಸುವನ್ನು ಖರೀದಿಸಿದ್ದರು. ಈ ಹಸು ಇತ್ತೀಚೆಗೆ ಗರ್ಭ ಧರಿಸಿತ್ತು. ನವರಾತ್ರಿಯ ದಿನವೇ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದ್ದು, ಎರಡು ತಲೆಯ ಈ ಕರು ಎಲ್ಲರ ಗಮನ ಸೆಳೆಯುತ್ತಿದೆ. ಮುಕ್ಕಣ್ಣನಂತಿರುವ ಈ ಕರುವಿಗೆ ಎರಡು ತಲೆಗಳಿರುವುದರಿಂದ ಹಾಲು ಕುಡಿಯಲು ಕಷ್ಟವಾಗುತ್ತಿದೆ. ಹಸುವಿನ ಕೆಚ್ಚಲಿನಿಂದ ಕರುವಿಗೆ ಹಾಲು ಕುಡಿಯುವುದು ಕಷ್ಟವಾದ್ದರಿಂದ ಹೊರಗಿನಿಂದ ಪ್ಯಾಕೆಟ್ ಹಾಲನ್ನು ಖರೀದಿಸಿ ನೀಡಲಾಗುತ್ತಿದೆ.

ಇದನ್ನೂ ಓದಿ: Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

Published On - 7:31 pm, Tue, 12 October 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್