ಉತ್ತರಾಖಂಡ: ಭಾರೀ ಭೂಕುಸಿತ; ಸೆಕೆಂಡುಗಳ ಅಂತರದಲ್ಲಿ ಪಾರಾದ ಕಾರ್ಮಿಕರು

ಚಮೋಲಿ ಜಿಲ್ಲೆಯ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ರಸ್ತೆ ನಿರ್ಮಾಣದಲ್ಲಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಇಲ್ಲಿದೆ ನೋಡಿ.

ಉತ್ತರಾಖಂಡ: ಭಾರೀ ಭೂಕುಸಿತ; ಸೆಕೆಂಡುಗಳ ಅಂತರದಲ್ಲಿ ಪಾರಾದ ಕಾರ್ಮಿಕರು
ಭಾರೀ ಭೂಕುಸಿತ; ಸೆಕೆಂಡುಗಳ ಅಂತರದಲ್ಲಿ ಪಾರಾದ ಕಾರ್ಮಿಕರು

Updated on: Jul 12, 2024 | 4:58 PM

ಚಮೋಲಿ ಜಿಲ್ಲೆಯ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭಾರೀ ಭೂಕುಸಿತ ಸಂಭವಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ರಸ್ತೆ ನಿರ್ಮಾಣದ ಕಾರ್ಮಿಕರು ಕೇವಲ ಸೆಕೆಂಡುಗಳ ಅಂತರದಲ್ಲಿ ದುರಂತದಿಂದ ಪಾರಾಗಿದ್ದಾರೆ. ಬಂಡೆಗಳು ಬೀಳುತ್ತಿದ್ದಂತೆ ಕಾರ್ಮಿಕರು ಓಡೋಡಿ ಬಂದಿದ್ದು, ದುರಂತದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಕಾರ್ಮಿಕರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಸ್ಥಳದಿಂದ ಓಡಿಹೋಗುತ್ತಿರುವುದು ಕಂಡುಬಂದಿದೆ. ಭಾರೀ ಭೂ ಕುಸಿತ ಸಂಭವಿಸಿದ್ದು, ಘಟನೆಗೆ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ಚಮೋಲಿಯಲ್ಲಿ ಉಂಟಾದ ಈ ಭೂಕುಸಿತವು ರಸ್ತೆ ಸಂಚಾರಕ್ಕೆ ಅಡ್ಡಿಯುಂಟು ಮಾಡಿತ್ತು, ಆದರೆ ಗುರುವಾರ ಅದನ್ನು ತೆರವುಗೊಳಿಸಿ ಯಾತ್ರಿಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. “ಚಮೋಲಿಯ ಭಾನೇರ್ಪಾನಿ ​​ಬಳಿ ನಿರ್ಬಂಧಿಸಲಾದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ” ಎಂದು ಉತ್ತರಾಖಂಡ್ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us