Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರು ಖರೀದಿಸಿ ಮನೆಗೆ ಗ್ರಾಂಡ್ ಎಂಟ್ರಿ ಕೊಟ್ಟ ಶೈಲಿ ನೋಡಿ

ವ್ಯಕ್ತಿಯೊಬ್ಬರು ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಮನೆಯಂಗಳದಲ್ಲಿ ಪಾರ್ಕಿಂಗ್ ಮಾಡಿದ ಶೈಲಿಯ ವಿಡಿಯೋವೊಂದು ವೈರಲ್ ಆಗುತ್ತಿದ್ದು, ನೆಟ್ಟಿಗರಿಗೆ ಸಖತ್ ಮನರಂಜನೆಯನ್ನು ನೀಡುತ್ತಿದೆ.

Viral Video: ಕಾರು ಖರೀದಿಸಿ ಮನೆಗೆ ಗ್ರಾಂಡ್ ಎಂಟ್ರಿ ಕೊಟ್ಟ ಶೈಲಿ ನೋಡಿ
ಬೈಕ್​ಗಳಿಗೆ ಗುದ್ದಿದ ಕಾರು
Follow us
TV9 Web
| Updated By: Rakesh Nayak Manchi

Updated on: Oct 09, 2022 | 10:38 AM

ಕಾರು ಖರೀದಿಸುವುದು ಪ್ರತಿಯೊಬ್ಬರು ಕನಸು. ಈ ಕನಸು ನನಸು ಮಾಡಿಕೊಂಡವು ಕಾರನ್ನು ಬಹಳ ಜಾಗರೂಕತೆಯಿಂದ ಮನೆಗೆ ತಂದು ಮಗುವಿನಂತೆ ನೋಡಿಕೊಳ್ಳುತ್ತಾರೆ. ಆದರೆ ಕೆಲವರ ಹಿಂದೆ ದುರದೃಷ್ಟ ಅಡಗಿರುತ್ತದೆ. ಹೀಗಿದ್ದಾಗ ಹೊಸ ಕಾರು ಖರೀದಿಸಿ ಮನೆಗೆ ತಲುಪುವಷ್ಟರಲ್ಲಿ ಅಪಘಾತವಾಗುತ್ತದೆ. ಇಂತಹ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. Sqn Ldr ವಿನೋದ್ ಕುಮಾರ್ (ನಿವೃತ್ತ) ಅವರು “ಮನೆಗೆ ಎಂತಹ ಅದ್ದೂರಿ ಆಗಮನ?” ಎಂಬ ಶೀರ್ಷಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಘಟನೆ ಮುಂಬೈನಲ್ಲಿ ನಡೆದಿದೆ ಎಂದು ಅವರು ಕಾಮೆಂಟ್ ವಿಭಾಗದಲ್ಲಿ ತಿಳಿಸಿದ್ದಾರೆ.

ವ್ಯಕ್ತಿಯೊಬ್ಬ ವಸತಿ ಸಮುಚ್ಚಯದ ಮುಖ್ಯ ಗೇಟ್ ಅನ್ನು ತೆರೆದು ಕಾರು ಒಳಗೆ ಬರಲು ಸೂಚಿಸುತ್ತಿರುವಲ್ಲಿಂದ ವಿಡಿಯೋ ಕ್ಲಿಪ್ ಆರಂಭವಾಗುತ್ತದೆ. ಸ್ವಲ್ಪ ಸಮಯದ ನಂತರ ವ್ಯಕ್ತಿ ಹೂವಿನ ಹಾರ ಹಾಕಿ ತಂದ ಕಾರನ್ನು ಬಹಳ ಜಾಗರೂಕತೆಯಿಂದ ಗೇಟ್ ಒಳಗೆ ತರುತ್ತಾರೆ. ಅದಾಗ್ಯೂ ಚಾಲಕನ ನಿಯಂತ್ರಣ ಕಳೆದುಕೊಂಡು ಅಂಗಳದಲ್ಲಿ ಸಾಲಾಗಿ ಪಾರ್ಕ್ ಮಾಡಿದ್ದ ಬೈಕ್​ಗಳ ಮೇಲೆ ಹತ್ತಿ ಕಾರು ಅರ್ಧ ಮಗುಚಿ ನಿಲ್ಲುತ್ತದೆ. ಈ ವೇಳೆ ಭದ್ರತಾ ಸಿಬ್ಬಂದಿ ಓಡೋಡಿ ಬಂದು ಕಾರು ಪೂರ್ಣ ಮಗುಚಿ ಬೀಳದಂತೆ ಹಿಡಿಯಲು ಮುಂದಾಗುವುದು ವಿಡಿಯೋದನ್ನು ಕಾಣಬಹುದು. ಈ ಎಲ್ಲಾ ದೃಶ್ಯಾವಳಿಗಳು ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋ ಅಪ್‌ಲೋಡ್ ಮಾಡಿದ ನಂತರ 6,22,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 13,000 ಕ್ಕೂ ಹೆಚ್ಚು ಇಷ್ಟಗಳನ್ನು ಸಂಗ್ರಹಿಸಿದೆ. ಇಂಟರ್ನೆಟ್ ಬಳಕೆದಾರರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ಅಪಘಾತವನ್ನು “ದುರಂತ” ಎಂದು ಕಂಡುಕೊಂಡರೆ, ಇತರರು ಅಪಘಾತ ಹೇಗೆ ಸಂಭವಿಸಬಹುದು ಎಂಬುದರ ವಿವರಣೆಯೊಂದಿಗೆ ಬರಲು ಪ್ರಯತ್ನಿಸಿದ್ದಾರೆ. “ಇಂತಹ ರೋಚಕ ಆಗಮನವನ್ನು ಇಲ್ಲಿಯವರೆಗೆ ನೋಡಿಲ್ಲ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. “ಬ್ರೇಕ್ ಒತ್ತಿ ಮತ್ತು ಸ್ಟೀರಿಂಗ್ ಅನ್ನು ನೇರಗೊಳಿಸುವ ಬದಲು ಚಾಲಕ ಗಾಬರಿಗೊಂಡು ಎಕ್ಸಲೇಟರ್ ಅನ್ನು ಒತ್ತಿದನು’’ ಎಂದು ಇನ್ನೊಬ್ಬರು ಹೇಳಿದರು.

ಮೂರನೆಯವರು, “ಬಡ ನಿರ್ಜೀವ ದ್ವಿಚಕ್ರ ವಾಹನಗಳು ಮತ್ತು ಅವುಗಳ ಮಾಲೀಕರ ಭವಿಷ್ಯವು ದುರದೃಷ್ಟಕರವಾಗಿದೆ” ಹೇಳಿದ್ದಾರೆ. “ತೀಕ್ಷ್ಣವಾದ ತಿರುವು ತೆಗೆದುಕೊಂಡ ಕ್ಷಣ ನನಗೆ ತಿಳಿಯಿತು ಅದು ಚೆನ್ನಾಗಿ ಕೊನೆಗೊಳ್ಳುವುದಿಲ್ಲ. ಅದೃಷ್ಟವಶಾತ್ ಯಾರೂ ಇರಲಿಲ್ಲ” ಎಂದು ನಾಲ್ಕನೆಯವರು ಹೇಳಿದರು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ