AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಪ್ಲೇಟ್​​​​ ಇಡ್ಲಿ ಬೆಲೆ ಬರೋಬ್ಬರಿ 500ರೂ.; ಯಾಕಿಷ್ಟು ದುಬಾರಿ ಗೊತ್ತಾ?

ಚೆನ್ನೈನ ಹೋಟೆಲ್ ಒಂದರಲ್ಲಿ ನೀವು ಇಡ್ಲಿ ಸವಿಯಬೇಕಾದರೆ ಒಂದು ಪ್ಲೇಟ್​​​​ ಇಡ್ಲಿಗೆ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30, 40 ರೂ. ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಎಂದು ನೀವು ಯೋಚಿಸುತ್ತಿರಬಹುದು. ಹಾಗಿದ್ರೆ ಈ ವಿಡಿಯೋ ನೋಡಿ.

Viral Video: ಒಂದು ಪ್ಲೇಟ್​​​​ ಇಡ್ಲಿ ಬೆಲೆ ಬರೋಬ್ಬರಿ 500ರೂ.; ಯಾಕಿಷ್ಟು ದುಬಾರಿ ಗೊತ್ತಾ?
Image Credit source: Thamodharan B
ಅಕ್ಷತಾ ವರ್ಕಾಡಿ
|

Updated on:Jun 27, 2024 | 5:26 PM

Share

ಬೆಳಗ್ಗಿನ ತಿಂಡಿ ಎಂದಾಕ್ಷಣ ಹೆಚ್ಚಿನವರಿಗೆ ನೆನಪಾಗುವುದು ಇಡ್ಲಿ ಸಾಂಬಾರ್​​​. ಈ ಇಡ್ಲಿ ಕಡಿಮೆ ಬೆಲೆಯ ಜೊತೆಗೆ ರುಚಿಕರ ಉಪಹಾರವು ಹೌದು. ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್​ಗಳಲ್ಲಿ 30ರಿಂದ ಹಿಡಿದು ಹೆಚ್ಚೆಂದರೆ 50ರೂಪಾಯಿಯ ಒಳಗಡೆ ಬಿಸಿಬಿಸಿಯಾದ ಇಡ್ಲಿಯನ್ನು ಸವಿಯಬಹುದು. ಆದರೆ ಚೆನ್ನೈನ ಹೋಟೆಲ್ ಒಂದರಲ್ಲಿ ಒಂದು ಪ್ಲೇಟ್​​​​ ಇಡ್ಲಿಗೆ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. ಅಷ್ಟಕ್ಕೂ ಒಂದು ಪ್ಲೇಟ್​​​​ ಇಡ್ಲಿ ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ? ಇಲ್ಲಿ ತಿಳಿದುಕೊಳ್ಳಿ.

ಈ ಇಡ್ಲಿಯನ್ನು ಚೆನ್ನೈನ ಅಡ್ಯಾರ್ ಆನಂದ ಭವನ ಹೋಟೆಲ್‌ನಲ್ಲಿ ಲಭ್ಯವಿದೆ. ಈ ಇಡ್ಲಿ ದುಬಾರಿಯಾಗಲು ಕಾರಣ ಅದರ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳು. ಬಾದಾಮಿ, ಬೆರಿಹಣ್ಣುಗಳು, ಆಲಿವ್ ಎಣ್ಣೆ ಮತ್ತು ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತದೆ. ಲವಂಗ, ದಾಲ್ಚಿನ್ನಿ, ಮಶ್ರೂಮ್, ಬ್ರೆಜಿಲ್ ನಟ್, ಒಮೆಗಾ 3 – ಅಗಸೆಬೀಜ, ಶುಂಠಿ ಪುಡಿ, ಅಶ್ವಗಂಧ ಸಾರ, 24 ಗಂಟೆಗಳ ಕಾಲ ನೆನೆಸಿದ ಬಾದಾಮಿ, ವಾಲ್್ನಟ್ಸ್, ಪಿಸ್ತಾ, ಗೋಡಂಬಿ, ನೀಲಿ ಹಣ್ಣುಗಳು, ಆಲಿವ್ ಎಣ್ಣೆ, ಕೊತ್ತಂಬರಿ, ಆವಕಾಡೊ, ಕೇಸರಿ ಇತ್ಯಾದಿ ಪೋಷಕಾಂಶಗಳಿಂದ ಕೂಡಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ.

ಮಧುಮೇಹಿಗಳು ಕೂಡ ಈ ಇಡ್ಲಿಯನ್ನು ಹಿಂಜರಿಕೆಯಿಲ್ಲದೆ ಸವಿಯಬಹುದು. ಇಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಬಳಸುವ ಆಲಿವ್ ಎಣ್ಣೆಯು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಉಪಯುಕ್ತವಾಗಿದೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಬ್ಲೂಬೆರ್ರಿಗಳನ್ನು ಸಹ ಇದರಲ್ಲಿ ಬಳಸಲಾಗುತ್ತದೆ.

ಇದನ್ನೂ ಓದಿ: ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ, ಎಲ್ಲವೂ ದುಡ್ಡಿನ ಮಹಿಮೆ

@foodtastingmission ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಶೇಷ ಇಡ್ಲಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 21ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 27 June 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?
ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ?