AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದು ಪ್ಲೇಟ್​​​​ ಇಡ್ಲಿ ಬೆಲೆ ಬರೋಬ್ಬರಿ 500ರೂ.; ಯಾಕಿಷ್ಟು ದುಬಾರಿ ಗೊತ್ತಾ?

ಚೆನ್ನೈನ ಹೋಟೆಲ್ ಒಂದರಲ್ಲಿ ನೀವು ಇಡ್ಲಿ ಸವಿಯಬೇಕಾದರೆ ಒಂದು ಪ್ಲೇಟ್​​​​ ಇಡ್ಲಿಗೆ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. 30, 40 ರೂ. ಸಿಗುವ ಇಡ್ಲಿಗೆ ಇಷ್ಟೊಂದು ಯಾಕೆ ಪಾವತಿಸಬೇಕು ಎಂದು ನೀವು ಯೋಚಿಸುತ್ತಿರಬಹುದು. ಹಾಗಿದ್ರೆ ಈ ವಿಡಿಯೋ ನೋಡಿ.

Viral Video: ಒಂದು ಪ್ಲೇಟ್​​​​ ಇಡ್ಲಿ ಬೆಲೆ ಬರೋಬ್ಬರಿ 500ರೂ.; ಯಾಕಿಷ್ಟು ದುಬಾರಿ ಗೊತ್ತಾ?
Image Credit source: Thamodharan B
ಅಕ್ಷತಾ ವರ್ಕಾಡಿ
|

Updated on:Jun 27, 2024 | 5:26 PM

Share

ಬೆಳಗ್ಗಿನ ತಿಂಡಿ ಎಂದಾಕ್ಷಣ ಹೆಚ್ಚಿನವರಿಗೆ ನೆನಪಾಗುವುದು ಇಡ್ಲಿ ಸಾಂಬಾರ್​​​. ಈ ಇಡ್ಲಿ ಕಡಿಮೆ ಬೆಲೆಯ ಜೊತೆಗೆ ರುಚಿಕರ ಉಪಹಾರವು ಹೌದು. ಮನೆಯಲ್ಲಿ ತಿನ್ನುವ ಹೊರತಾಗಿ ಹೋಟೆಲ್​ಗಳಲ್ಲಿ 30ರಿಂದ ಹಿಡಿದು ಹೆಚ್ಚೆಂದರೆ 50ರೂಪಾಯಿಯ ಒಳಗಡೆ ಬಿಸಿಬಿಸಿಯಾದ ಇಡ್ಲಿಯನ್ನು ಸವಿಯಬಹುದು. ಆದರೆ ಚೆನ್ನೈನ ಹೋಟೆಲ್ ಒಂದರಲ್ಲಿ ಒಂದು ಪ್ಲೇಟ್​​​​ ಇಡ್ಲಿಗೆ ಬರೋಬ್ಬರಿ 500ರೂಪಾಯಿಯನ್ನು ಪಾವತಿಸಬೇಕು. ಅಷ್ಟಕ್ಕೂ ಒಂದು ಪ್ಲೇಟ್​​​​ ಇಡ್ಲಿ ಯಾಕಿಷ್ಟು ದುಬಾರಿ? ಏನಿದರ ವಿಶೇಷತೆ? ಇಲ್ಲಿ ತಿಳಿದುಕೊಳ್ಳಿ.

ಈ ಇಡ್ಲಿಯನ್ನು ಚೆನ್ನೈನ ಅಡ್ಯಾರ್ ಆನಂದ ಭವನ ಹೋಟೆಲ್‌ನಲ್ಲಿ ಲಭ್ಯವಿದೆ. ಈ ಇಡ್ಲಿ ದುಬಾರಿಯಾಗಲು ಕಾರಣ ಅದರ ತಯಾರಿಕೆಯಲ್ಲಿ ಬಳಸುವ ಪದಾರ್ಥಗಳು. ಬಾದಾಮಿ, ಬೆರಿಹಣ್ಣುಗಳು, ಆಲಿವ್ ಎಣ್ಣೆ ಮತ್ತು ಇತರ ಅನೇಕ ಪದಾರ್ಥಗಳನ್ನು ಬಳಸಲಾಗುತ್ತದೆ. ಲವಂಗ, ದಾಲ್ಚಿನ್ನಿ, ಮಶ್ರೂಮ್, ಬ್ರೆಜಿಲ್ ನಟ್, ಒಮೆಗಾ 3 – ಅಗಸೆಬೀಜ, ಶುಂಠಿ ಪುಡಿ, ಅಶ್ವಗಂಧ ಸಾರ, 24 ಗಂಟೆಗಳ ಕಾಲ ನೆನೆಸಿದ ಬಾದಾಮಿ, ವಾಲ್್ನಟ್ಸ್, ಪಿಸ್ತಾ, ಗೋಡಂಬಿ, ನೀಲಿ ಹಣ್ಣುಗಳು, ಆಲಿವ್ ಎಣ್ಣೆ, ಕೊತ್ತಂಬರಿ, ಆವಕಾಡೊ, ಕೇಸರಿ ಇತ್ಯಾದಿ ಪೋಷಕಾಂಶಗಳಿಂದ ಕೂಡಿರುವ ಪದಾರ್ಥಗಳಿಂದ ತಯಾರಿಸಲಾಗುತ್ತದೆ.

ಮಧುಮೇಹಿಗಳು ಕೂಡ ಈ ಇಡ್ಲಿಯನ್ನು ಹಿಂಜರಿಕೆಯಿಲ್ಲದೆ ಸವಿಯಬಹುದು. ಇಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಬಳಸುವ ಆಲಿವ್ ಎಣ್ಣೆಯು ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಉಪಯುಕ್ತವಾಗಿದೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಬ್ಲೂಬೆರ್ರಿಗಳನ್ನು ಸಹ ಇದರಲ್ಲಿ ಬಳಸಲಾಗುತ್ತದೆ.

ಇದನ್ನೂ ಓದಿ: ಗರ್ಲ್‌ಫ್ರೆಂಡ್‌ಗಾಗಿ ಕಂತೆ ಕಂತೆ ನೋಟಿನ ಕಾರ್ಪೆಟ್‌ ಹಾಸಿದ ವ್ಯಕ್ತಿ, ಎಲ್ಲವೂ ದುಡ್ಡಿನ ಮಹಿಮೆ

@foodtastingmission ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಶೇಷ ಇಡ್ಲಿಯ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 21ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Thu, 27 June 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್