AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಚೆನ್ನೈ ಯುವಕ

Guinness world record: ಚೆನ್ನೈ ಮೂಲದ ಆಟೋ ರಿಕ್ಷಾ ಚಾಲಕ ಎರಡೇ ಚಕ್ರದಲ್ಲಿ ವಾಹನ ಓಡಿಸುತ್ತಿರುವುದನ್ನು ನೋಡಬಹುದು. ಇವರು 2.2 ಕಿಲೋಮೀಟರ್​ಗಳಷ್ಟು ಆಟೋ ಓಡಿಸಿ ಗಿನ್ನಿಸ್ ವರ್ಡ್ ರೆಕಾರ್ಡ್​ನಲ್ಲಿ ಹೆಸರು ಪಡೆದಿದ್ದಾರೆ.

Viral Video: ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಚೆನ್ನೈ ಯುವಕ
ಎರಡೇ ಚಕ್ರದಲ್ಲಿ ಆಟೋ ರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಜಗದೀಶ್ ಎಂ
Follow us
TV9 Web
| Updated By: shruti hegde

Updated on: Oct 07, 2021 | 1:06 PM

ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಇನ್​ಸ್ಟಾಗ್ರಾಂ ಪುಟವು ಸಾಮಾನ್ಯವಾಗಿ ಕುತೂಹಲ ಕೆರಳಿಸುವ ಕೆಲವು ವಿಡಿಯೋಗಳನ್ನು ಅಥವಾ ಫೋಟೋಗಳನ್ನು ಹಂಚಿಕೊಳ್ಳುತ್ತದೆ. ಅಕ್ಟೋಬರ್ 2ರಂದು ಹಂಚಿಕೊಂಡ ಈ ಪೋಸ್ಟ್​ನಲ್ಲಿ ಚೆನ್ನೈ ಮೂಲದ ಆಟೋ ರಿಕ್ಷಾ ಚಾಲಕ ಎರಡೇ ಚಕ್ರದಲ್ಲಿ ವಾಹನ ಓಡಿಸುತ್ತಿರುವುದನ್ನು ನೋಡಬಹುದು. ಇವರು 2.2 ಕಿಲೋಮೀಟರ್​ಗಳಷ್ಟು ಆಟೋ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್​ನಲ್ಲಿ ಹೆಸರು ಪಡೆದಿದ್ದಾರೆ.

ಇವರ ಹೆಸರು ಜಗದೀಶ್ ಎಂ. ಚೆನ್ನೈ ಮೂಲದವರು. ತನ್ನ ಸ್ವಂತ ಆಟೋ ರಿಕ್ಷಾವನ್ನು ಎರಡೇ ಚಕ್ರದಲ್ಲಿ ಸುಮಾರು 2.2 ಕಿಲೋಮೀಟರ್​ನಷ್ಟು ಓಡಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಈ ಅದ್ಭುತ ಸ್ಟಂಟ್ ಇದೀಗ ಜನರನ್ನು ಬೆರಗುಗೊಳಿಸಿದೆ.

ಗಿನ್ನಿಸ್​ ವರ್ಲ್ಡ್ ರೆಕಾರ್ಡ್​ ಅಧಿಕೃತ ಇನ್​ಸ್ಟಾಗ್ರಾಂ ಪುಟವು ವಿಡಿಯೋವನ್ನು ಹಂಚಿಕೊಂಡಿದೆ. ಎಪಿಕ್ ಆಟೋ ರಿಕ್ಷಾ ಸೈಡ್ ವೀಲಿಂಗ್​. ಆಟೋರಿಕ್ಷಾ ಚಾಲಕ ಜಗದೀಶ್ ಎಂ, ಚೆನ್ನೈ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಜಗದೀಶ್ ಅವರು ಸೈಡ್ ವೀಲಿಂಗ್​ನಲ್ಲಿ ಎರಡೇ ಚಕ್ರದಲ್ಲಿ ಆಟೋರಿಕ್ಷಾ ಓಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಸಾಧಿಸಿದ್ದಾರೆ. ಈ ದಾಖಲೆಯನ್ನು ಸಾಧಿಸುತ್ತೇನೆ ಎದು ನನಗೆ ಯಾವ ಭರವಸೆಯೂ ಇರಲಿಲ್ಲ. ಇದರಿಂದ ನನಗೆ ತೃಪ್ತಿಯಾಗಿದೆ ಎಂದು ಜಗದೀಶ್ ಹೇಳಿದ್ದಾರೆ. ವರದಿಗಳ ಪ್ರಕಾರ ಜಗದೀಶ್ 2 ಕಿಲೋಮೀಟರ್​ವರೆಗೂ ತನ್ನ ಮೂರು ಚಕ್ರದ ವಾಹನ ಆಟೋ ರಿಕ್ಷಾವನ್ನು ಎರಡೇ ಚಕ್ರ ಬಳಸಿ ಚಲಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

Viral Video: ಪುಟ್ಟ ಕಂದಮ್ಮನನ್ನು ರಂಜಿಸಲು ಅಪ್ಪ ನುಡಿಸಿದ ಗಿಟಾರ್ ವಾದ್ಯ; ನೀವೂ ಕೇಳಿ ಆನಂದಿಸಿ

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ