AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?

Animals : ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ.

Viral Video : ಈ ಚಿಂಪಾಂಜಿಯೊಂದಿಗೆ ಸಮಯ ಕಳೆಯಬೇಕೇ?
ಮಹಿಳೆಯನ್ನು ಅಪ್ಪಿಕೊಂಡ ಚಿಂಪಾಂಜಿ
TV9 Web
| Edited By: ಶ್ರೀದೇವಿ ಕಳಸದ|

Updated on:Aug 03, 2022 | 1:29 PM

Share

Viral Video : ಜೀನ್ಸ್ ತೊಟ್ಟಿದ್ದ ಚಿಂಪಾಂಜಿಯೊಂದು ಮಹಿಳೆಗೆ ಮುತ್ತಿಕ್ಕುತ್ತಿರುವ ವಿಡಿಯೋ ಇದೀಗ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಪ್ರಾಣಿಗಳು ಮನುಷ್ಯನಷ್ಟೇ ತೀವ್ರವಾದ ಭಾವನೆಗಳನ್ನು ಹೊಂದಿವೆ. ಸ್ಪರ್ಶ, ಪ್ರೀತಿಯಂಥ ಭಾವನೆಯನ್ನು ವ್ಯಕ್ತಪಡಿಸಿ  ಪ್ರತಿಸ್ಪಂದನೆ ನಿರೀಕ್ಷಿಸುತ್ತಿರುತ್ತವೆ. ಈ ಮಧ್ಯಾಹ್ನದ ಹೊತ್ತಿನಲ್ಲಿ ಕೆಲಸದಲ್ಲಿ ಏಕಾಗ್ರತೆ ಸಾಧಿಸಲಾಗದೆ ಚಡಪಡಿಸುತ್ತಿದ್ದರೆ ನೀವೊಮ್ಮೆ ಈ ವಿಡಿಯೋ ನೋಡಿ, ಮನಸ್ಸು ಉಲ್ಲಸಿತವಾಗುತ್ತದೆ. ಸೌಮ್ಯಾ ಚಂದ್ರಶೇಖರನ್ ಎನ್ನುವವರು ಇತ್ತೀಚೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸಫಾರಿ ವರ್ಲ್ಡ್‌ಗೆ ಭೇಟಿ ನೀಡಿ, ಅಲ್ಲಿದ್ದ ಚಿಂಪಾಂಜಿಯೊಂದಿಗೆ ಫೋಟೋ ಶೂಟ್ ಮಾಡಿಸಿಕೊಂಡು, ಅದನ್ನು ಇನ್​ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ಈ ಪುಟ್ಟ ವಿಡಿಯೋ ಈತನಕ 5.3 ಮಿಲಿಯನ್ ವೀಕ್ಷಣೆ, 255,288 ಲೈಕ್‌ಗಳನ್ನು ಹೊಂದಿದೆ.

ಈ ವೈರಲ್ ವಿಡಿಯೋದಲ್ಲಿ, ಸೌಮ್ಯಾ ಜೋಕಾಲಿಯ ಮೇಲೆ ಕುಳಿತಿದ್ಧಾರೆ. ಪಕ್ಕದಲ್ಲಿ ಜೀನ್ಸ್​ ಧರಿಸಿದ ಚಿಂಪಾಂಜಿ  ಕತ್ತು ಬಳಸಿ ಮುತ್ತು ಕೂಡ ಕೊಟ್ಟಿದೆ.

ಇದನ್ನು ನೋಡಿದ ನೆಟ್ಟಿಗರು ಸಮರೋಪಾದಿಯಲ್ಲಿ ಕಮೆಂಟ್ ಮಾಡಿದ್ದಾರೆ. ಒಬ್ಬರು, “ಇದು ತುಂಬಾ ಮುದ್ದಾಗಿದೆ” ಎಂದಿದ್ದಾರೆ. ಇನ್ನೊಬ್ಬರು, “ನಗು ನಿಲ್ಲಿಸಲು ಸಾಧ್ಯವೇ ಆಗುತ್ತಿಲ್ಲ” ಎಂದಿದ್ದಾರೆ. ಸಫಾರಿ ವರ್ಲ್ಡ್‌ನ ಏಜೆಂಟ್‌ರ ಮೇಲ್ವಿಚಾರಣೆಯಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ.

ಪ್ರಾಣಿಗಳ ಇಂಥ ವಿಡಿಯೋ ನೋಡುವುದರಿಂದ ಮನಸಿನ ಒತ್ತಡ ಕಡಿಮೆಯಾಗುತ್ತದೆ. ಈಗ ನಿಮಗೇನನ್ನಿಸುತ್ತಿದೆ?

Published On - 1:26 pm, Wed, 3 August 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ