AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pigeon: ಗೂಢಚಾರಿಕೆ ಆರೋಪದಡಿ ಪೊಲೀಸ್​​ ವಶದಲ್ಲಿದ್ದ ಪಾರಿವಾಳಕ್ಕೆ ಕಡೆಗೂ ಬಿಡುಗಡೆ

ಗೂಢಚಾರಿಕೆ ಆರೋಪದಡಿ ಕಳೆದ ವರ್ಷ ಮೇ ತಿಂಗಳಿನಿಂದ ಪೊಲೀಸ್​​ ವಶದಲ್ಲಿದ್ದ ಪಾರಿವಾಳವನ್ನು ಕಡೆಗೂ ಬಿಡುಗಡೆಗೊಳಿಸಲಾಗಿದೆ. ಪಾರಿವಾಳವನ್ನು ಅನಗತ್ಯವಾಗಿ ಸೆರೆಹಿಡಿಯಲಾಗಿದೆ ಎಂದು ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದೀಗ ಪಾರಿವಾಳವನ್ನು ಬಿಡುಗಡೆಗೊಳಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Pigeon: ಗೂಢಚಾರಿಕೆ ಆರೋಪದಡಿ ಪೊಲೀಸ್​​ ವಶದಲ್ಲಿದ್ದ ಪಾರಿವಾಳಕ್ಕೆ ಕಡೆಗೂ ಬಿಡುಗಡೆ
ಗೂಢಚಾರಿಕೆ ಆರೋಪದಡಿ ಬಂಧಿಯಾಗಿದ್ದ ಪಾರಿವಾಳImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 03, 2024 | 6:33 PM

Share

ಚೀನಾದ ಗೂಢಚಾರಿ ಎಂಬ ಆರೋಪದಡಿ ಎಂಟು ತಿಂಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿದ್ದ ಪಾರಿವಾಳವನ್ನು ಕಡೆಗೂ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಮುಂಬೈ ಬಂದರಿನಲ್ಲಿ ಪಾರಿವಾಳವೊಂದು ಅನುಮಾನಾಸ್ಪದವಾಗಿ ಕಾಣಿಸಿಕೊಂಡಿತ್ತು. ಇದಲ್ಲದೇ ಪಾರಿವಾಳದ ಕಾಲಿನಲ್ಲಿ 2 ಉಂಗುರಗಳು ಕಾಣಿಸಿಕೊಂಡಿದ್ದು, ಈ ಎರಡೂ ಉಂಗುರಗಳ ಮೇಲೆ ಚೈನೀಸ್ ಅಕ್ಷರಗಳಲ್ಲಿ ಏನೋ ಬರೆದಿದ್ದರಿಂದ ಪಾರಿವಾಳದ ಮೂಲಕ ಚೀನಾ ದೇಶ ಬೇಹುಗಾರಿಕೆ ನಡೆಸುತ್ತಿರಬಹುದು ಎಂದು ಶಂಕಿಸಿ ಪೊಲೀಸರು ಪಾರಿವಾಳವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಆದರೆ ಇಲ್ಲಿಯವರೆಗೆ ಪಾರಿವಾಳ ಎಲ್ಲಿಂದ ಬಂತು ಎಂಬುದರ ಕುರಿತು ಸುದೀರ್ಘ ತನಿಖೆ ನಡೆಸಲಾಗಿದ್ದರೂ ಕೂಡ ಏನು ಪ್ರಯೋಜನವಾಗಿಲ್ಲ.

ಗೂಢಚಾರಿಕೆ ಆರೋಪದಡಿ ಬಂಧಿಯಾಗಿದ್ದ ಪಾರಿವಾಳವನ್ನು ಬಿಡುಗಡೆಗೊಳಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. OfficialPETAIndia ಇನ್ಸ್ಟಾಗ್ರಾಮ್​​​​​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋ ಇದೀಗಾ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ: ಹೆಣ್ಣಿನ ಕುರುಹು ಕಾಣದ ವಿಚಿತ್ರ ಗ್ರಾಮವಿದು; ಏನಿದು ‘ವರ್ಜಿನ್ ವಿಲೇಜ್’?

ವೈರಲ್​​​​ ವಿಡಿಯೋ ಇಲ್ಲಿದೆ ನೋಡಿ:

ಈ ಪಾರಿವಾಳವನ್ನು ಅನಗತ್ಯವಾಗಿ ಸೆರೆಹಿಡಿಯಲಾಗಿದೆ ಎಂದು ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (PETA) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪಾರಿವಾಳವನ್ನು ಸ್ವತಂತ್ರಗೊಳಿಸಲು ದೊಡ್ಡ ಮಟ್ಟದ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಇದೀಗಾ ತನಿಖೆಯನ್ನು ಪೂರ್ಣಗೊಳಿಸಿದ ನಂತರ, ಪಾರಿವಾಳವು ಯಾವುದೇ ಬೇಹುಗಾರಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಪಾರಿವಾಳವನ್ನು ಪಂಜರದಿಂದ ಬಿಡಿಸಿ ಹೊರಗೆ ಬಿಡಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:32 pm, Sat, 3 February 24

Follow Us
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!