AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ

ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯೊಂದರ ಗೋಡೆ ಕುಸಿದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ
ಅಕ್ಷತಾ ವರ್ಕಾಡಿ
|

Updated on: Jul 20, 2024 | 11:55 AM

Share

ಗುಜರಾತ್‌:  ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಜಿಮ್ ಟ್ರೈನರ್​​ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ. @GagandeepNews ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!