AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ

ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯೊಂದರ ಗೋಡೆ ಕುಸಿದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ
ಅಕ್ಷತಾ ವರ್ಕಾಡಿ
|

Updated on: Jul 20, 2024 | 11:55 AM

Share

ಗುಜರಾತ್‌:  ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಜಿಮ್ ಟ್ರೈನರ್​​ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ. @GagandeepNews ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ