AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ

ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯೊಂದರ ಗೋಡೆ ಕುಸಿದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ.

Viral Video: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ
ಅಕ್ಷತಾ ವರ್ಕಾಡಿ
|

Updated on: Jul 20, 2024 | 11:55 AM

Share

ಗುಜರಾತ್‌:  ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ಜಿಮ್ ಟ್ರೈನರ್​​ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ. @GagandeepNews ಟ್ವಿಟರ್​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!