AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಡ್ರೈವರ್​ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಕೊಟ್ಟ ವಿಡಿಯೋ ವೈರಲ್

Maharashtra : ಮಹಾರಾಷ್ಟ್ರದ ಥಾಣೆಯಲ್ಲಿ ಆಟೋಚಾಲಕನೊಬ್ಬ 21 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ತನ್ನ ಆಟೋಗುಂಟ ದರದರನೆ ಎಳೆದೊಯ್ದು ಕಿರುಕುಳ ನೀಡಿದ್ದಾನೆ.

ಆಟೋ ಡ್ರೈವರ್​ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಕೊಟ್ಟ ವಿಡಿಯೋ ವೈರಲ್
College Girl Molested By Auto Driver Dragged For 500 Meters With Vehicle In Thane
ಶ್ರೀದೇವಿ ಕಳಸದ
|

Updated on:Oct 15, 2022 | 10:46 AM

Share

Viral Video : ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯ, ಕಿರುಕುಳದಂಥ ಸಮಸ್ಯೆಗಳು ದಿನೇದಿನೇ ಹೆಚ್ಚುತ್ತಿವೆ. ಸಾಮಾಜಿಕ ಮತ್ತು ನೈತಿಕ ಜವಾಬ್ದಾರಿ ಮರೆಯಾಗುತ್ತಿದೆ. ದಿನವೂ ಒಂದಿಲ್ಲಾ ಒಂದು ಇಂಥ ಘಟನೆಗಳು ನಡೆಯುತ್ತಿದ್ದು ವಿಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮಹಾರಾಷ್ಟ್ರದ ಥಾಣೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಆಟೋ ಚಾಲಕನೊಬ್ಬ ಹಾಡುಹಗಲೇ ಕಿರುಕುಳ ನೀಡಿದ್ದಾನೆ. ತನ್ನ ಆಟೋಗುಂಟ ಸುಮಾರು 500 ಮೀಟರಿನಷ್ಟು ಆಕೆಯನ್ನು ದರದರನೆ ಎಳೆದೊಯ್ದಿದ್ದಾನೆ. ಈ ಆತಂಕಕಾರಿ ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈ ಘಟನೆ ಶುಕ್ರವಾರದಂದು ನಡೆದಿದೆ. ಇನ್ಸ್‌ಪೆಕ್ಟರ್ ಜೈರಾಜ್ ರಾಣಾ ಪ್ರಕಾರ, ಆಟೋ ಚಾಲಕ ಆಕೆಗೆ ಛೇಡಿಸಿದ್ದಾನೆ. ಆ ಕುರಿತು ಆಕೆ ಅವನನ್ನು ಪ್ರಶ್ನಿಸಿದಾಗ ಆಕೆಯ ಕೈಹಿಡಿದಿದ್ದಾನೆ. ಆಕೆ ಅವನ ಕೈಬಿಡದೇ ಇದ್ದಾಗ ತನ್ನ ಆಟೋಗುಂಟ ಎಳೆದೊಯ್ದಿದ್ದಾನೆ. ಈ ದೃಶ್ಯ ಅಮಾನವೀಯತೆಯಿಂದ ಕೂಡಿದೆ.

ಆಟೋ ಚಾಲಕ ಪರಾರಿಯಾಗಲು ಯತ್ನಿಸಿದಾಗ ಆರಂಭದಲ್ಲಿ ಅವನ ಯತ್ನ ವಿಫಲವಾಗಿದೆ. ಏಕೆಂದರೆ, ಆಕೆ ಅವನ ಕೈಯನ್ನು ಗಟ್ಟಿಯಾಗಿ ಹಿಡಿದಿದ್ದಳು. ಅವನು ಸುಮಾರು 500 ಮೀ. ವರೆಗೆ ಹಾಗೇ ಆಕೆಯನ್ನು ಎಳೆದುಕೊಂಡೇ ಹೋಗಿದ್ದಾನೆ. ಆದರೆ, ಕೊನೆಗೂ ಆತ ಆಕೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ರಾಣಾ ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳಾ ದೌರ್ಜನ್ಯದಡಿ ಕೇಸ್​ ದಾಖಲಿಸಲಾಗಿದೆ. ಆದರೆ ಆರೋಪಿ ಪರಾರಿಯಾಗಿದ್ದಾನೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:44 am, Sat, 15 October 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ