AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

"ನಾನು ಬ್ಯಾಂಕ್‌ನಿಂದ ಸಾಲ ಪಡೆದು ಆ ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಸಾಲ ತೀರಿಸಲು ಸಾಧ್ಯವಾಗದೇ 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದ್ದೆ" ಎಂದು ಕಾನ್‌ಸ್ಟೆಬಲ್ ಕಣ್ಣೀರಿಡುತ್ತಾ ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್
ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್
Follow us
ಅಕ್ಷತಾ ವರ್ಕಾಡಿ
|

Updated on:Sep 25, 2024 | 3:41 PM

ಆನ್‌ಲೈನ್ ಗೇಮಿಂಗ್‌ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸೂರ್ಯ ಪ್ರಕಾಶ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಸುಮಾರು 10-15 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಬಗ್ಗೆ ಜೊತೆಗೆ ಇದರಿಂದ ನೊಂದು ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೇಳಿರುವ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಆರ್ಥಿಕ ಸಹಾಯಕ್ಕಾಗಿ ಹಿರಿಯ ಅಧಿಕಾರಿಗಳ ಮುಂದೆ ಕೈ ಚಾಚಿರುವುದನ್ನು ಕಾಣಬಹುದು.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಉನ್ನಾವ್ ಪೊಲೀಸರು ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಸೂರ್ಯ ಪ್ರಕಾಶ್ ಅವರಿಗೆ ಸಲಹೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಹಾಯ ಮಾಡುವುದಾಗಿ ಸಲಹೆ ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

“ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಒತ್ತಡಕ್ಕೊಳಗಾಗಿದ್ದೇನೆ. ನಾನು ಬ್ಯಾಂಕ್‌ನಿಂದ ಸಾಲ ಪಡೆದು ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ನಾನು ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಾನು 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದೆ” ಕಣ್ಣೀರಿಡುತ್ತಾ ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Wed, 25 September 24

ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್