AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

"ನಾನು ಬ್ಯಾಂಕ್‌ನಿಂದ ಸಾಲ ಪಡೆದು ಆ ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಸಾಲ ತೀರಿಸಲು ಸಾಧ್ಯವಾಗದೇ 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದ್ದೆ" ಎಂದು ಕಾನ್‌ಸ್ಟೆಬಲ್ ಕಣ್ಣೀರಿಡುತ್ತಾ ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್
ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್
ಅಕ್ಷತಾ ವರ್ಕಾಡಿ
|

Updated on:Sep 25, 2024 | 3:41 PM

Share

ಆನ್‌ಲೈನ್ ಗೇಮಿಂಗ್‌ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸೂರ್ಯ ಪ್ರಕಾಶ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಸುಮಾರು 10-15 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಬಗ್ಗೆ ಜೊತೆಗೆ ಇದರಿಂದ ನೊಂದು ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೇಳಿರುವ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಆರ್ಥಿಕ ಸಹಾಯಕ್ಕಾಗಿ ಹಿರಿಯ ಅಧಿಕಾರಿಗಳ ಮುಂದೆ ಕೈ ಚಾಚಿರುವುದನ್ನು ಕಾಣಬಹುದು.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಉನ್ನಾವ್ ಪೊಲೀಸರು ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಸೂರ್ಯ ಪ್ರಕಾಶ್ ಅವರಿಗೆ ಸಲಹೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಹಾಯ ಮಾಡುವುದಾಗಿ ಸಲಹೆ ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

“ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಒತ್ತಡಕ್ಕೊಳಗಾಗಿದ್ದೇನೆ. ನಾನು ಬ್ಯಾಂಕ್‌ನಿಂದ ಸಾಲ ಪಡೆದು ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ನಾನು ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಾನು 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದೆ” ಕಣ್ಣೀರಿಡುತ್ತಾ ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Wed, 25 September 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?