Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

"ನಾನು ಬ್ಯಾಂಕ್‌ನಿಂದ ಸಾಲ ಪಡೆದು ಆ ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಸಾಲ ತೀರಿಸಲು ಸಾಧ್ಯವಾಗದೇ 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದ್ದೆ" ಎಂದು ಕಾನ್‌ಸ್ಟೆಬಲ್ ಕಣ್ಣೀರಿಡುತ್ತಾ ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್
ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್
Follow us
|

Updated on:Sep 25, 2024 | 3:41 PM

ಆನ್‌ಲೈನ್ ಗೇಮಿಂಗ್‌ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸೂರ್ಯ ಪ್ರಕಾಶ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಸುಮಾರು 10-15 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಬಗ್ಗೆ ಜೊತೆಗೆ ಇದರಿಂದ ನೊಂದು ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೇಳಿರುವ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಆರ್ಥಿಕ ಸಹಾಯಕ್ಕಾಗಿ ಹಿರಿಯ ಅಧಿಕಾರಿಗಳ ಮುಂದೆ ಕೈ ಚಾಚಿರುವುದನ್ನು ಕಾಣಬಹುದು.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಉನ್ನಾವ್ ಪೊಲೀಸರು ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಸೂರ್ಯ ಪ್ರಕಾಶ್ ಅವರಿಗೆ ಸಲಹೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಹಾಯ ಮಾಡುವುದಾಗಿ ಸಲಹೆ ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

“ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಒತ್ತಡಕ್ಕೊಳಗಾಗಿದ್ದೇನೆ. ನಾನು ಬ್ಯಾಂಕ್‌ನಿಂದ ಸಾಲ ಪಡೆದು ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ನಾನು ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಾನು 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದೆ” ಕಣ್ಣೀರಿಡುತ್ತಾ ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Wed, 25 September 24

CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು