AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್

"ನಾನು ಬ್ಯಾಂಕ್‌ನಿಂದ ಸಾಲ ಪಡೆದು ಆ ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಸಾಲ ತೀರಿಸಲು ಸಾಧ್ಯವಾಗದೇ 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದ್ದೆ" ಎಂದು ಕಾನ್‌ಸ್ಟೆಬಲ್ ಕಣ್ಣೀರಿಡುತ್ತಾ ಹೇಳಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

Video Viral: ಆನ್‌ಲೈನ್ ಗೇಮಿಂಗ್ ಮೂಲಕ 15 ಲಕ್ಷ ರೂ. ಕಳೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್‌ಸ್ಟೆಬಲ್
ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್
ಅಕ್ಷತಾ ವರ್ಕಾಡಿ
|

Updated on:Sep 25, 2024 | 3:41 PM

Share

ಆನ್‌ಲೈನ್ ಗೇಮಿಂಗ್‌ನಲ್ಲಿ ಅಪಾರ ಹಣ ಕಳೆದುಕೊಂಡ ನಂತರ ಕಾನ್‌ಸ್ಟೆಬಲ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸೂರ್ಯ ಪ್ರಕಾಶ್ ಎಂದು ಗುರುತಿಸಲಾದ ಕಾನ್‌ಸ್ಟೆಬಲ್ ಸುಮಾರು 10-15 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ ಬಗ್ಗೆ ಜೊತೆಗೆ ಇದರಿಂದ ನೊಂದು ಒಂದೆರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಬಗ್ಗೆ ಹೇಳಿರುವ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಕಾನ್‌ಸ್ಟೆಬಲ್ ಆರ್ಥಿಕ ಸಹಾಯಕ್ಕಾಗಿ ಹಿರಿಯ ಅಧಿಕಾರಿಗಳ ಮುಂದೆ ಕೈ ಚಾಚಿರುವುದನ್ನು ಕಾಣಬಹುದು.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಉನ್ನಾವ್ ಪೊಲೀಸರು ವೀಡಿಯೊಗೆ ಪ್ರತಿಕ್ರಿಯಿಸಿದ್ದು, ಸೂರ್ಯ ಪ್ರಕಾಶ್ ಅವರಿಗೆ ಸಲಹೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಸಹಾಯ ಮಾಡುವುದಾಗಿ ಸಲಹೆ ನೀಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

“ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಒತ್ತಡಕ್ಕೊಳಗಾಗಿದ್ದೇನೆ. ನಾನು ಬ್ಯಾಂಕ್‌ನಿಂದ ಸಾಲ ಪಡೆದು ಹಣವನ್ನು ಆನ್‌ಲೈನ್ ಗೇಮಿಂಗ್‌ಗೆ ಹಾಕಿದ್ದೆ. ಈಗ, ನಾನು ಆನ್‌ಲೈನ್ ಗೇಮಿಂಗ್‌ನಲ್ಲಿ ಸುಮಾರು 10-15 ಲಕ್ಷ ರೂ. ಕಳೆದುಕೊಂಡಿದ್ದೇನೆ. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನಾನು 2-3 ಬಾರಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸಿದೆ” ಕಣ್ಣೀರಿಡುತ್ತಾ ಕಾನ್‌ಸ್ಟೆಬಲ್ ಸೂರ್ಯ ಪ್ರಕಾಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Wed, 25 September 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ