Viral Video: ಮ್ಯಾನ್​ಹೋಲ್​ಗೆ ಬಿದ್ದ ದಂಪತಿ, ಇದು ‘ಪ್ರಧಾನ ಮಂತ್ರಿ ಈಜುಕೊಳ ಯೋಜನೆ’ ಎಂದ ನೆಟ್ಟಿಗರು!

ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಈ ನಡುವೆ ವೈದ್ಯರನ್ನು ಭೇಟಿಯಾಗಲು ಹೊರಟ್ಟಿದ್ದ ದಂಪತಿ ಬೈಕ್ ಸಹಿತ ಸುಮಾರು ಐದಾರಡಿ ಆಳದ ಮ್ಯಾನ್​ಹೋಲ್​ಗೆ ಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

Viral Video: ಮ್ಯಾನ್​ಹೋಲ್​ಗೆ ಬಿದ್ದ ದಂಪತಿ, ಇದು 'ಪ್ರಧಾನ ಮಂತ್ರಿ ಈಜುಕೊಳ ಯೋಜನೆ' ಎಂದ ನೆಟ್ಟಿಗರು!
ಮ್ಯಾನ್​ಹೋಲ್​ಗೆ ಬಿದ್ದ ದಂಪತಿ
Follow us
| Updated By: Rakesh Nayak Manchi

Updated on: Jun 20, 2022 | 9:53 AM

ಮೊದಲೇ ರಸ್ತೆಗಳಲ್ಲಿ ಹೊಂಡಾ ಗುಂಡಿಗಳು, ಈ ನಡುವೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ತುಂಬಿದ ನೀರು, ಸಂಚಾರ ನಡೆಸಲು ವಾಹನ ಸವಾರರ ಪರದಾಟ, ವೈದ್ಯರನ್ನು ಭೇಟಿಯಾಗುವ ವೇಳೆ ಬೈಕ್ ಸಹಿತ ಐದಾರಡಿ ಆಳದ ಮ್ಯಾನ್​ಹೋಲ್​ಗೆ ಬಿದ್ದ ದಂಪತಿ, ಇದರ ವಿಡಿಯೋ ಸಾಮಾಜಿಕ ಜಲತಾಣದಲ್ಲಿ ಭಾರಿ ವೈರಲ್, ಇದನ್ನು ”ಪ್ರಧಾನ ಮಂತ್ರಿ ಈಜುಕೊಳ ಯೋಜನೆ” ಎಂದ ನೆಟ್ಟಿಗರು.

ಇದನ್ನೂ ಓದಿ: Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!

ಸುರಿದ ಧಾರಾಕಾರ ಮಳೆಯಿಂದಾಗಿ ಉತ್ತರಪ್ರದೇಶದ ಅಲಿಗಢದ ರಸ್ತೆಯೊಂದರಲ್ಲಿ ನೀರು ತುಂಬಿಕೊಂಡಿತ್ತು. ಅಲ್ಲದೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಈ ನಡುವೆ ವೈದ್ಯರನ್ನು ನೋಡಲು ಬಂದ ದಂಪತಿ ದ್ವಿಚಕ್ರ ವಾಹನ ಸಹಿತ ನೀರು ತುಂಬಿದ ಐದಾರಡಿ ಆಳದ ಮ್ಯಾನ್​ಹೋಲ್​ಗೆ ಬಿದ್ದಿದ್ದಾರೆ. ಕೂಡಲೇ ಪಕ್ಕದಲ್ಲಿದ್ದ ವಾಹನ ಸವಾರರು ಮತ್ತು ಸ್ಥಳೀಯರು ಅವರ ನೆರವಿಗೆ ದಾವಿಸಿ ಮ್ಯಾನ್​ಹೋಲ್​ನಿಂದ ದಂಪತಿಯನ್ನು ಮೇಲೆತ್ತಿದ್ದಾರೆ.

ಇದನ್ನೂ ಓದಿ: Viral Video: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರ ಶ್ಲಾಘನೆ

ದಂಪತಿ ಮ್ಯಾನ್​ಹೋಲ್​ಗೆ ಬೀಳುವ ಹಾಗೂ ಅವರನ್ನು ರಕ್ಷಣೆ ಮಾಡುವ ವಿಡಿಯೋ ಕ್ಲಿಪ್ ಅನ್ನು Aavish Zaidi ಎಂಬವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಉತ್ತರ ಪ್ರದೇಶದ ಅಲಿಗಢದಲ್ಲಿ ಚಿತ್ರೀಕರಿಸಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರೊಬ್ಬರು “ಪ್ರಧಾನ ಮಂತ್ರಿ ಈಜುಕೊಳ ಯೋಜನೆ” ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಮ್ಯಾನ್​ಹೋಲ್​ ಅನ್ನು “ಭೂಗತ ಪಾರ್ಕಿಂಗ್ ಸೌಲಭ್ಯ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ದ್ವಿಚಕ್ರ ವಾಹನದಲ್ಲಿದ್ದವರು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿ ಮತ್ತು ಅವರ ಪತ್ನಿಯಾಗಿದ್ದು, ಅವರು ವೈದ್ಯರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಕಾಣುವಂತೆ ತಮ್ಮ ದ್ವಿಚಕ್ರ ವಾಹನವನ್ನು ಪಾರ್ಕಿಂಗ್ ಮಾಡಲು ಮುಂದಾಗಿರುವಂತೆ ಕಾಣುತ್ತದೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು