AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹುಟ್ಟುಹಬ್ಬಕ್ಕೆ ಮಗಳು ಕೊಟ್ಟ ಗಿಫ್ಟ್​​​​ ಕಂಡು ಕಣ್ಣೀರಿಟ್ಟ ಅಪ್ಪ

ಮಗಳು ತನ್ನ ತಂದೆಯ ಹುಟ್ಟುಹಬ್ಬದಂದು ಅಪ್ಪನಿಗಾಗಿ ಸ್ಪೆಷಲ್​​​ ಉಡುಗೊರೆಯನ್ನು ನೀಡುತ್ತಿರುವುದು, ಜೊತೆಗೆ ಮಗಳಿಂದ ಉಡುಗೊರೆ ಪಡೆದ ತಂದೆ ಭಾವುಕರಾಗಿ ಮಗಳನ್ನು ತಬ್ಬಿಕೊಂಡು ಅಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಹುಟ್ಟುಹಬ್ಬಕ್ಕೆ ಮಗಳು ಕೊಟ್ಟ ಗಿಫ್ಟ್​​​​ ಕಂಡು ಕಣ್ಣೀರಿಟ್ಟ ಅಪ್ಪ
ಅಕ್ಷತಾ ವರ್ಕಾಡಿ
|

Updated on: Jul 20, 2024 | 6:39 PM

Share

ಮಕ್ಕಳ ಸಂತೋಷಕ್ಕಾಗಿ ಪೋಷಕರು ಹಗಲಿರುಳು ಶ್ರಮಿಸುತ್ತಾರೆ ಮತ್ತು ಅವರಿಗೆ ಬೇಕಾದುದನ್ನು ಒದಗಿಸುತ್ತಾರೆ. ಕೆಲವೊಮ್ಮೆ ಪಾಲಕರು ಮಕ್ಕಳಿಗೆ ಹೇಳದೆ ಸರ್ಪ್ರೈಸ್ ಗಿಫ್ಟ್ ಕೊಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ತಮ್ಮ ಉನ್ನತಿಗಾಗಿ ತಂದೆ-ತಾಯಿಯ ಶ್ರಮವನ್ನು ನೋಡುತ್ತಾ ಬೆಳೆದ ಮಕ್ಕಳು ತಮ್ಮ ಯಶಸ್ಸಿನ ಸಂತಸವನ್ನು ವ್ಯಕ್ತಪಡಿಸಿ ತಂದೆ-ತಾಯಿಗೆ ಏನಾದರೂ ಮಾಡಬೇಕೆಂದು ಬಯಸುತ್ತಾರೆ. ಸದ್ಯ ತಂದೆ ಮಗಳಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೋಡುವವರ ಮನ ಮುಟ್ಟುತ್ತದೆ.

ವೀಡಿಯೊದಲ್ಲಿ, ಮಗಳು ತನ್ನ ತಂದೆಯ ಹುಟ್ಟುಹಬ್ಬದಂದು ಆಶ್ಚರ್ಯಕರ ಉಡುಗೊರೆಯನ್ನು ನೀಡುತ್ತಿರುವುದನ್ನು ಕಾಣಬಹುದು. ಮಗಳಿಂದ ಉಡುಗೊರೆ ಪಡೆದ ತಂದೆ ಭಾವುಕರಾದರು. ಕಣ್ಣಲ್ಲಿ ನೀರು ಹರಿಯಿತು. ಯುವತಿಯೊಬ್ಬಳು ಚಿನ್ನಾಭರಣ ಅಂಗಡಿಗೆ ಹೋಗಿ ತನ್ನ ತಂದೆಗೆ ಚಿನ್ನದ ಸರ ಖರೀದಿಸಿದ್ದಾಳೆ. ತನ್ನ ತಂದೆಯ ಹುಟ್ಟುಹಬ್ಬದಂದು ಕೇಕ್ ಕತ್ತರಿಸಿದ ನಂತರ ಯುವತಿ ತನ್ನ ತಂದೆಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾಳೆ. ಮಗಳಿಂದ ಈ ಉಡುಗೊರೆ ಪಡೆದ ತಂದೆ ಭಾವುಕರಾದರು. ಆ ಬಳಿಕ ಮಗಳೇ ತಂದೆಯ ಕೊರಳಿಗೆ ಚೈನ್ ಹಾಕಿದ್ದಾಳೆ. ಅಪ್ಪನಿಗೆ ಇದು ನಿಜಕ್ಕೂ ಭಾವನಾತ್ಮಕ ಕ್ಷಣ.

ಇದನ್ನೂ ಓದಿ: 10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ

ಈ ಅದ್ಭುತ ವೀಡಿಯೋವನ್ನು 6 ಮಿಲಿಯನ್‌ಗಿಂತಲೂ ಹೆಚ್ಚು ಅಂದರೆ 60 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. 5.5 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋವನ್ನು ಲೈಕ್ ಮಾಡಿದ್ದಾರೆ. ವಿವಿಧ ರೀತಿಯ ಕಾಮೆಂಟ್‌ಗಳನ್ನು ಮಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸುತ್ತಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ