AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀಚಿ ಮಕ್ಕಳೇ ಗೀಚಿ; ಆಮೇಲೆ ಅಪ್ಪ ಮಾಡಿದ್ದೇನು? ನೋಡಿ ವೈರಲ್ ಆಗುತ್ತಿರುವ ವಿಡಿಯೋ

Scribbling : ಈ ವಿಡಿಯೋ ನೋಡಿದ ಮೇಲೆ ನೀವು ಖಂಡಿತ ನಿಮ್ಮ ಮಕ್ಕಳನ್ನು ಬಯ್ಯವುದಿಲ್ಲ. ಬದಲಾಗಿ ನೀವೇ ಪೇಂಟು ಬ್ರಷ್​ ತೆಗೆದುಕೊಂಡು ಅವರೊಂದಿಗೆ ಬೆರೆಯುತ್ತೀರಿ. ಮಜಾ ಇದೆ ಈ ವಿಡಿಯೋ.

ಗೀಚಿ ಮಕ್ಕಳೇ ಗೀಚಿ; ಆಮೇಲೆ ಅಪ್ಪ ಮಾಡಿದ್ದೇನು? ನೋಡಿ ವೈರಲ್ ಆಗುತ್ತಿರುವ ವಿಡಿಯೋ
ಮಗಳು ಗೀಚಿದಾಗ ಅಪ್ಪ ಏನು ಮಾಡಿದರಿಲ್ಲಿ?
TV9 Web
| Edited By: |

Updated on:Jan 21, 2023 | 5:03 PM

Share

Viral Video : ಮಕ್ಕಳು ಒಂದು ವರ್ಷದವರಾಗುತ್ತಿದ್ದಂತೆ ಅವರಿಂದ ಗೋಡೆಯನ್ನು ರಕ್ಷಿಸುವುದೇ ದೊಡ್ಡ ಕೆಲಸವೆಂಬಂತೆ ಪೋಷಕರು ಚಿಂತೆಗೊಳಗಾಗುತ್ತಾರೆ. ಆದರೆ ವೈಜ್ಞಾನಿಕ ಹಿನ್ನೆಲೆಯಲ್ಲಿ ಮಕ್ಕಳನ್ನು ಗೀಚುವಿಕೆಯಿಂದ (Scribbling) ತಡೆಯುವುದು ತಪ್ಪು. ಗೀಚುವಿಕೆಗೂ ಮಕ್ಕಳ ಮೆದುಳಿನ ವಿಕಾಸಕ್ಕೂ ಪರಸ್ಪರ ಸಂಬಂಧವಿದೆ ಎನ್ನತ್ತದೆ ಮನೋವಿಜ್ಞಾನ. ಗೀಚುವಿಕೆಯಿಂದ ಉಂಟಾಗುವ ಅತೀ ಸೂಕ್ಷ್ಮ ಕರ್ಕಶ ಶಬ್ದವು ಮಕ್ಕಳ ಮನಸ್ಸನ್ನು ಆಹ್ಲಾದಗೊಳಿಸುತ್ತದೆ. ಆದರೂ ಗೋಡೆಯ ಮೇಲೆ ಮಕ್ಕಳು ಗೀಚಿದಾಗ ಎಂಥ ಪೋಷಕರಿಗೂ ಕಿರಿಕಿರಿಯೇ. ಆದರೆ ಇದನ್ನೇ ಕಲಾತ್ಮಕ ದೃಷ್ಟಿಯಿಂದ ನೋಡುವುದನ್ನು ಬೆಳೆಸಿಕೊಂಡಲ್ಲಿ ಮಕ್ಕಳೊಂದಿಗೆ ಪೋಷಕರು ಖುಷಿಪಡುತ್ತಾರೆ. ಸೃಜನಶೀಲತೆಯ ಹುಟ್ಟು ಇಲ್ಲಿಂದಲೇ ಶುರುವಾಗುತ್ತದೆ.

ಈ ವಿಡಿಯೋದಲ್ಲಿ ಮಗಳು ಗೋಡೆ ಮೇಲೆ ಪುಟ್ಟದಾಗಿ ಏನೋ ಚಿತ್ರ ಬಿಡಿಸಿದ್ದಾಳೆ. ಆದರೆ ಕೋಪಗೊಳ್ಳದ ಕಲಾವಿದ ತಂದೆ ಇದನ್ನು ಅಚ್ಚರಿಪಡುವಂತೆ ಮಾರ್ಪಾಡು ಮಾಡಿದ್ಧಾನೆ. ಈತನಕ 11 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. 90,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಶಭಾಷ್​ ಅಪ್ಪಾ, ಮನೆಗೊಬ್ಬರು ಇಂಥ ಒಬ್ಬ ಅಪ್ಪ ಇದ್ದರೆ ಸಾಕು, ಮಕ್ಕಳ ಮನಸು ಸೃಜನಶೀಲತೆಯಿಂದ ಅರಳತೊಡಗುತ್ತದೆ ಎಂದು ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ : ಸೀರೆ ಉಟ್ಟುಕೊಂಡು ಪ್ಯಾರಾಗ್ಲೈಡಿಂಗ್ ಮಾಡಿದ 80ರ ಅಜ್ಜಿಯ ವಿಡಿಯೋ ವೈರಲ್

ಛೆ ನನಗೂ ಇಂಥ ಅಪ್ಪ ಇರಬೇಕಿತ್ತು. ಬಾಲ್ಯದಲ್ಲಿ ಸಾಕಷ್ಟು ಹೊಡೆತ ತಿಂದಿದ್ದೇನೆ ಎಂದು ಒಬ್ಬರು ಹೇಳಿದ್ದಾರೆ. ಮಕ್ಕಳನ್ನು ಇಂಥ ಗೀಚುವಿಕೆಯಿಂದ ತಡೆಯುವುದಕ್ಕಿಂತ ಗೋಡೆಗಳಿಗೆ ಪ್ಲಾಸ್ಟರ್​ ಆಫ್​ ಪ್ಯಾರೀಸ್​ನ ಶೀಟುಗಳನ್ನು ಅಂಟಿಸುವುದು ಒಳ್ಳೆಯದು ಎಂದಿದ್ಧಾರೆ ಹಲವರು. ಈ ಉಪಾಯ ಬಹಳ ಮುದ್ಧಾಗಿದೆ ಎಂದು ಅನೇಕರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ಮೇಲೆ ನೀವು ಕೂಡ ಇಂಥ ಉಪಾಯಗಳನ್ನು ಕಂಡುಕೊಳ್ಳಬಹುದಲ್ಲವೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:02 pm, Sat, 21 January 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ