AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ

ಹೈದರಾಬಾದ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ  ಚಿಕನ್ ಬಿರಿಯಾನಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಅಂಬರ್‌ಪೇಟೆಯ ಡಿಡಿ ಕಾಲೋನಿಯ ವಿಶ್ವ ಆದಿತ್ಯ ಎಂಬವರು ಫುಡ್ ಡೆಲಿವರಿ ಆಪ್ ಝೊಮಾಟೊದಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು.

ಹೈದರಾಬಾದ್: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ
ಬಿರಿಯಾನಿ
ನಯನಾ ರಾಜೀವ್
|

Updated on: Dec 04, 2023 | 2:05 PM

Share

ಹೈದರಾಬಾದ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ  ಚಿಕನ್ ಬಿರಿಯಾನಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಅಂಬರ್‌ಪೇಟೆಯ ಡಿಡಿ ಕಾಲೋನಿಯ ವಿಶ್ವ ಆದಿತ್ಯ ಎಂಬವರು ಫುಡ್ ಡೆಲಿವರಿ ಆಪ್ ಝೊಮಾಟೊದಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು.

ಆರ್‌ಟಿಸಿ ಕ್ರಾಸ್‌ ರಸ್ತೆಯಲ್ಲಿರುವ ಬಾವರ್ಚಿ ಹೋಟೆಲ್‌ನಿಂದ ವ್ಯಕ್ತಿ ಆಹಾರ ಆರ್ಡರ್ ಮಾಡಿದ್ದರು. ಝೊಮಾಟೊ ವಿತರಿಸಿದ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಅಡುಗೆಯವರ ನಿಷ್ಕಾಳಜಿಯೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಬಿರಿಯಾನಿಯಲ್ಲಿ ಸಿಕ್ಕ ಈ ಹಲ್ಲಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್) ತೆಲುಗು ಸ್ಕ್ರೈಬ್ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

‘ಬಾವರ್ಚಿ’ಯ ಪ್ಯಾಕೇಜಿಂಗ್ ಅನ್ನು ಸಹ ತೋರಿಸಲಾಯಿತು. ಪ್ಲೇಟ್​ನಲ್ಲಿ ಬಿರಿಯಾನಿ ನಡುವೆ ಹಲ್ಲಿ ಇರುವುದು ಕೂಡ ಕಾಣುತ್ತದೆ.ಹೈದರಾಬಾದಿ ಬಿರಿಯಾನಿ ತಿನ್ನುವ ಆಸೆಯನ್ನು ಬಿಟ್ಟುಬಿಟ್ಟೆ ಎಂದು ಅವರು ಬರೆದುಕೊಂಡಿದ್ದಾರೆ.

ಈ ಪೋಸ್ಟ್​​ನ್ನು ರೀಟ್ವೀಟ್​ ಮಾಡಿದವರೊಬ್ಬರು ಹೈದರಾಬಾದ್​ ಬಿರಿಯಾನಿಯಲ್ಲಿ ಹಲ್ಲಿಗಳು, ಜಿರಳೆಗಳು, ಇಲಿಗಳು ಸಿಗುವುದು ಸಹಜವಾಗಿ ಬಿಟ್ಟಿದೆ ಪ್ರತಿಕ್ರಿಯಿಸಿದ್ದಾರೆ.

ರೆಸ್ಟೋರೆಂಟ್ ಇಂತಹ ಆರೋಪವನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ಮೇ 2022 ರಲ್ಲಿ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಅಧಿಕಾರಿಗಳು ಬಿರಿಯಾನಿಯಲ್ಲಿ ಹಲ್ಲಿಗಳು ಕಂಡುಬಂದಿವೆ ಎಂದು ಆರೋಪಿಸಿ ಬಿಜೆಪಿ ಕೌನ್ಸಿಲರ್ ದೂರಿನ ಮೇರೆಗೆ ಅದೇ ಬವರ್ಚಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ್ದರು.

ಮತ್ತಷ್ಟು ಓದಿ: Viral Video: ಸ್ಮೈಲ್ ಪ್ಲೀಸ್, ಒನ್ ಸೆಲ್ಫಿ : ಸೆಲ್ಫಿಗೆ ಸಖತ್​​​ ಪೋಸ್ ಕೊಟ್ಟ ಶ್ವಾನ

ಕೆಲವು ಬಳಕೆದಾರರು ಸುದ್ದಿಯಲ್ಲಿ ಆಘಾತವನ್ನು ವ್ಯಕ್ತಪಡಿಸುವ GIF ಗಳು ಮತ್ತು ಮೀಮ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ರೆಸ್ಟೋರೆಂಟ್ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಜೊಮ್ಯಾಟೊ ಸಮಸ್ಯೆಯನ್ನು ಗುರುತಿಸಿದ್ದೇವೆ ಮತ್ತು ಗ್ರಾಹಕರೊಂದಿಗೆ ಮಾತನಾಡಿದ್ದೇವೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಮತ್ತು ಸೂಕ್ತ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ