AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡುರಸ್ತೆಯಲ್ಲಿ ವಿಕಲಚೇತನನನ್ನು ಥಳಿಸಿ, ಸ್ಕೂಟಿ ಮುರಿದು ಹಾಕಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್

Shocking Video: ಮಾರ್ಚ್ 27ರಂದು ಈ ಘಟನೆ ನಡೆದಿದ್ದು, ದುಷ್ಕರ್ಮಿಗಳಾದ ಜುಗೇಂದ್ರ ಮತ್ತು ಅವರ ಹೆಂಡತಿ ತಮ್ಮ ಸಂಬಂಧಿಯಾಗಿರುವ ವಿಕಲಚೇತನ ವ್ಯಕ್ತಿ ಗಜೇಂದ್ರನ ಮೇಲೆ ಹಲ್ಲೆ ನಡೆಸಿದ್ದಾರೆ.

Viral Video: ನಡುರಸ್ತೆಯಲ್ಲಿ ವಿಕಲಚೇತನನನ್ನು ಥಳಿಸಿ, ಸ್ಕೂಟಿ ಮುರಿದು ಹಾಕಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್
ವಿಕಲಚೇತನನಿಗೆ ಥಳಿಸಿದ ದಂಪತಿ
TV9 Web
| Updated By: ಸುಷ್ಮಾ ಚಕ್ರೆ|

Updated on:Mar 29, 2022 | 8:12 PM

Share

ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಝೆವಾರ್ ಪ್ರದೇಶದಲ್ಲಿ ವಿಕಲಚೇತನ ವ್ಯಕ್ತಿಯನ್ನು ಗಂಡ-ಹೆಂಡತಿ ಅಮಾನುಷವಾಗಿ ಥಳಿಸಿದ ಘಟನೆಯ ವಿಡಿಯೋ (Viral Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾರ್ಚ್ 27ರಂದು ಈ ಘಟನೆ ನಡೆದಿದ್ದು, ದುಷ್ಕರ್ಮಿಗಳಾದ ಜುಗೇಂದ್ರ ಮತ್ತು ಅವರ ಹೆಂಡತಿ ತಮ್ಮ ಸಂಬಂಧಿಯಾಗಿರುವ ವಿಕಲಚೇತನ ವ್ಯಕ್ತಿ ಗಜೇಂದ್ರನ ಮೇಲೆ ಹಲ್ಲೆ ನಡೆಸಿದ್ದಾರೆ.

ಆರೋಪಿ ಜುಗೇಂದ್ರ ತನ್ನ ಶಾಲೆಯನ್ನು ವಿಕಲಚೇತನನಾದ ಗಜೇಂದ್ರನಿಗೆ ನಡೆಸಲು ನೀಡಿದ್ದನೆಂದು ತಿಳಿದುಬಂದಿದೆ. ಆದರೆ, ಭಾರತವನ್ನು ಕೊರೊನಾ ಸಾಂಕ್ರಾಮಿಕ ರೋಗವು ಆವರಿಸಿದ್ದರಿಂದ ಆತನಿಗೆ ಶಾಲೆಯನ್ನು ಸರಿಯಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಆತನ ಶಾಲೆಗೆ ವಿದ್ಯಾರ್ಥಿಗಳು ಬರುತ್ತಿರಲಿಲ್ಲ. ಶಾಲೆ ಸರಿಯಾಗಿ ನಡೆಯುತ್ತಿರಲಿಲ್ಲವಾದ್ದರಿಂದ ಅವರಿಬ್ಬರ ನಡುವೆ ವಾಗ್ವಾದ ನಡೆದು ಈ ಘಟನೆ ನಡೆದಿದೆ. ಜುಗೇಂದ್ರ ಕೂಡ ಗಜೇಂದ್ರನಿಗೆ ಮನಬಂದಂತೆ ಥಳಿಸಿ, ರಸ್ತೆಯಲ್ಲೇ ಆತನ ಸ್ಕೂಟರ್ ಮುರಿದು ಹಾಕಿದ್ದಾನೆ.

ಈ ವಿಡಿಯೋವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿವಿ ಅವರು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಪೊಲೀಸರಿಗೆ ವಿಕಲಚೇತನ ದೂರು ನೀಡಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ ವಿಶಾಲ್ ಪಾಂಡೆ ತಿಳಿಸಿದ್ದಾರೆ. ಆರೋಪಿ ಪತಿ-ಪತ್ನಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Shocking Video: ಬೆಂಜ್ ಕಾರ್ಖಾನೆಗೆ ಚಿರತೆ ಮರಿಯ ಸರ್​ಪ್ರೈಸ್​ ವಿಸಿಟ್!; 6 ಗಂಟೆ ಸತಾಯಿಸಿದ ಚಿರತೆಯ ವಿಡಿಯೋ ವೈರಲ್

Published On - 8:11 pm, Tue, 29 March 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?