AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಾಹನಗಳನ್ನು ನಿಲ್ಲಿಸಿ ಮಕ್ಕಳನ್ನು ರಸ್ತೆ ದಾಟಿಸಿದ ನಾಯಿ; ನೆಟ್ಟಿಗರ ಮನಗೆದ್ದ ಹೃದಯಸ್ಪರ್ಶಿ ವಿಡಿಯೋ

ಜನಬಿಡ ರಸ್ತೆಯಲ್ಲಿ ಬೊಗಳುತ್ತಾ ವಾಹನಗಳನ್ನು ನಿಲ್ಲಿಸಿ ಮಕ್ಕಳನ್ನು ರಸ್ತೆ ದಾಟಿಸಿದ ಮುದ್ದಾದ ನಾಯಿಯ ವಿಡಿಯೋ ವೈರಲ್ ಅಗುತ್ತಿದೆ. ಈ ವಿಡಿಯೋ ನೋಡಿದರೆ ನೀವು ಕೂಡ ಫಿದಾ ಆಗುವುದು ಖಚಿತ.

Viral Video: ವಾಹನಗಳನ್ನು ನಿಲ್ಲಿಸಿ ಮಕ್ಕಳನ್ನು ರಸ್ತೆ ದಾಟಿಸಿದ ನಾಯಿ; ನೆಟ್ಟಿಗರ ಮನಗೆದ್ದ ಹೃದಯಸ್ಪರ್ಶಿ ವಿಡಿಯೋ
ಮಕ್ಕಳಿಗೆ ರಸ್ತೆ ದಾಟಲು ಸಹಾಯ ಮಾಡಿದ ನಾಯಿ
TV9 Web
| Edited By: Rakesh Nayak Manchi|

Updated on:Jul 31, 2022 | 1:15 PM

Share

ವಿದ್ಯಾರ್ಥಿಗಳು ಗುಂಪು ರಸ್ತೆ ದಾಟುವಾಗ ವಾಹನಗಳ ಸಂಚಾರಗಳು ನಿಲ್ಲದ್ದನ್ನು ಗಮನಿಸಿದ ಮುದ್ದಾದ ಶ್ವಾನವೊಂದು, ಮಕ್ಕಳು ರಸ್ತೆ ದಾಟಬೇಕು ಸಂಚಾರ ನಿಲ್ಲಿಸಿ ಎಂದು ತನ್ನದೇ ಭಾಷೇಯಲ್ಲೇ ಬೈಯುತ್ತಾ ವಾಹನಗಳಿಗೆ ಅಡ್ಡನಿಂತು ಮಕ್ಕಳನ್ನು ರಸ್ತೆ ದಾಟಿಸಿದ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ (Video Viral) ಆಗುತ್ತಿದೆ. ಜಾರ್ಜಿಯಾ ರಿಪಬ್ಲಿಕ್‌ನ ಬಟುಮಿಯಲ್ಲಿ ಜನನಿಬಿಡ ರಸ್ತೆಯನ್ನು ದಾಟಲು ಮಕ್ಕಳಿಗೆ ನಾಯಿಮರಿ ಸಹಾಯ ಮಾಡಿದೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟ್ಟರ್‌ನಲ್ಲಿ ಈ ವಿಡಿಯೋ ಕ್ಲಿಪ್‌ ಅನ್ನು ಹಂಚಿಕೊಂಡಿದ್ದು, ಸುಮಾರು 1.98 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳೊಂದಿಗೆ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ನೀವೂ ನೋಡಿದರೆ ನಾಯಿಮರಿಯ ನಡೆಗೆ ನೀವು ಫಿದಾ ಆಗುವುದು ಖಚಿತ.

ವಿಡಿಯೋದ ಮೂಲ ತುಣುಕನ್ನು ಬೆಕಾ ಸಿನಾಡ್ಜೆ ಸೆರೆಹಿಡಿದಿದ್ದಾರೆ. ಕುಪಾಟಾ (ಸಾಸೇಜ್) ಎಂದು ಕರೆಯಲ್ಪಡುವ ನಾಯಿಮರಿಯು ಸಿಗ್ನಲ್‌ನಲ್ಲಿ ಬೊಗಳುತ್ತಾ ಚಿಕ್ಕ ಮಕ್ಕಳು ರಸ್ತೆ ದಾಟಲು ಕಾರುಗಳನ್ನು ನಿಲ್ಲಿಸುತ್ತದೆ. ನಾಯಿ ಮರಿಯ ಹೃದಯವಂತಿಕೆ, ಉಪಕಾರ, ನಡೆ, ಕಾಳಜಿ ತುಂಬಾ ಮುದ್ದಾಗಿದೆ ಅಲ್ಲವೇ? ಈ ವಿಡಿಯೋವನ್ನು ಹಂಚಿಕೊಂಡ ಅವನೀಶ್ ಶರಣ್ ಅವರು “ಇದು ನಿಮ್ಮ ದಿನವನ್ನು ಉತ್ತಮವಾಗಿಸುತ್ತದೆ” ಎಂದು ಶೀರ್ಷಿಕೆಯನ್ನು ಬರೆದಿದ್ದಾರೆ.

ವೈರಲ್ ವಿಡಿಯೋವನ್ನು ನೋಡಿದ ನೆಟ್ಟಿಗರು ಫಿದಾಗಿದ್ದು, ನಾಯಿಯ ಕಾಳಜಿಗೆ ಮನಸೋತಿದ್ದಾರೆ. ಅಲ್ಲದೆ ವಿಡಿಯೋಗೆ ಪೆಟ್ ಲವರ್ಸ್ ಸೇರಿದರಂತೆ ಹಲವು ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿ, “ಎಂತಹ ಒಳ್ಳೆಯ ನಾಯಿ” ಎಂದು ಹೇಳಿದ್ದಾರೆ. ಇನ್ನೊಬ್ಬರು ಪ್ರತಿಕ್ರಿಯೆ ನೀಡಿ, ಕೊನೆಗೆ ನಾಯಿ “ಈಗ ನೀನು ಹೋಗುವುದು ಒಳ್ಳೆಯದು” ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, ಈ ದಿನ ವಿಡಿಯೋ ಎಂದು ಬರೆದುಕೊಂಡಿದ್ದಾರೆ.

Published On - 1:15 pm, Sun, 31 July 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್