AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಗಳವಾಡುತ್ತಾ ಹುಲಿಯನ್ನು ಕಚ್ಚಿದ ನಾಯಿ; ಹುಲಿ ಏನು ಮಾಡಿತು ನೋಡಿ

ಹುಲಿ ಮತ್ತು ನಾಯಿಯ ನಡುವಿನ ಕಾಳಗವಿದು. ಹುಲಿಯ ಕತ್ತನ್ನು ಕಚ್ಚಿ ಎಳೆದ ನಾಯಿಗೆ ಹುಲಿಯ ಕೈಯಿಂದ ಒಂದೇಟು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಜಗಳವಾಡುತ್ತಾ ಹುಲಿಯನ್ನು ಕಚ್ಚಿದ ನಾಯಿ; ಹುಲಿ ಏನು ಮಾಡಿತು ನೋಡಿ
ಹುಲಿಯನ್ನು ಕಚ್ಚಿದ ನಾಯಿ
TV9 Web
| Edited By: |

Updated on:Oct 09, 2022 | 12:59 PM

Share

ಹುಲಿಗಳು ನಾಯಿಗಳ ಮೇಲೆ ಹೆಚ್ಚಾಗಿ ದಾಳಿ ನಡೆಸುತ್ತವೆ. ಕೆಲವೊಮ್ಮೆ ಜೊತೆಯಾಗಿ ಕಾಣಿಸಿಕೊಂಡೂ ಸಹ ಇವುಗಳು ಪರಸ್ಪರ ವೈರಿಗಳಂತೆ. ನೀವು ಹುಲಿ ನಾಯಿಯೊಂದಿಗೆ ಜಗಳವಾಡುವುದನ್ನು ನೋಡಿರುತ್ತೀರಿ. ಆದರೆ ನಾಯಿಯು ಹುಲಿಯೊಂದಿಗೆ ಜಗಳವಾಡುವುದನ್ನು ನೀವು ಎಂದಾದರೂ ನೋಡಿದ್ದೀರಾ? ಇಲ್ಲವಾದರೆ ವಿಡಿಯೋವೊಂದು ನಿಮಗಾಗಿ ಕಾಯುತ್ತಿದೆ. ಅಂತರ್ಜಾಲದಲ್ಲಿ ಕಾಣಿಸಿಕೊಂಡಿರುವ ವಿಡಿಯೋವೊಂದು ನಾಯಿ ಮತ್ತು ಹುಲಿಯ ನಡುವೆ ನಡೆದ ಕಾಳಗವನ್ನು ತೋರಿಸುತ್ತದೆ. ಈ ವಿಡಿಯೋವನ್ನು animals_powers ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 18 ಸಾವಿರಕ್ಕೂ ಹೆಚ್ಚು ಲೈಕ್​ಗಳು, 4.6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿವೆ. ವಿಡಿಯೋ ನೋಡಿದ ಒಂದಷ್ಟು ಮಂದಿ ಅಚ್ಚರಿಗೊಂಡಿದ್ದಾರೆ.

ಎರಡು ದಿನಗಳ ಹಿಂದೆ ಅನಿಮಲ್ಸ್ ಪವರ್ ಹೆಸರಿನ ಇನ್‌ಸ್ಟಾಗ್ರಾಮ್ ಪುಟದಿಂದ ಹಂಚಿಕೊಂಡ ವೀಡಿಯೊದಲ್ಲಿ ಗೋಲ್ಡನ್ ರಿಟ್ರೈವರ್ ನಾಯಿ ಹುಲಿಯ ಕತ್ತನ್ನು ಕಚ್ಚುವುದನ್ನು ಕಾಣಬಹುದು. ಇವುಗಳ ಪಕ್ಕವೇ ಸಿಂಹವೊಂದು ಕುಳಿತಿರುತ್ತದೆ. ಇದು ಹುಲಿ ಮತ್ತು ನಾಯಿ ನಡುವಿನ ಜಗಳವನ್ನು ನೋಡಿಯೂ ನೋಡದಂತೆ ಇದ್ದುಬಿಡುತ್ತದೆ. ನಾಯಿ ಹುಲಿಯ ಕತ್ತನ್ನು ಕಚ್ಚಿ ಎಳೆಯುತ್ತಿದ್ದಾಗ ನೋವು ಅನುಭವಿಸಿದ ಹುಲಿರಾಯನು, ನಾಯಿಗೆ ಹೊಡೆಯುತ್ತದೆ. ಆದರೂ ನಾಯಿ ಕಚ್ಚಿ ಎಳೆಯುವುದನ್ನು ಮುಂದುವರಿಸುವುದನ್ನು ನೋಡಬಹುದು. ಆದರೆ ಇವೆರೆಡರ ನಡುವಿನ ಕಾಳದಲ್ಲಿ ಕೊನೆಯಲ್ಲಿ ಯಾರು ಗೆದ್ದರು ಎಂಬುದು ವಿಡಿಯೋದಲ್ಲಿ ಕಾಣವುದಿಲ್ಲ.

ವಿಡಿಯೋ ನೋಡಿದ ನೆಟ್ಟಿಗರನ್ನು ಅಚ್ಚರಿ ಹಾಗೂ ಬೆರಗು ಗೊಳಿಸಿದೆ. ಅದರಂತೆ ಅನೇಕರು ಕಾಮೆಂಟ್​ಗಳನ್ನು ಮಾಡಿದ್ದು, ‘‘ಒಂದು ದಿನ ಅದು ಬದಲಾಗಲಿದೆ‘‘ ಒಬ್ಬರು ಬರೆದುಕೊಂಡಿದ್ದಾರೆ. ಮತ್ತೊಬ್ಬರು ‘ವಿಶ್ವಾಸ‘ ಎಂದು ಬರೆದು ನಗುವ ಎಮೋಜಿ ಹಾಕಿ ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sun, 9 October 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ