AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗ್ರಾಹಕರ ಬಳಿ ಹೋಗಿ ಪಿಜ್ಜಾ ವಿತರಣೆ ಮಾಡುತ್ತಿರುವ ನಾಯಿ

ಡೊಮಿನೊಸ್ ಪಿಜ್ಜಾ ವಿತರಕನೊಂದಿಗೆ ನಾಯಿಯೂ ಪಿಜ್ಜಾ ವಿತರಣೆ ಮಾಡಲು ಹೋಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಆ ವಿಡಿಯೋ ಇಲ್ಲಿದೆ ನೋಡಿ...

Viral Video: ಗ್ರಾಹಕರ ಬಳಿ ಹೋಗಿ ಪಿಜ್ಜಾ ವಿತರಣೆ ಮಾಡುತ್ತಿರುವ ನಾಯಿ
ಡೊಮಿನೊಸ್ ಪಿಜ್ಜಾ ವಿತರಕನೊಂದಿಗೆ ಹೋಗುತ್ತಿರುವ ನಾಯಿ
TV9 Web
| Edited By: |

Updated on:Aug 21, 2022 | 12:22 PM

Share

ಪ್ರಾಣಿಗಳು ಮಾತಿನಲ್ಲಿ ತಮ್ಮನ್ನು ತಾವು ವ್ಯಕ್ತಪಡಿಸುವ ಸಾಮರ್ಥ್ಯವನ್ನು ಹೊಂದಿರುವುದಿಲ್ಲ, ಆದರೆ ಅವುಗಳ ಕಾರ್ಯಗಳು ಅವುಗಳ ಪದಗಳಿಗಿಂತ ಹೆಚ್ಚಾಗಿ ಮಾತನಾಡುತ್ತವೆ. ಇಂಟರ್ನೆಟ್‌ನಲ್ಲಿ ಅಂತಹ ಒಂದು ವಿಡಿಯೋ ವೈರಲ್ ಆಗುತ್ತಿದೆ. ನಾಯಿಯೊಂದು ವ್ಯಕ್ತಿಯ ಜೊತೆಯಲ್ಲೇ ದ್ವಿಚಕ್ರ ವಾಹನದಲ್ಲಿ ಓಡಾಡುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ. ಈ ವಿಡಿಯೋದಲ್ಲಿ ಗಮನಿಸಬೇಕಾದ ಅಂಶವೆಂದರೆ, ಆ ವ್ಯಕ್ತಿ ಡೊಮಿನೊಸ್ ಪಿಜ್ಜಾ ವಿತರಣಾ ಸಂಸ್ಥೆಯಲ್ಲಿ ಪಿಜ್ಜಾ ವಿತರಕರಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಪಿಜ್ಜಾ ವಿತರಕನ ಜೊತೆ ನಾಯಿ ಕೂಡ ಪಿಜ್ಜಾ ವಿತರಿಸಲು ಹೋಗುತ್ತಿರುವ ವಿಡಿಯೋ ನೋಡಿದ ಇಂಟರ್ನೆಟ್​ ಬಳಕೆದಾರರು ಫಿದಾ ಆಗಿದ್ದಾರೆ.

ಜುಲೈ 31 ರಂದು ಶಿವಾಂಗ್ ಎಂಬ ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ವೈರಲ್ ಪಡೆದುಕೊಂಡಿದೆ. “ನಿಜವಾದ ಸ್ನೇಹದ ನೋಟ ಹೀಗಿದೆ. ಯಾವುದೇ ಸಮಯದಲ್ಲಿ ಈ ನಾಯಿ ತನ್ನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಯಾವಾಗಲೂ ವ್ಯಕ್ತಿಯೊಂದಿಗೆ ಬರುತ್ತದೆ. ಈ ಮುದ್ದಾದ ನಾಯಿಯ ಹೆಸರು ಜ್ಯಾಕ್, ಅವನು ಯಾವಾಗಲೂ ಈ ವ್ಯಕ್ತಿಯೊಂದಿಗೆ ಆಹಾರ ವಿತರಣೆಗಾಗಿ ಹೋಗುತ್ತಾನೆ” ಎಂದು ಶಿವಾಂಗ್ ಅವರು ವಿಡಿಯೋ ಹಂಚಿಕೊಳ್ಳುವಾಗ ಶೀರ್ಷಿಕೆ ಬರೆದುಕೊಂಡಿದ್ದಾರೆ.

View this post on Instagram

A post shared by Shivang (@beanbag_jr)

ವೀಡಿಯೊವನ್ನು ಹಂಚಿಕೊಂಡಾಗಿನಿಂದ 1.3 ಮಿಲಿಯನ್ ವೀಕ್ಷಣೆಗಳು ಮತ್ತು 1.62 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಸಂಗ್ರಹಿಸಿದೆ. ಇಬ್ಬರ ನಡುವಿನ ಈ ಅವಿನಾಭಾವ ಸಂಬಂಧಕ್ಕಾಗಿ ಬಳಕೆದಾರರು ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ, “ಈ ವಿಡಿಯೋ ಆರೋಗ್ಯಕರವಾಗಿದೆ. ದೇವರು ಈ ಶುದ್ಧ ಆತ್ಮಗಳನ್ನು ರಕ್ಷಿಸುತ್ತಾನೆ” ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ಕಾಮೆಂಟ್ ಮಾಡಿ, “ಡೊಮಿನೋಸ್​ನ ಗೌರವಾನ್ವಿತ ಉದ್ಯೋಗಿ” ಎಂದು ಹೇಳಿದ್ದಾರೆ. ಮಗದೊಬ್ಬರು ಕಾಮೆಂಟ್ ಮಾಡಿ ಬೆಲೆಕಟ್ಟಲಾಗದು. ಈ ಜೋಡಿಯು ನಾನಿರುವ ಸ್ಥಳದಲ್ಲಿ ಪಿಜ್ಜಾಗಳನ್ನು ವಿತರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sun, 21 August 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ