AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್; ವಿಡಿಯೋ ವೈರಲ್​​​​

ಮುನ್ಸಿಪಲ್ ಕಾರ್ಪೊರೇಶನ್‌ಗೆ ಸೇರಿದ ವ್ಯಾನ್ ಇದಾಗಿದ್ದು, ರಸ್ತೆ ನಿರ್ವಹಣೆ ಕಾರ್ಯಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಆದರೆ ನಿಂತಿದ್ದ ವ್ಯಾನ್ ಇದ್ದಂತೆ ರಿವರ್ಸ್ ನಲ್ಲಿ ಅತಿವೇಗದಲ್ಲಿ ಹೋಗಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್; ವಿಡಿಯೋ ವೈರಲ್​​​​
ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್
ಅಕ್ಷತಾ ವರ್ಕಾಡಿ
|

Updated on: Aug 07, 2024 | 6:21 PM

Share

ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಒಂದು ತಪ್ಪಿನಿಂದ ಹಲವರು ಬಲಿಯಾಗುತ್ತಿದ್ದಾರೆ. ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಸರಕಾರಿ ವಾಹನವೊಂದು ಹಿಮ್ಮುಖವಾಗಿ ವೇಗವಾಗಿ ಸಾಗಿದೆ. ಹೆಚ್ಚು ಜನಸಂದಣಿ ಇರಲಿಲ್ಲವಾದ್ದರಿಂದ ದೊಡ್ಡ ಅಪಘಾತ ತಪ್ಪಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಪುಣೆಯ ಮುನ್ಸಿಪಲ್ ಕಾರ್ಪೊರೇಶನ್‌ಗೆ ಸೇರಿದ ವ್ಯಾನ್ ಇದಾಗಿದ್ದು, ರಸ್ತೆ ನಿರ್ವಹಣೆ ಕಾರ್ಯಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಆದರೆ ನಿಂತಿದ್ದ ವ್ಯಾನ್ ಇದ್ದಂತೆ ರಿವರ್ಸ್ ನಲ್ಲಿ ಅತಿವೇಗದಲ್ಲಿ ಹೋಗಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ರಾತ್ರಿ 11.45ರ ಸುಮಾರಿಗೆ ಈ ಘಟನೆ ನಡೆದಿದೆ. ಆಗ ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಘಾತ ತಪ್ಪಿದೆ. ಈ ಘಟನೆಯನ್ನು ರಸ್ತೆ ಬದಿಯ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Pune News Age (@punenewsage)

ಇದನ್ನೂ ಓದಿ: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆದರೆ, ಈ ವೀಡಿಯೋಗೆ ಮುನ್ಸಿಪಲ್ ಕಾರ್ಪೊರೇಶನ್​​​ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪುಣೆಯಲ್ಲಿ 17 ವರ್ಷದ ಬಾಲಕನೊಬ್ಬ ಕುಡಿದ ಅಮಲಿನಲ್ಲಿ ಪೋರ್ಷೆ ಕಾರಿಗೆ ಡಿಕ್ಕಿ ಹೊಡೆದು 24 ವರ್ಷದ ಇಬ್ಬರು ಟೆಕ್ಕಿಗಳು ತಕ್ಷಣ ಸಾವನ್ನಪ್ಪಿದ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು