AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು

ಉಕ್ಕಿ ಹರಿಯುತ್ತಿರುವ ಗೌಲಾ ನದಿಯ ನಡುವೆ ಆನೆಯೊಂದು ಸಿಲುಕಿಕೊಂಡು ದಿಕ್ಕು ತೋಚದೇ ಪರದಾಡುತ್ತಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ.

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು
ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಆನೆ ಸಿಲುಕಿಕೊಂಡಿರುವ ದೃಶ್ಯ
TV9 Web
| Updated By: shruti hegde|

Updated on:Oct 20, 2021 | 8:20 AM

Share

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯು ರಾಜ್ಯಾದ್ಯಂತ ಅಸ್ಥವ್ಯಸ್ಥ ಉಂಟು ಮಾಡಿದೆ. ಅದೆಷ್ಟೋ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಭಾರೀ ಮಳೆಯ ನಡುವೆ ಗೌಲಾ ನದಿಯಲ್ಲಿ ಆನೆಯೊಂದು ಸಿಲುಕಿಕೊಂಡಿತ್ತು. ಪ್ರವಾಹದ ಮಧ್ಯೆ ದಾರಿ ತೋಚದೇ ಪರದಾಡುತ್ತಿತ್ತು. ಉಕ್ಕಿ ಹರಿಯುತ್ತಿರುವ ಗೌಲಾ ನದಿಯಲ್ಲಿ ಆನೆ ಸಿಲುಕಿಕೊಂಡಿರುವ ದೃಶ್ಯವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ.

ತಡ ಮಾಡದೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯನ್ನು ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಡಿಯೋವನ್ನು ಹರಿಬಿಟ್ಟ ಟ್ವಿಟರ್ ಬಳಕೆದಾರ ಅಭಿಷೇಕ್ ಪಾಂಡೆ ಹೀಗೆ ಬರೆದಿದ್ದಾರೆ. ಉಕ್ಕುತ್ತಿರುವ ಗೌಲಾ ನದಿಯಲ್ಲಿ ಆನೆಯೊಂದು ಸಿಲುಕಿಕೊಂಡಿದೆ. ಅರಣ್ಯ ಇಲಾಖೆಯ ತಂಡ ಆನೆಯನ್ನು ರಕ್ಷಿಸಿದ್ದಾರೆ. ಕಾಡಿಗೆ ಮರಳಿ ಸೇರುವಂತೆ ದಾರಿ ತೋರಿಸಿದ್ದಾರೆ ಎಂದು ಬರೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಆನೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಕ್ಕಾಗಿ ಅರಣ್ಯ ಇಲಾಖೆಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ, ಆನೆ ರಕ್ಷಿಸಲು ಮುಂದಾದ ಸಿಬ್ಬಂದಿ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಭಾಗೀಯ ಅರಣ್ಯ ಅಧಿಕಾರಿ ಸಂದೀಪ್ ಕುಮಾರ್ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ನದಿಯ ಮಧ್ಯೆ ಆನೆ ಸಿಲುಕಿಕೊಂಡಿರುವಂತೆ ಮಾಹಿತಿ ಸಿಕ್ಕಿತು. ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಳುಹಿಸಿ ಆನೆಯನ್ನು ರಕ್ಷಣೆ ಮಾಡಲಾಗಿದೆ. ಆನೆಯ ಚಲನವಲನದ ಬಗ್ಗೆ ನಿಗಾ ಇಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿನ ಪ್ರವಾಹದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಭಾರತ ಹವಾಮಾನ ಇಲಾಖೆ ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹೇಳಿದೆ.

ಇದನ್ನೂ ಓದಿ:

Viral Video: ಮರಿ ಆನೆಯನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದ ತಮಿಳುನಾಡು ರಕ್ಷಣಾ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋವಿದು

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Published On - 8:18 am, Wed, 20 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ