AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು

ಉಕ್ಕಿ ಹರಿಯುತ್ತಿರುವ ಗೌಲಾ ನದಿಯ ನಡುವೆ ಆನೆಯೊಂದು ಸಿಲುಕಿಕೊಂಡು ದಿಕ್ಕು ತೋಚದೇ ಪರದಾಡುತ್ತಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ.

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು
ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಆನೆ ಸಿಲುಕಿಕೊಂಡಿರುವ ದೃಶ್ಯ
TV9 Web
| Edited By: |

Updated on:Oct 20, 2021 | 8:20 AM

Share

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯು ರಾಜ್ಯಾದ್ಯಂತ ಅಸ್ಥವ್ಯಸ್ಥ ಉಂಟು ಮಾಡಿದೆ. ಅದೆಷ್ಟೋ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಭಾರೀ ಮಳೆಯ ನಡುವೆ ಗೌಲಾ ನದಿಯಲ್ಲಿ ಆನೆಯೊಂದು ಸಿಲುಕಿಕೊಂಡಿತ್ತು. ಪ್ರವಾಹದ ಮಧ್ಯೆ ದಾರಿ ತೋಚದೇ ಪರದಾಡುತ್ತಿತ್ತು. ಉಕ್ಕಿ ಹರಿಯುತ್ತಿರುವ ಗೌಲಾ ನದಿಯಲ್ಲಿ ಆನೆ ಸಿಲುಕಿಕೊಂಡಿರುವ ದೃಶ್ಯವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ.

ತಡ ಮಾಡದೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯನ್ನು ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಡಿಯೋವನ್ನು ಹರಿಬಿಟ್ಟ ಟ್ವಿಟರ್ ಬಳಕೆದಾರ ಅಭಿಷೇಕ್ ಪಾಂಡೆ ಹೀಗೆ ಬರೆದಿದ್ದಾರೆ. ಉಕ್ಕುತ್ತಿರುವ ಗೌಲಾ ನದಿಯಲ್ಲಿ ಆನೆಯೊಂದು ಸಿಲುಕಿಕೊಂಡಿದೆ. ಅರಣ್ಯ ಇಲಾಖೆಯ ತಂಡ ಆನೆಯನ್ನು ರಕ್ಷಿಸಿದ್ದಾರೆ. ಕಾಡಿಗೆ ಮರಳಿ ಸೇರುವಂತೆ ದಾರಿ ತೋರಿಸಿದ್ದಾರೆ ಎಂದು ಬರೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಆನೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಕ್ಕಾಗಿ ಅರಣ್ಯ ಇಲಾಖೆಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ, ಆನೆ ರಕ್ಷಿಸಲು ಮುಂದಾದ ಸಿಬ್ಬಂದಿ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಭಾಗೀಯ ಅರಣ್ಯ ಅಧಿಕಾರಿ ಸಂದೀಪ್ ಕುಮಾರ್ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ನದಿಯ ಮಧ್ಯೆ ಆನೆ ಸಿಲುಕಿಕೊಂಡಿರುವಂತೆ ಮಾಹಿತಿ ಸಿಕ್ಕಿತು. ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಳುಹಿಸಿ ಆನೆಯನ್ನು ರಕ್ಷಣೆ ಮಾಡಲಾಗಿದೆ. ಆನೆಯ ಚಲನವಲನದ ಬಗ್ಗೆ ನಿಗಾ ಇಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿನ ಪ್ರವಾಹದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಭಾರತ ಹವಾಮಾನ ಇಲಾಖೆ ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹೇಳಿದೆ.

ಇದನ್ನೂ ಓದಿ:

Viral Video: ಮರಿ ಆನೆಯನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದ ತಮಿಳುನಾಡು ರಕ್ಷಣಾ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋವಿದು

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Published On - 8:18 am, Wed, 20 October 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ