AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುನ್ನಾರ್​ ರಸ್ತೆಯಲ್ಲಿ ಬಸ್​ ಎದುರು ಬಂದು ಗಾಜು ಒಡೆದ ಕಾಡಾನೆ; ಚಾಲಕ ಮಾಡಿದ್ದೇನು?

1 ನಿಮಿಷ 34 ಸೆಕೆಂಡುಗಳ ಈ ವಿಡಿಯೋದಲ್ಲಿ ಆನೆ ಬಸ್​ನ ಹತ್ತಿರವೇ ಬಂದು ನಿಲ್ಲುತ್ತದೆ. ಇದನ್ನು ಕಂಡು ಚಾಲಕ ಶಾಕ್ ಆಗುತ್ತಾನೆ.

Viral Video: ಮುನ್ನಾರ್​ ರಸ್ತೆಯಲ್ಲಿ ಬಸ್​ ಎದುರು ಬಂದು ಗಾಜು ಒಡೆದ ಕಾಡಾನೆ; ಚಾಲಕ ಮಾಡಿದ್ದೇನು?
ಆನೆಯ ವಿಡಿಯೋ ವೈರಲ್
TV9 Web
| Edited By: |

Updated on: Apr 06, 2022 | 7:56 PM

Share

ಕಾಡಿನ ಮಧ್ಯೆ ಹೋಗುವಾಗ ಇದ್ದಕ್ಕಿದ್ದಂತೆ ಆನೆ (Elephant) ಸಿಕ್ಕಿದರೆ ಏನಾಗುತ್ತದೆ? ಹೀಗೆ ವನ್ಯಜೀವಿಗಳು ಕಂಡಾಗ ನಾವು ಶಾಂತವಾಗಿ ಇರುವುದು ಬಹಳ ಮುಖ್ಯ. ಕಾಡು ಪ್ರಾಣಿಗಳಿಂದ ನಾವು ದೂರ ಇದ್ದಷ್ಟೂ ಪ್ರಾಣಿಗಳು ಹೆಚ್ಚು ನೆಮ್ಮದಿಯಾಗಿರುತ್ತವೆ. ಕೇರಳದಲ್ಲಿ ಆನೆಯೊಂದು ಬಸ್‌ ಎದುರು ಬಂದು ನಿಂತ ಭಯಾನಕ ದೃಶ್ಯದ ವಿಡಿಯೋ ವೈರಲ್ (Video Viral) ಆಗಿದೆ. ತನ್ನೆದುರು ಬಂದು ನಿಂತ ಆನೆಯನ್ನು ನೋಡಿ ಬಸ್ ಚಾಲಕ ಆಘಾತಕ್ಕೊಳಗಾಗಿದ್ದಾರೆ. ಆದರೆ, ಆತ ಆ ಕ್ಷಣದಲ್ಲಿ ತೋರಿದ ತಾಳ್ಮೆ, ಬುದ್ಧಿವಂತಿಕೆಗೆ ಅನೇಕ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಸ್‌ ಸಾಗುತ್ತಿರುವಾಗ ಕಾಡಾನೆಯೊಂದು ದೂರದಲ್ಲಿ ನಿಂತಿರುವ ದೃಶ್ಯದಿಂದ ವಿಡಿಯೋ ಶುರುವಾಗುತ್ತದೆ. 1 ನಿಮಿಷ 34 ಸೆಕೆಂಡುಗಳ ಈ ವಿಡಿಯೋದಲ್ಲಿ ಆನೆ ಬಸ್​ನ ಹತ್ತಿರವೇ ಬಂದು ನಿಲ್ಲುತ್ತದೆ. ಇದನ್ನು ಕಂಡು ಚಾಲಕ ಶಾಕ್ ಆಗುತ್ತಾನೆ. ಆದರೂ ತನ್ನ ಹೆದರಿಕೆಯನ್ನು ತೋರಿಸಿಕೊಳ್ಳದ ಆತ ಶಾಂತವಾಗಿಯೇ ಇದ್ದು, ಆನೆ ಹೋಗುವವರೆಗೂ ಕಾದಿದ್ದಾನೆ. ಬಹಳ ಹೊತ್ತು ಅಲ್ಲೇ ನಿಂತಿದ್ದ ಆನೆ ಆ ಬಸ್​ನ ಎದುರಿನ ಗಾಜನ್ನು ಒಡೆದಿದೆ. ನಂತರ ಅಲ್ಲಿಂದ ಪಕ್ಕಕ್ಕೆ ಸರಿದುಹೋಗಿದೆ.

ಆ ಚಾಲಕ ಯಾರೆಂದು ಗೊತ್ತಾಗಿಲ್ಲ. ಆದರೆ, ಆ ವಿಡಿಯೋವನ್ನು ನೋಡಿದರೆ ಅಲ್ಲಿ ಆಗಾಗ ಈ ರೀತಿ ಆನೆಗಳು ಎದುರಾಗುವುದು ಸಾಮಾನ್ಯವಾಗಿದ್ದು, ಚಾಲಕರಿಗೆ ಅದು ಅಭ್ಯಾಸವಾಗಿಬಿಟ್ಟಿದೆ ಎನಿಸುತ್ತದೆ. ಮುನ್ನಾರ್​ನಿಂದ ಉಡುಮಲ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ಬಸ್‌ಗೆ ಮುನ್ನಾರ್‌ ಡಿವೈಎಸ್‌ಪಿ ಕಚೇರಿ ಬಳಿ ಕಾಡಾನೆಯೊಂದು ಎದುರಾಗಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಚಾಲಕ, ಯಾವುದೇ ರೀತಿ ಹಾರ್ನ್ ಮಾಡದೆ​ ಆನೆ ಸ್ಥಳದಿಂದ ತೆರಳುವವರೆಗೆ ಕಾದು ಒಂಟಿ ಸಲಗ ಪಕ್ಕಕ್ಕೆ ಹೋದ ಬಳಿಕ ವಾಹನ ಚಲಾಯಿಸಿದ್ದಾರೆ.

ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ಈ ವಿಡಿಯೋ 15 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಬಸ್ ಚಾಲಕ ತೋರಿದ ಧೈರ್ಯವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಒಡವೆ ಕದಿಯಲು ತಾನೇ ಕೊರೆದು ರಂಧ್ರದಲ್ಲಿ ಸಿಕ್ಕಿಹಾಕಿಕೊಂಡ ಕಳ್ಳ; ಆಮೇಲೇನಾಯ್ತು?

Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್